31.9 C
ಪುತ್ತೂರು, ಬೆಳ್ತಂಗಡಿ
April 9, 2025
ಗ್ರಾಮಾಂತರ ಸುದ್ದಿ

ಮಿತ್ತಬಾಗಿಲು:ಹರ್ಝತ್ ಸೈದಾನಿ ಬೀಬಿ ದರ್ಗಾದಲ್ಲಿ ಮಾಸಿಕ 9 ನೇ ಸ್ವಲಾತ್ ಕಾರ್ಯಕ್ರಮ

  • ವಿಕಾಲಾಂಗರಿಗೆ ನೆರವು-ವಿದ್ಯಾ ಪ್ರೋತ್ಸಾಹ ಧನ ಹಸ್ತಾಂತರ

ಮಿತ್ತಬಾಗಿಲು: ಹರ್ಝತ್ ಸೈದಾನಿ ಬೀಬಿ ದರ್ಗಾ ವಠಾರದಲ್ಲಿ ನ 25 ರಂದು ಗುರುವಾರ ಮಾಸಿಕ 9 ನೇ ಸ್ವಲಾತ್ ಕಾರ್ಯಕ್ರಮ ಜರಗಿದ್ದು ನೂರಾರು ಭಕ್ತರು ಸಾಕ್ಷಿಗಳಾಗಿದ್ದರು.

ಸಂಸ್ಥೆಯು ಅಂಗವಿಕಲರಿಗೆ, ಅಸಹಾಯಕ ನಿರ್ಗತಿಕರಿಗೆ, ವಿಧವೆಯರಿಗೆ, ವಿಧ್ಯಾಭ್ಯಾಸಕ್ಕೆ ಮತ್ತು ಬಡ ಮಕ್ಕಳ ಮದುವೆಗಾಗಿ ಪ್ರತಿ ತಿಂಗಳು ಸಹಾಯಮಾಡುತ್ತಿದ್ದು ಸ್ವಲಾತ್ ಸಂದರ್ಭದಲ್ಲಿ ಸಂಪೂರ್ಣ ಅಂಗವಿಕಲರಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ನಿವಾಸಿಯವರಾದ ನಾರಾಯಣ ಗೌಡ ಎಂಬವರ ಪರವಾಗಿ ಅವರ ಪತ್ನಿ ಶ್ರೀಮತಿ ಕುಸುಮಾವತಿಯವರಿಗೆ 2024ನೇ ಇಸವಿಯ ಜೂನ್ ತಿಂಗಳಿನಿಂದ ಮಾಸಿಕ ರೂ.2000/- ಯಂತೆ ಅಂಗವಿಕಲರಿಗಾಗುವ ಸಹಾಯದನದ ಪ್ರಥಮ ಕಂತನ್ನು ವಿತರಿಸಲಾಯಿತು.

ಅದೇ ರೀತಿ 2024ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ. ಪಿ.ಕವನ ಶ್ರೀ ಎಂಬವಳಿಗೆ ವಿದ್ಯಾಭ್ಯಾಸಕ್ಕಾಗಿ ರೂ.5000/- ಸಹಾಯದವನ್ನು ಅವಳ ಪರವಾಗಿ ಪಾವತಿಸಲಾಯಿತು. ಬೆಳ್ತಂಗಡಿ ವಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮುಷ್ಕನ್ ಕೌಸರ್ ರಾಜ್ಯದಲ್ಲಿ 7 ನೇ Rank ಪಡೆದಿದ್ದು ಅವಳಿಗೆ ರೂ.25000/- ಚೆಕ್ ಮುಖಾಂತರ ವಿತರಿಸಲಾಯಿತು.

Related posts

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ನಾಳ ವರ್ಷವಧಿ ಜಾತ್ರಾ ಮಹೋತ್ಸವ ಲೆಕ್ಕಪತ್ರ ಮಂಡನೆ, ಅಭಿನಂದನೆ ಹಾಗೂ ಅಧಿಕಾರ ಹಸ್ತಾಂತರ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ್ದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹಾಗೂ ಮಾಜಿ ಶಾಸಕ ಜೆ.ಆರ್ ಲೋಬೋ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

Suddi Udaya

ಕಳೆಂಜ ಬಿಜೆಪಿ ಮುಖಂಡನ ಮೇಲಿನ ಹಲ್ಲೆ ಕುರಿತು ಬಿಜೆಪಿ ಮಂಡಲ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಆಟೋ ಚಾಲಕರ ಹಾಗೂ ಸಾರಿಗೆ ನೌಕರರ ಭವಿಷ್ಯದ ಭದ್ರತೆಗಾಗಿ ಯೋಜನೆಗಳನ್ನು ರೂಪಿಸುವಂತೆ ಬಿಎಂಎಸ್ ನ ವೆಹಿಕಲ್ ಯೂನಿಯನ್ ಸಂಘಗಳಿಂದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯವರಿಗೆ ಮನವಿ

Suddi Udaya
error: Content is protected !!