25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ತೆಲಂಗಾಣ ಸರಕಾರದ ಸಚಿವ ಪೊನ್ನಂ ಪ್ರಭಾಕರ್ ಭೇಟಿ

ಬೆಳ್ತಂಗಡಿ: ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ತೆಲಂಗಾಣ ಸರಕಾರದ ಸಾರಿಗೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪೊನ್ನಂ ಪ್ರಭಾಕರ್ ಅವರು ನ.21ರಂದು ಭೇಟಿ ನೀಡಿದರು.

ಸಂಘದ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿ, ಸಹಕಾರಿ ಸಂಘವೊಂದು ನಗರದಲ್ಲಿ ಸುಂದರವಾದ ಸುಸಜ್ಜಿತ ಸೌಲಭ್ಯಗಳ ಕಟ್ಟಡವನ್ನು ಹೊಂದಿರುವುದಕ್ಕೆ ಹಾಗೂ ಸಂಘದ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಂಘದ ವತಿಯಿಂದ ಸಂಘದ ಉಪಾಧ್ಯಕ್ಷರಾದ ಭಗೀರಥ ಜಿ. ಹಾಗೂ ನಿರ್ದೇಶಕರಾದ ಸುಜೀತಾ ವಿ.ಬಂಗೇರ, ರಕ್ಷಿತ್ ಶಿವರಾಂ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ್ ಕುಮಾರ್ ಅವರು ಪೊನ್ನಂ ಪ್ರಭಾಕರ್ ಅವರನ್ನು ಶಾಲು ಹೊದಿಸಿ, ಪೇಟಾ ತೋಡಿಸಿ, ಗೌರವಿಸಿದರು.

ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಸದಸ್ಯ ಶೇಖರ ಕುಕ್ಕೇಡಿ, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್, ಕೇಂದ್ರ ಕಚೇರಿಯ ವ್ಯವಸ್ಥಾಪಕ ಕೀರ್ತನ್ ಕುಮಾರ್, ಮಾರಾಟ ಅಧಿಕಾರಿ ಶಿವಪ್ರಕಾಶ್, ಮಾನವ ಸಂಪನ್ಮೂಲ ಅಧಿಕಾರಿ ರೂಪಲತಾ, ಕಕ್ಕಿಂಜೆ ಶಾಖಾ ಕಚೇರಿ ವ್ಯವಸ್ಥಾಪಕ ಜಾರಪ್ಪ ಪೂಜಾರಿ, ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ

Suddi Udaya

ದೇಶದ ಆರ್ಥಿಕತೆಯ ಸುಧಾರಣೆಯಲ್ಲಿ ಇಂದಿರಾಗಾಂಧಿ ಮಹತ್ವದ ಕೊಡುಗೆ : ರಕ್ಷಿತ್ ಶಿವರಾಂ

Suddi Udaya

ಶಿವಮೊಗ್ಗ ಜೈಲಿನಿಂದ ಚಿನ್ನಯ್ಯ ಬಿಡುಗಡೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2023

Suddi Udaya

ವೇಣೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5 MVA ಶಕ್ತಿ ಪರಿವರ್ತಕವನ್ನು 12.5 MVA ಸಾಮರ್ಥ್ಯಕ್ಕೆ ಬದಲಾವಣೆ: ಸಾರ್ವಜನಿಕರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya

ಇಂದಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಇಬ್ರಾಹಿಂ ರವರ ಮನೆ ಕುಸಿತ

Suddi Udaya
error: Content is protected !!