September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಜೇನು ಕೃಷಿ ತರಬೇತಿಯ ಸಮಾರೋಪ ಸಮಾರಂಭ

ಉಜಿರೆ : ಇತ್ತೀಚಿನ ದಿನಗಳಲ್ಲಿ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಯುವಕರು ಜೇನುಕೃಷಿ ತರಬೇತಿಯಲ್ಲಿ ಭಾಗವಹಿಸುತ್ತಿರುವುದು ತುಂಬಾ ಸಂತೋಷದ ವಿಷಯವಾಗಿದೆ. ಜೇನು ಹೇಗಿದೆ ಎಂದು ನೋಡಬೇಕಾದರೆ ಅದರ ಸಿಹಿಯನ್ನು ಸವಿಯಬೇಕು, ಬಿಸಿ ಅರ್ಥವಾಗಬೇಕಾದರೆ ಬೆಂಕಿ ಮುಟ್ಟು ಬೇಕು ಹಾಗೇಯೇ ರುಡ್ ಸೆಟ್ ಸಂಸ್ಥೆಗೆ ಬಂದರೆ ಮಾತ್ರ ಇಲ್ಲಿನ ವಿಶೇಷತೆ ತಿಳಿಯಲು ಸಾಧ್ಯ. ಒಂದು ದೇಶ ಸುಭಿಕ್ಷೆ ಆಗಬೇಕಾದರೆ ಅಲ್ಲಿನ ಜನ ವಿದ್ಯಾವಂತರಾದರೆ ಸಾಲದು ಜನ ಪ್ರಜ್ಞಾವಂತರಗಾಬೇಕು. ನಾವು ಏನು ಕಲಿಯುತ್ತೇವೆ ಅದರಲ್ಲಿ ಶಿಸ್ತು, ಬದ್ಧತೆ ನಿರ್ಧರಿಸುವ ಸಾಮರ್ಥ್ಯ ಇದ್ದರೆ ಜೇನು ಕೃಷಿ ಮಾಡಲು ಸಾದ್ಯ. ಜೊತೆಗೆ ಆಧುನಿಕತೆಯ ಹೊಸ ಆವಿಷ್ಕಾರಗಳನ್ನು ಆಳವಡಿಸಿಕೊಂಡು ಸುಧಾರಣೆಗಳನ್ನು ಮಾಡಿಕೊಂಡು ಮುಂದರೆಯಬೇಕು. ಜೇನ ಅನ್ನು ಋರ್ತುಮಾನ ಮತ್ತು ಪ್ರಾದೇಶಿಕತೆಗೆ ಹಾಗೂ ಪರಿಸರದ ಬೆಳೆಗಳು ಇದೆ ಅವುಗಳಿಗೆ ಅನುಗುಣವಾಗಿ ಜೇನು ಕೃಷಿ ಮಾಡಬೇಕು. ಜೇನು ಬುದ್ದಿವಂತಹ ಹುಳು ಅದರ ಜೊತೆಗೆ ನಾವು ಮಾತನಾಡಲು ಕಲಿಯಬೇಕು. ಅಲ್ಲದೇ ಜೇನಿನ ಉಪ ಉತ್ಪನ್ನಗಳನ್ನು ತಯಾರಿಸುವ ಯೋಜನೆಗಳನ್ನು ಸಹ ಯೋಚನೆ ಮಾಡಿಕೊಳ್ಳಿ. ಜೇನು ಕೃಷಿ ಮಾಡುವಾಗ ಅತೀ ಕಡಿಮೆ ರಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳನ್ನು ಬಳಸುವ ಸ್ಥಳದಲ್ಲಿ ಮಾಡಿ. ಮಾರುಕಟ್ಟೆಯಲ್ಲಿ ಇರುವ ಶುದ್ಧ ಜೇನು ತುಪ್ಪ ಮತ್ತು ನಕಲಿ ಜೇನು ತುಪ್ಪದ ವ್ಯತ್ಯಾಸವನ್ನು ಸಹ ತಿಳಿದುಕೊಳ್ಳಬೇಕು. ಜೇನಿನ ಪ್ರತಿದಿನದ ದಿನಚರಿಯನ್ನು ಅಧ್ಯಯನ ಮಾಡಿ ಅದರ ಕಾರ್ಯನಿರ್ವಾಣೆಯ ವಿಧಾನವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಯಶಸ್ಸು ಪಡೆಯಬಹುದು ಎಂದು ಉಜಿರೆಯ ಪ್ರಗತಿ ಪರ ಕೃಷಿಕ ಜಗದೀಶ್ ಪ್ರಸಾದ್ ಅಭಿಪ್ರಾಯ ಪಟ್ಟರು.

