25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಮಿತ್ತಬಾಗಿಲು:ಹರ್ಝತ್ ಸೈದಾನಿ ಬೀಬಿ ದರ್ಗಾದಲ್ಲಿ ಮಾಸಿಕ 9 ನೇ ಸ್ವಲಾತ್ ಕಾರ್ಯಕ್ರಮ

  • ವಿಕಾಲಾಂಗರಿಗೆ ನೆರವು-ವಿದ್ಯಾ ಪ್ರೋತ್ಸಾಹ ಧನ ಹಸ್ತಾಂತರ

ಮಿತ್ತಬಾಗಿಲು: ಹರ್ಝತ್ ಸೈದಾನಿ ಬೀಬಿ ದರ್ಗಾ ವಠಾರದಲ್ಲಿ ನ 25 ರಂದು ಗುರುವಾರ ಮಾಸಿಕ 9 ನೇ ಸ್ವಲಾತ್ ಕಾರ್ಯಕ್ರಮ ಜರಗಿದ್ದು ನೂರಾರು ಭಕ್ತರು ಸಾಕ್ಷಿಗಳಾಗಿದ್ದರು.

ಸಂಸ್ಥೆಯು ಅಂಗವಿಕಲರಿಗೆ, ಅಸಹಾಯಕ ನಿರ್ಗತಿಕರಿಗೆ, ವಿಧವೆಯರಿಗೆ, ವಿಧ್ಯಾಭ್ಯಾಸಕ್ಕೆ ಮತ್ತು ಬಡ ಮಕ್ಕಳ ಮದುವೆಗಾಗಿ ಪ್ರತಿ ತಿಂಗಳು ಸಹಾಯಮಾಡುತ್ತಿದ್ದು ಸ್ವಲಾತ್ ಸಂದರ್ಭದಲ್ಲಿ ಸಂಪೂರ್ಣ ಅಂಗವಿಕಲರಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ನಿವಾಸಿಯವರಾದ ನಾರಾಯಣ ಗೌಡ ಎಂಬವರ ಪರವಾಗಿ ಅವರ ಪತ್ನಿ ಶ್ರೀಮತಿ ಕುಸುಮಾವತಿಯವರಿಗೆ 2024ನೇ ಇಸವಿಯ ಜೂನ್ ತಿಂಗಳಿನಿಂದ ಮಾಸಿಕ ರೂ.2000/- ಯಂತೆ ಅಂಗವಿಕಲರಿಗಾಗುವ ಸಹಾಯದನದ ಪ್ರಥಮ ಕಂತನ್ನು ವಿತರಿಸಲಾಯಿತು.

ಅದೇ ರೀತಿ 2024ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ. ಪಿ.ಕವನ ಶ್ರೀ ಎಂಬವಳಿಗೆ ವಿದ್ಯಾಭ್ಯಾಸಕ್ಕಾಗಿ ರೂ.5000/- ಸಹಾಯದವನ್ನು ಅವಳ ಪರವಾಗಿ ಪಾವತಿಸಲಾಯಿತು. ಬೆಳ್ತಂಗಡಿ ವಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮುಷ್ಕನ್ ಕೌಸರ್ ರಾಜ್ಯದಲ್ಲಿ 7 ನೇ Rank ಪಡೆದಿದ್ದು ಅವಳಿಗೆ ರೂ.25000/- ಚೆಕ್ ಮುಖಾಂತರ ವಿತರಿಸಲಾಯಿತು.

Related posts

ಬಹರೈನ್, ದುಬೈಯಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 169 ನೇ ಜಯಂತಿಯಲ್ಲಿ ಬ್ರಹ್ಮಾನಂದ ಶ್ರೀಗಳಿಂದ ಆಶೀರ್ವಚನ

Suddi Udaya

ಬೆಳ್ತಂಗಡಿ : ಕಾರು, ದ್ವಿಚಕ್ರ ವಾಹನ ಅಪಘಾತ

Suddi Udaya

ಬೆಳ್ತಂಗಡಿ ಫೆಡರೇಷನ್ ಆಫ್ ಕರ್ನಾಟಕ ಆಟೋ ಡ್ರೈವರ್ಸ್ ಯೂನಿಯನ್ ವತಿಯಿಂದ ಬಿ.ಜಿ ಆಟೋ ಡ್ರೈವರ್ಸ್ ಯೂನಿಯನ್ ಮಹಾಸಭೆ,

Suddi Udaya

ಮೇಲಂತಬೆಟ್ಟು ನಿಸರ್ಗ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯೆ ಲಕ್ಷ್ಮಿ ಸೇರಿದಂತೆ ದ.ಕ. ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರಿಗೆ ರಾಷ್ಟ್ರಪತಿ ಭೇಟಿಗೆ ಅವಕಾಶ

Suddi Udaya

ಕಡಿರುದ್ಯಾವರ: ಪಣಿಕಲ್ಲು ಎಂಬಲ್ಲಿ ತೋಟಕ್ಕೆ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ಮಡಂತ್ಯಾರು: ಸಾಲುಮರ ಬಳಿ ನೀರಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತ

Suddi Udaya
error: Content is protected !!