July 23, 2026
ಗ್ರಾಮಾಂತರ ಸುದ್ದಿ

ಮಿತ್ತಬಾಗಿಲು:ಹರ್ಝತ್ ಸೈದಾನಿ ಬೀಬಿ ದರ್ಗಾದಲ್ಲಿ ಮಾಸಿಕ 9 ನೇ ಸ್ವಲಾತ್ ಕಾರ್ಯಕ್ರಮ

  • ವಿಕಾಲಾಂಗರಿಗೆ ನೆರವು-ವಿದ್ಯಾ ಪ್ರೋತ್ಸಾಹ ಧನ ಹಸ್ತಾಂತರ

ಮಿತ್ತಬಾಗಿಲು: ಹರ್ಝತ್ ಸೈದಾನಿ ಬೀಬಿ ದರ್ಗಾ ವಠಾರದಲ್ಲಿ ನ 25 ರಂದು ಗುರುವಾರ ಮಾಸಿಕ 9 ನೇ ಸ್ವಲಾತ್ ಕಾರ್ಯಕ್ರಮ ಜರಗಿದ್ದು ನೂರಾರು ಭಕ್ತರು ಸಾಕ್ಷಿಗಳಾಗಿದ್ದರು.

ಸಂಸ್ಥೆಯು ಅಂಗವಿಕಲರಿಗೆ, ಅಸಹಾಯಕ ನಿರ್ಗತಿಕರಿಗೆ, ವಿಧವೆಯರಿಗೆ, ವಿಧ್ಯಾಭ್ಯಾಸಕ್ಕೆ ಮತ್ತು ಬಡ ಮಕ್ಕಳ ಮದುವೆಗಾಗಿ ಪ್ರತಿ ತಿಂಗಳು ಸಹಾಯಮಾಡುತ್ತಿದ್ದು ಸ್ವಲಾತ್ ಸಂದರ್ಭದಲ್ಲಿ ಸಂಪೂರ್ಣ ಅಂಗವಿಕಲರಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ನಿವಾಸಿಯವರಾದ ನಾರಾಯಣ ಗೌಡ ಎಂಬವರ ಪರವಾಗಿ ಅವರ ಪತ್ನಿ ಶ್ರೀಮತಿ ಕುಸುಮಾವತಿಯವರಿಗೆ 2024ನೇ ಇಸವಿಯ ಜೂನ್ ತಿಂಗಳಿನಿಂದ ಮಾಸಿಕ ರೂ.2000/- ಯಂತೆ ಅಂಗವಿಕಲರಿಗಾಗುವ ಸಹಾಯದನದ ಪ್ರಥಮ ಕಂತನ್ನು ವಿತರಿಸಲಾಯಿತು.

ಅದೇ ರೀತಿ 2024ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ. ಪಿ.ಕವನ ಶ್ರೀ ಎಂಬವಳಿಗೆ ವಿದ್ಯಾಭ್ಯಾಸಕ್ಕಾಗಿ ರೂ.5000/- ಸಹಾಯದವನ್ನು ಅವಳ ಪರವಾಗಿ ಪಾವತಿಸಲಾಯಿತು. ಬೆಳ್ತಂಗಡಿ ವಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮುಷ್ಕನ್ ಕೌಸರ್ ರಾಜ್ಯದಲ್ಲಿ 7 ನೇ Rank ಪಡೆದಿದ್ದು ಅವಳಿಗೆ ರೂ.25000/- ಚೆಕ್ ಮುಖಾಂತರ ವಿತರಿಸಲಾಯಿತು.

Related posts

ಉರುವಾಲು: ಮಹಡಿಯ ಕಾರಿಡಾರ್‌ನಿಂದ ಆಯತಪ್ಪಿ ತೋಡಿಗೆ ಬಿದ್ದ ಕಾರ್ಮಿಕ ಮೃತ್ಯು

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಗುರುವಾಯನಕೆರೆ ಪ್ರಮೀಳಾ ಜ್ಯುವೆಲ್ಲರ್ಸ್ ನ ಮಾಲಕ ಹರಿಶ್ಚಂದ್ರ ಆಚಾರ್ಯ ನೈಕುಳಿ ನಿಧನ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪೆರಾಡಿ ಸಿಎ ಬ್ಯಾಂಕಿಗೆ ಸತತ 14 ವರ್ಷಗಳಿಂದ ಸಾಧನಾ ಪ್ರಶಸ್ತಿ

Suddi Udaya

ಮದ್ದಡ್ಕ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜು.6 : ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya
error: Content is protected !!