July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಅರ್ಹ ಕುಟುಂಬಗಳಿಗೆ ಕೃಷಿಗೆ ಸಂಬಂಧಪಟ್ಟ ಉಪಕರಣ ವಿತರಣೆ

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಕೆಲವು ಅರ್ಹ ಕುಟುಂಬಗಳಿಗೆ ಉಚಿತವಾಗಿ ಕೃಷಿಗೆ ಸಂಬಂಧಪಟ್ಟ ಉಪಕರಣಗಳನ್ನು ವನ್ಯಜೀವಿ ಸಂರಕ್ಷಣಾ (wcs) ವತಿಯಿಂದ ವಿತರಿಸಲಾಯಿತು.

ಸಂಸ್ಥೆಯ ಕ್ಷೇತ್ರಾಧಿಕಾರಿಯಾದ ಕೆ.ರಾಮಚಂದ್ರ ಭಟ್ ಸಂಸ್ಥೆಯ ಯೋಜನೆಗಳ ಮಾಹಿತಿ ನೀಡಿ ಉಪಕರಣಗಳನ್ನು ವಿತರಿಸಿದರು. ಪ್ರಗತಿಪರ ಕೃಷಿಕರಾದ ಹಾಗೂ ವೇಣೂರು ಲಯನ್ಸ್ ಕ್ಲಬ್ ನ ಅಧ್ಯಕ್ಷ ಲ| ಹರೀಶ್ ಕುಮಾರ್ ತೋಟಗಾರಿಕ ಬೆಳೆಗಳ ಬಗ್ಗೆ ಮಾಹಿತಿ ನೀಡಿದರು. ಸೀತಾ ಶ್ರೀರಾಮ ಡ್ರೈವಿಂಗ್ ಸ್ಕೂಲಿನ ಮಾಲೀಕರು ಹಾಗೂ ಲಯನ್ಸ್ ಕ್ಲಬ್ ನ ನಿಕಟ ಪೂರ್ವ ಅಧ್ಯಕ್ಷ ನಿರಂಜನ್ ವೇಣೂರು ವಾಹನ ಚಾಲನ ತರಬೇತಿ ನೀಡಿದರು. ಕೆ.ರಾಮಚಂದ್ರ ಭಟ್ ಸ್ವಾಗತಿಸಿ ಪ್ರಮಿಳಾ ಆರ್ ಭಟ್ ವಂದಿಸಿದರು. ಕಾರ್ಯಕ್ರಮ ಶ್ರೀ ದೇವಿ ಕೃಪಾ ಕುತ್ಲೂರಿನ ಕುಕ್ಕುಜೆ ಯಲ್ಲಿ ನಡೆಯಿತು.

Related posts

ಗೇರುಕಟ್ಟೆ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ವಿಧಾನಸಭೆಯಲ್ಲಿ ಪ್ರತಿಧ್ವನಿ; ತ್ವರಿತ ತನಿಖೆಗೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ನೆರಿಯ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ನೀಲಯ್ಯ ಮಲೆಕುಡಿಯ ನಿಧನ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಕೊಲ್ಪಾಡಿ ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಮೇಘಾಲಯ ರಾಜ್ಯದ ಸಹಕಾರ ಇಲಾಖೆಯ ಅಧಿಕಾರಿಗಳಿಂದ ಅಧ್ಯಯನ ಪ್ರವಾಸ

Suddi Udaya

ಅ28-ನ.3: ಕೊಕ್ಕಡದಲ್ಲಿ 69ನೇ ವರ್ಷದ ಸಾರ್ವಜನಿಕ ನಗರ ಭಜನಾ ಸಪ್ತಾಹ

Suddi Udaya

ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಎ ಸಿ ಎಫ್ ಭೇಟಿ

Suddi Udaya
error: Content is protected !!