September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ತೆಲಂಗಾಣ ಸರಕಾರದ ಸಚಿವ ಪೊನ್ನಂ ಪ್ರಭಾಕರ್ ಭೇಟಿ

ಬೆಳ್ತಂಗಡಿ: ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ತೆಲಂಗಾಣ ಸರಕಾರದ ಸಾರಿಗೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪೊನ್ನಂ ಪ್ರಭಾಕರ್ ಅವರು ನ.21ರಂದು ಭೇಟಿ ನೀಡಿದರು.

ಸಂಘದ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿ, ಸಹಕಾರಿ ಸಂಘವೊಂದು ನಗರದಲ್ಲಿ ಸುಂದರವಾದ ಸುಸಜ್ಜಿತ ಸೌಲಭ್ಯಗಳ ಕಟ್ಟಡವನ್ನು ಹೊಂದಿರುವುದಕ್ಕೆ ಹಾಗೂ ಸಂಘದ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಂಘದ ವತಿಯಿಂದ ಸಂಘದ ಉಪಾಧ್ಯಕ್ಷರಾದ ಭಗೀರಥ ಜಿ. ಹಾಗೂ ನಿರ್ದೇಶಕರಾದ ಸುಜೀತಾ ವಿ.ಬಂಗೇರ, ರಕ್ಷಿತ್ ಶಿವರಾಂ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ್ ಕುಮಾರ್ ಅವರು ಪೊನ್ನಂ ಪ್ರಭಾಕರ್ ಅವರನ್ನು ಶಾಲು ಹೊದಿಸಿ, ಪೇಟಾ ತೋಡಿಸಿ, ಗೌರವಿಸಿದರು.

ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಸದಸ್ಯ ಶೇಖರ ಕುಕ್ಕೇಡಿ, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್, ಕೇಂದ್ರ ಕಚೇರಿಯ ವ್ಯವಸ್ಥಾಪಕ ಕೀರ್ತನ್ ಕುಮಾರ್, ಮಾರಾಟ ಅಧಿಕಾರಿ ಶಿವಪ್ರಕಾಶ್, ಮಾನವ ಸಂಪನ್ಮೂಲ ಅಧಿಕಾರಿ ರೂಪಲತಾ, ಕಕ್ಕಿಂಜೆ ಶಾಖಾ ಕಚೇರಿ ವ್ಯವಸ್ಥಾಪಕ ಜಾರಪ್ಪ ಪೂಜಾರಿ, ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಗುರುಪೂರ್ಣಿಮೆ ಅಂಗವಾಗಿ ಪಾರೆಂಕಿ ವಿದ್ಯಾಸರಸ್ವತಿ ಭಜನಾ ಮಂಡಳಿಯ ತರಬೇತುದಾರ ಸತೀಶ್ ಪೂಂಜಾರವರಿಗೆ ಗುರು ವಂದನೆ

Suddi Udaya

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ: ಇಂದಿನಿಂದ ನೀತಿ ಸಂಹಿತೆ ಜಾರಿ: ದ.ಕ. ಲೋಕಸಭಾ ಕ್ಷೇತ್ರದಲ್ಲಿ ಎ. 26ರಂದು ಮತದಾನ

Suddi Udaya

ಕಡಮ್ಮಾಜೆ ಫಾರ್ಮ್‌ನ ದೇವಿಪ್ರಸಾದ್‌ರಿಗೆ ಜಿಲ್ಲಾ ಮಟ್ಟದ ಸಾಧಕ ರೈತ ಪ್ರಶಸ್ತಿ

Suddi Udaya

ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಚುನಾವಣೆ; ಸತತ ಮೂರನೇ ಅವಧಿಗೆ ಅಧ್ಯಕ್ಷರಾಗಿ ಉದ್ಯಮಿ, ಸಂಘಟಕ ಸುಂದರ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ರತ್ನಾಕರ ಪೂಜಾರಿ ಅವಿರೋಧ ಆಯ್ಕೆ

Suddi Udaya

ಶಿವಮೊಗ್ಗದಲ್ಲಿ ಬಿಎಮ್.ಎಸ್ ಕುಟುಂಬ ಸಂಗಮ: ದ.ಕ. ಜಿಲ್ಲೆಯಿಂದ 200ಕ್ಕೂ ಹೆಚ್ಚು ಕಾರ್ಯಕರ್ತರ ಭಾಗಿ

Suddi Udaya
error: Content is protected !!