25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಮಿತ್ತಬಾಗಿಲು:ಹರ್ಝತ್ ಸೈದಾನಿ ಬೀಬಿ ದರ್ಗಾದಲ್ಲಿ ಮಾಸಿಕ 9 ನೇ ಸ್ವಲಾತ್ ಕಾರ್ಯಕ್ರಮ

  • ವಿಕಾಲಾಂಗರಿಗೆ ನೆರವು-ವಿದ್ಯಾ ಪ್ರೋತ್ಸಾಹ ಧನ ಹಸ್ತಾಂತರ

ಮಿತ್ತಬಾಗಿಲು: ಹರ್ಝತ್ ಸೈದಾನಿ ಬೀಬಿ ದರ್ಗಾ ವಠಾರದಲ್ಲಿ ನ 25 ರಂದು ಗುರುವಾರ ಮಾಸಿಕ 9 ನೇ ಸ್ವಲಾತ್ ಕಾರ್ಯಕ್ರಮ ಜರಗಿದ್ದು ನೂರಾರು ಭಕ್ತರು ಸಾಕ್ಷಿಗಳಾಗಿದ್ದರು.

ಸಂಸ್ಥೆಯು ಅಂಗವಿಕಲರಿಗೆ, ಅಸಹಾಯಕ ನಿರ್ಗತಿಕರಿಗೆ, ವಿಧವೆಯರಿಗೆ, ವಿಧ್ಯಾಭ್ಯಾಸಕ್ಕೆ ಮತ್ತು ಬಡ ಮಕ್ಕಳ ಮದುವೆಗಾಗಿ ಪ್ರತಿ ತಿಂಗಳು ಸಹಾಯಮಾಡುತ್ತಿದ್ದು ಸ್ವಲಾತ್ ಸಂದರ್ಭದಲ್ಲಿ ಸಂಪೂರ್ಣ ಅಂಗವಿಕಲರಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ನಿವಾಸಿಯವರಾದ ನಾರಾಯಣ ಗೌಡ ಎಂಬವರ ಪರವಾಗಿ ಅವರ ಪತ್ನಿ ಶ್ರೀಮತಿ ಕುಸುಮಾವತಿಯವರಿಗೆ 2024ನೇ ಇಸವಿಯ ಜೂನ್ ತಿಂಗಳಿನಿಂದ ಮಾಸಿಕ ರೂ.2000/- ಯಂತೆ ಅಂಗವಿಕಲರಿಗಾಗುವ ಸಹಾಯದನದ ಪ್ರಥಮ ಕಂತನ್ನು ವಿತರಿಸಲಾಯಿತು.

ಅದೇ ರೀತಿ 2024ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ. ಪಿ.ಕವನ ಶ್ರೀ ಎಂಬವಳಿಗೆ ವಿದ್ಯಾಭ್ಯಾಸಕ್ಕಾಗಿ ರೂ.5000/- ಸಹಾಯದವನ್ನು ಅವಳ ಪರವಾಗಿ ಪಾವತಿಸಲಾಯಿತು. ಬೆಳ್ತಂಗಡಿ ವಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮುಷ್ಕನ್ ಕೌಸರ್ ರಾಜ್ಯದಲ್ಲಿ 7 ನೇ Rank ಪಡೆದಿದ್ದು ಅವಳಿಗೆ ರೂ.25000/- ಚೆಕ್ ಮುಖಾಂತರ ವಿತರಿಸಲಾಯಿತು.

Related posts

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮ ದೈವ ಸಪರಿವಾರ ದೈವಸ್ಥಾನ ಕಾಲಾವಧಿ ನೇಮೋತ್ಸವದ ಸಮಾಲೋಚನಾ ಸಭೆ

Suddi Udaya

ಮಡಂತ್ಯಾರು: ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಜೇನು ಕೃಷಿ ತರಬೇತಿ ಹಾಗೂ ಭತ್ತದ ಕೃಷಿ ಉತ್ಪಾದನೆ ಬಗ್ಗೆ ಮಾಹಿತಿ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅದಿತಿ ಮುಗೆರೋಡಿ ತೇರ್ಗಡೆ

Suddi Udaya

ಎಸ್ ಎಸ್ ಎಲ್ ಸಿ ಪರೀಕ್ಷೆ: ಬೆಳ್ತಂಗಡಿ ಎಸ್.ಡಿ .ಎಮ್ ಆಂ.ಮಾ. ಶಾಲೆಗೆ ಸತತ ಎಂಟನೇ ಬಾರಿ ಶೇ100 ಫಲಿತಾಂಶ

Suddi Udaya

ಮಿತ್ತಬಾಗಿಲು ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರದಲ್ಲಿ ನಡೆಯಿತೊಂದು ಪವಾಡ: ಕಲಶೋತ್ಸವ ಸಂದರ್ಭದಲ್ಲಿ ಮಾಂಗಲ್ಯ ಸರಮಾಲೆ ಕಳೆದುಕೊಂಡ ಮಹಿಳೆಗೆ ಮಂದಿರದ ಆವರಣದಲ್ಲೇ ಸಿಕ್ಕಿತು ಮಾಂಗಲ್ಯ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲಾ ಶಿಕ್ಷಕಿ ಅಕ್ಕಮ್ಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!