25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಧರ್ಮಸ್ಥಳ ಯಕ್ಷಗಾನ ಮೇಳ: ಸೇವೆ ಬಯಲಾಟ ಪ್ರದರ್ಶನ

ಧರ್ಮಸ್ಥಳ : ನಾಡಿನ ಪವಿತ್ರ ಕ್ಷೇತ್ರ  ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200 ವರ್ಷಗಳ ಭವ್ಯ ಇತಿಹಾಸ ಮತ್ತು ಪರಂಪರೆ ಇದೆ.
(ನ.21) ಇಂದಿನಿಂದ 2025ರ ಮೇ 23ರ ವರೆಗೆ ಭಕ್ತಾದಿಗಳ ವತಿಯಿಂದ ಸೇವೆ ಬಯಲಾಟ ಪ್ರದರ್ಶನ ಆಯೋಜಿಸಲಾಗಿದೆ.
ಕಳೆದ ಏಳು ವರ್ಷಗಳಿಂದ ಸಂಜೆ ಗಂಟೆ 7 ರಿಂದ ರಾತ್ರಿ 12 ಗಂಟೆ ವರೆಗೆ ಕಾಲಮಿತಿಯ ಬಯಲಾಟ ಪ್ರದರ್ಶನ ಆಯೋಜಿಸಲಾಗುತ್ತಿದೆ. ಇದರಿಂದಾಗಿ ಕಲಾಭಿಮಾನಿ ಪ್ರೇಕ್ಷಕರಿಂದಲೂ ಉತ್ತಮ ಪ್ರತಿಕ್ರಿಯೆ, ಪ್ರೋತ್ಸಾಹ ಬರುತ್ತಿದೆ. ಕಲಾವಿದರಿಗೂ  ಹೆಚ್ಚಿನ ಅಧ್ಯಯನ, ಅಭ್ಯಾಸಕ್ಕೂ ಅನುಕೂಲವಾಗುತ್ತದೆ.
ಸಾಂಪ್ರದಾಯಿಕ ವೇಷಭೂಷಣಗಳು, ಜಾನಪದ ಶೈಲಿಯ ಪರಂಪರೆಯ ಪ್ರದರ್ಶನ, ಕೇವಲ ಪೌರಾಣಿಕ ಪ್ರಸಂಗಗಳ ಪ್ರದರ್ಶನ ಧರ್ಮಸ್ಥಳ ಮೇಳದ ವೈಶಿಷ್ಟ್ಯವಾಗಿದೆ. ಸೇವೆ ಬಯಲಾಟ ಪ್ರದರ್ಶನದೊಂದಿಗೆ ಧರ್ಮಪ್ರಭಾವನೆ ಹಾಗೂ ನೈತಿಕ ಮೌಲ್ಯಗಳ ಉದ್ದೀಪನಕ್ಕೂ ಪ್ರೋತ್ಸಾಹ ನೀಡಲಾಗುತ್ತದೆ.


ಸೇವೆ ಬಯಲಾಟ ಪ್ರದರ್ಶನದ ಊರುಗಳಲ್ಲಿ ಮೇಳದ ಜೊತೆ ಇರುವ ಶ್ರೀ ಮಹಾಗಣಪತಿ ದೇವರನ್ನು ವೈಭವದ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಈ ವೇಳೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು.

Related posts

ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆ ಪ.ಪೂ. ಕಾಲೇಜು ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಭಗವದ್ಗೀತೆ ಪಠಣ ಸ್ಪರ್ಧೆ: ಧರ್ಮಸ್ಥಳದ ಡಾ. ಶೌರ್ಯ ಎಸ್.ವಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಶಾಸಕ ಹರೀಶ್ ಪೂಂಜರ‌ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲು

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಕಳಿಯ ನಿವಾಸಿ ಶಿವರಾಜ್ ಎಂ. ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್‌ ರಕ್ತದಾನ ಶಿಬಿರ

Suddi Udaya

ಉಜಿರೆ ಹಳೆಪೇಟೆಯಲ್ಲಿ ಫ್ಯಾಬ್ರಿಕ್ ಲೂಮ್ ರೆಡಿಮೇಡ್ ಶಾಪ್ ಉದ್ಘಾಟನೆ

Suddi Udaya
error: Content is protected !!