23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ತೆಲಂಗಾಣ ಸರಕಾರದ ಸಚಿವ ಪೊನ್ನಂ ಪ್ರಭಾಕರ್ ಭೇಟಿ

ಬೆಳ್ತಂಗಡಿ: ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ತೆಲಂಗಾಣ ಸರಕಾರದ ಸಾರಿಗೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪೊನ್ನಂ ಪ್ರಭಾಕರ್ ಅವರು ನ.21ರಂದು ಭೇಟಿ ನೀಡಿದರು.

ಸಂಘದ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿ, ಸಹಕಾರಿ ಸಂಘವೊಂದು ನಗರದಲ್ಲಿ ಸುಂದರವಾದ ಸುಸಜ್ಜಿತ ಸೌಲಭ್ಯಗಳ ಕಟ್ಟಡವನ್ನು ಹೊಂದಿರುವುದಕ್ಕೆ ಹಾಗೂ ಸಂಘದ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಂಘದ ವತಿಯಿಂದ ಸಂಘದ ಉಪಾಧ್ಯಕ್ಷರಾದ ಭಗೀರಥ ಜಿ. ಹಾಗೂ ನಿರ್ದೇಶಕರಾದ ಸುಜೀತಾ ವಿ.ಬಂಗೇರ, ರಕ್ಷಿತ್ ಶಿವರಾಂ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ್ ಕುಮಾರ್ ಅವರು ಪೊನ್ನಂ ಪ್ರಭಾಕರ್ ಅವರನ್ನು ಶಾಲು ಹೊದಿಸಿ, ಪೇಟಾ ತೋಡಿಸಿ, ಗೌರವಿಸಿದರು.

ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಸದಸ್ಯ ಶೇಖರ ಕುಕ್ಕೇಡಿ, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್, ಕೇಂದ್ರ ಕಚೇರಿಯ ವ್ಯವಸ್ಥಾಪಕ ಕೀರ್ತನ್ ಕುಮಾರ್, ಮಾರಾಟ ಅಧಿಕಾರಿ ಶಿವಪ್ರಕಾಶ್, ಮಾನವ ಸಂಪನ್ಮೂಲ ಅಧಿಕಾರಿ ರೂಪಲತಾ, ಕಕ್ಕಿಂಜೆ ಶಾಖಾ ಕಚೇರಿ ವ್ಯವಸ್ಥಾಪಕ ಜಾರಪ್ಪ ಪೂಜಾರಿ, ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಭಾರೀ ಮಳೆಗೆ ಉಜಿರೆ ಶಿವಾಜಿನಗರದಲ್ಲಿ ಗುಡ್ಡ ಕುಸಿತ: ಮನೆಯವರು ಅಪಾಯದಿಂದ ಪಾರು

Suddi Udaya

ಜೆಸಿಐ ಬೆಳ್ತಂಗಡಿಯಿಂದ ಪ್ರವರ್ತಿತಗೊಂಡು ಜೆಸಿಐ ಉಜಿರೆ ಸಿಟಿ ಘಟಕದ ಮರು ಸ್ಥಾಪನೆ: ಯುವ ಉದ್ಯಮಿ ಮಹಮ್ಮದ್ ಮಿರ್ಷಾದ್ ಅಧ್ಯಕ್ಷರಾಗಿ ಪದ ಸ್ವೀಕಾರ.

Suddi Udaya

ಬಂಗಾಡಿ ಸ.ಹಿ.ಪ್ರಾ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದ ಯೋಗಿಶ್ ಜದ್ಗಲ್ ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ

Suddi Udaya

ವಕ್ಫ್‌ ಕಾಯ್ದೆಯನ್ನು ಶೀಘ್ರವಾಗಿ ತಿದ್ದುಪಡಿ ಮಾಡಬೇಕು ಮತ್ತು ಎಚ್.ಡಿ. ಕುಮಾರಸ್ವಾಮಿಯನ್ನು ವರ್ಣದ ವಿಚಾರವಾಗಿ ನಿಂದಿಸಿದ ಸಚಿವ ಜಮೀರ್ ಅಹ್ಮದ್ ಖಾನ್ ಕ್ಷಮೆಯಾಚಿಸಬೇಕೆಂದು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಗ್ರಹ

Suddi Udaya

ಭೀಕರ ಗಾಳಿ ಮಳೆ : ಹೊಸಂಗಡಿಯಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya
error: Content is protected !!