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 10 ದಿನಗಳ ಕಾಲ ನಡೆದೆ ಜೇನು ಕೃಷಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಮಾಣ ಪತ್ರ ವಿತ್ತರಿಸಿ ತಮ್ಮ ಅನುಭವದ ಹಂಚಿಕೊಂಡು ತರಬೇತಿಯನ್ನು ಉಪಯೋಗಿಸಿಕೊಂಡು ಯಶಸ್ವಿಯಾಗಿ ಉದ್ಯಮ ನಡೆಸಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ.ವಿಜಯ ಕುಮಾರ್ ವಹಿಸಿ, ಮಾತನಾಡಿದರು ಸರಕಾರ ಮತ್ತು ಬ್ಯಾಂಕಿನ ಹೊಸ ಯೋಜನೆಯ ಮೂಲಕ ಸಹಾಯಧನ, ಸಾಲ ಪಡೆದುಕೊಂಡು ಉದ್ಯಮ ಆರಂಭಿಸಿ, ಏನಾದರೂ ಮಾಹಿತಿ-ಮಾರ್ಗದರ್ಶನ ಬೇಕಾದರೆ ಸಂಸ್ಥೆಯನ್ನು ಸಂಪರ್ಕಿಸಿ ಎಂದು ಶುಭ ಕೋರಿದರು.

ಅತಿಥಿಗಳನ್ನು ರುಡ್ ಸೆಟ್ ಸಂಸ್ಥೆಯ ನಿರ್ದೇಶಕ ಅಜೇಯ ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿದರು ಉಪನ್ಯಾಸಕ ಕೆ.ಕರುಣಾಕರ ಜೈನ್ ವಂದಿಸಿದರು. ದಿನೇಶ್ ವಿಟ್ಲ ಪ್ರಾರ್ಥನೆ ಮಾಡಿದರು. ಶಿಬಿರಾರ್ಥೀಗಳಾದ ಸುದೀರ್ ಸಾಲ್ಯಾನ್, ರೋಹಿತ್, ಖಲೀಲ್, ಸುಬ್ರಮಣ್ಯ ತನ್ನ ತರಬೇತಿಯ ಅನುಭವ ಹಂಚಿಕೊಂಡರು.

Related posts

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾರುಗಳ ನಡುವೆ ಡಿಕ್ಕಿ: ಓರ್ವನ ಸ್ಥಿತಿ ಗಂಭೀರ

Suddi Udaya

ಉಜಿರೆ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿ ಸಾವು

Suddi Udaya

ಅರಸಿನಮಕ್ಕಿ ವಲಯ ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘಕ್ಕೆ ವಾರ್ಷಿಕ ಲೆಕ್ಕ ಪರಿಶೋಧನೆಯ ಗ್ರೇಡಿಂಗ್ ಪತ್ರ ವಿತರಣೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಪ್ರಥಮ ಸುತ್ತಿನ ವಾರ್ಡ್ ಸಭೆ

Suddi Udaya

ಗುರುವಾಯನಕೆರೆ ಪ್ರಾ.ಕೃ.ಪ. ಸಹಕಾರಿ ಸಂಘದ ಅಧ್ಯಕ್ಷರಾಗಿ ಮುಗುಳಿ ನಾರಾಯಣ ಭಟ್, ಉಪಾಧ್ಯಕ್ಷರಾಗಿ ವಡಿವೇಲು

Suddi Udaya
error: Content is protected !!