25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಧರ್ಮಸ್ಥಳ ಯಕ್ಷಗಾನ ಮೇಳ: ಸೇವೆ ಬಯಲಾಟ ಪ್ರದರ್ಶನ

ಧರ್ಮಸ್ಥಳ : ನಾಡಿನ ಪವಿತ್ರ ಕ್ಷೇತ್ರ  ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200 ವರ್ಷಗಳ ಭವ್ಯ ಇತಿಹಾಸ ಮತ್ತು ಪರಂಪರೆ ಇದೆ.
(ನ.21) ಇಂದಿನಿಂದ 2025ರ ಮೇ 23ರ ವರೆಗೆ ಭಕ್ತಾದಿಗಳ ವತಿಯಿಂದ ಸೇವೆ ಬಯಲಾಟ ಪ್ರದರ್ಶನ ಆಯೋಜಿಸಲಾಗಿದೆ.
ಕಳೆದ ಏಳು ವರ್ಷಗಳಿಂದ ಸಂಜೆ ಗಂಟೆ 7 ರಿಂದ ರಾತ್ರಿ 12 ಗಂಟೆ ವರೆಗೆ ಕಾಲಮಿತಿಯ ಬಯಲಾಟ ಪ್ರದರ್ಶನ ಆಯೋಜಿಸಲಾಗುತ್ತಿದೆ. ಇದರಿಂದಾಗಿ ಕಲಾಭಿಮಾನಿ ಪ್ರೇಕ್ಷಕರಿಂದಲೂ ಉತ್ತಮ ಪ್ರತಿಕ್ರಿಯೆ, ಪ್ರೋತ್ಸಾಹ ಬರುತ್ತಿದೆ. ಕಲಾವಿದರಿಗೂ  ಹೆಚ್ಚಿನ ಅಧ್ಯಯನ, ಅಭ್ಯಾಸಕ್ಕೂ ಅನುಕೂಲವಾಗುತ್ತದೆ.
ಸಾಂಪ್ರದಾಯಿಕ ವೇಷಭೂಷಣಗಳು, ಜಾನಪದ ಶೈಲಿಯ ಪರಂಪರೆಯ ಪ್ರದರ್ಶನ, ಕೇವಲ ಪೌರಾಣಿಕ ಪ್ರಸಂಗಗಳ ಪ್ರದರ್ಶನ ಧರ್ಮಸ್ಥಳ ಮೇಳದ ವೈಶಿಷ್ಟ್ಯವಾಗಿದೆ. ಸೇವೆ ಬಯಲಾಟ ಪ್ರದರ್ಶನದೊಂದಿಗೆ ಧರ್ಮಪ್ರಭಾವನೆ ಹಾಗೂ ನೈತಿಕ ಮೌಲ್ಯಗಳ ಉದ್ದೀಪನಕ್ಕೂ ಪ್ರೋತ್ಸಾಹ ನೀಡಲಾಗುತ್ತದೆ.


ಸೇವೆ ಬಯಲಾಟ ಪ್ರದರ್ಶನದ ಊರುಗಳಲ್ಲಿ ಮೇಳದ ಜೊತೆ ಇರುವ ಶ್ರೀ ಮಹಾಗಣಪತಿ ದೇವರನ್ನು ವೈಭವದ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಈ ವೇಳೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು.

Related posts

ಅ.2 ರಂದು “ಪುರ್ಸ ಕಟ್ಟುನ ಇನಿ- ಕೋಡೆ – ಎಲ್ಲೆ” ಸಾಕ್ಷ ಚಿತ್ರ ಬಿಡುಗಡೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ಭಾರತ್ ಬೀಡಿ ಕಂಪೆನಿ ಉಳಿಸಿ ಭಾರತ್ ಬೀಡಿ ಕಂಪೆನಿ ಎದುರು ಸಿಐಟಿಯು ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ

Suddi Udaya

ಎನ್ ಡಿ ಎ ಫಲಿತಾಂಶ : ಗುರುವಾಯನಕೆರೆ ಎಕ್ಸೆಲ್ ವಿದ್ಯಾರ್ಥಿಗಳ ಮಹೋನ್ನತ ದಾಖಲೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪಾರೆಂಕಿ ಬಿಸಿಎಂ ಹಾಸ್ಟೆಲ್ ಗೆ ಟಿ.ವಿ. ಕೊಡುಗೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಸ್ಥಾಪನೆಯ ಮತ್ತು ಧರ್ಮಪ್ರಾಂತ್ಯದ ಪ್ರಥಮ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಯಿಯವರ ಧರ್ಮಾಧ್ಯಕ್ಷದೀಕ್ಷೆಯ ರಜತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya
error: Content is protected !!