23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ನವೀಕೃತ ಕಟ್ಟಡದ ಉದ್ಘಾಟನಾ ಸಮಾರಂಭ

ಉಜಿರೆ: ಎಲ್ಲಾ ಬಿ.ಎಡ್. ಶಿಕ್ಷಣ ಸಂಸ್ಥೆಗಳಿಗೆ ಎಸ್.ಡಿ.ಎಂ. ಬಿ.ಎಡ್. ಕಾಲೇಜು ಮಾದರಿಯಾಗಬೇಕು. ಧರ್ಮಸ್ಥಳದ ವಿವಿಧ ವಿದ್ಯಾಸಂಸ್ಥೆಗಳ ಸಾಧನೆ ಮತ್ತು ಪ್ರಗತಿಯ ಪಥವನ್ನು ಹಾಗೂ ಮುಂದಿನ ದೂರದೃಷ್ಟಿಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ ಹರ್ಷೇಂದ್ರ ಕುಮಾರ್ ತೆರೆದಿಟ್ಟರು.


ಬಿ.ಎಡ್. ಕಾಲೇಜಿನ ನವೀಕೃತ ಕಟ್ಟಡದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಇವರು ಉತ್ತಮ ಜ್ಞಾನ ಗಳಿಕೆಯದಾಗ ಸಮಾಜದಲ್ಲಿ ಉತ್ತಮ ವ್ಯಕ್ತಿತ್ವವನ್ನು ರೂಪಿಸಲು ಸಾಧ್ಯವಿದೆ ಎಂದರು.


ಬೇರೆ ಬೇರೆ ವೃತ್ತಿಗಳನ್ನು ಪಡೆಯಬೇಕಾದರೆ ಶಿಕ್ಷಕರ ಪ್ರಾಮುಖ್ಯತೆ ಅತ್ಯಂತ ಪ್ರಮುಖವಾಗುವುದು ಎಂದು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಮಾಹಿತಿ ತಂತ್ರಜ್ಞಾನ ಹಾಗೂ ವಸತಿ ನಿಲಯಗಳ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರಣ್ ವರ್ಮ ರವರು ತಿಳಿಸಿದರು.


ಪೂಜ್ಯ ಖಾವಂದರಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಕಾರ್ಯದರ್ಶಿಗಳಾದ ಡಿ ಹರ್ಷೇಂದ್ರ ಕುಮಾರ್ ಇವರೀರ್ವರು ಯಾವುದೇ ಸಂಸ್ಥೆಯ ಅಥವಾ ಯಾವುದೇ ಕಾರ್ಯಕ್ರಮದ ನೈಜ ರೂಪುರೇಷೆಯನ್ನು ಪ್ರಾಯೋಗಿಕವಾಗಿ ಕ್ಲಪ್ತ ಸಮಯದಲ್ಲಿ ಸಂಘಟಿಸಲು ನೀಡುವ ಮಾರ್ಗದರ್ಶನವನ್ನು ಸ್ಮರಿಸಿದರು. ಪ್ರಶಿಕ್ಷಣಾರ್ಥಿಗಳು ಭಾವೀ ಜೀವನದಲ್ಲಿ ಮತ್ತು ಸಮಾಜದಲ್ಲಿ ಸರ್ವತೋಮುಖವಾದ ದೃಷ್ಟಿಕೋನವನ್ನು ಇರಿಸಿಕೊಂಡು ಉತ್ತಮ ಶಿಕ್ಷಕರಾಗಬೇಕು ಎಂಬುದಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ. ಸತೀಶ್‌ಚಂದ್ರ ಎಸ್ ಇವರು ಶುಭ ಹಾರೈಸಿದರು.


ಪ್ರಾಸ್ತಾವಿಕ ನುಡಿಗಳನ್ನಾಡಿದ ಶ್ರೀ ಧರ್ಮಸ್ಥಳ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಸಂತೋಷ್ ಸಲ್ಡಾನ ಮಾತನಾಡುತ್ತಾ ಬಿ.ಎಡ್. ಶಿಕ್ಷಣ ಸಂಸ್ಥೆ ಹಾದು ಬಂದ ದಾರಿ ಮತ್ತು ಸಾಧಿಸಿದ ಸಾಧನೆಗಳನ್ನು ಸ್ವಾಗತಿಸುವ ಸಂದರ್ಭದಲ್ಲಿ ಪ್ರಸ್ತಾವಿಸಿದರು.
ನವೀಕೃತ ಕಾಲೇಜಿನ ಉದ್ಘಾಟನಾ ಕಾರ್ಯಕ್ರಮದಲ್ಲಿ ಎಸ್.ಡಿ.ಎಂ. ಸಂಸ್ಥೆಯ ವಿವಿಧ ಅಂಗ ಸಂಸ್ಥೆಗಳ ಪ್ರಾಂಶುಪಾಲರು, ವಿಭಾಗ ಮುಖ್ಯಸ್ಥರು ಹಾಗೂ ಸಿಬ್ಬಂದಿಗಳು ಮತ್ತು ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ಉಪನ್ಯಾಸಕರು, ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಾದ ಸುಶ್ಮಿತಾ ಪ್ರಾರ್ಥಿಸಿ, ವಿದ್ಯಾರ್ಥಿ ನಾಯಕ ಕೀರ್ತನ್ ಕುಮಾರ್ ನೆರೆದಿರುವ ಸರ್ವರನ್ನು ವಂದಿಸಿ, ತುಳಸಿ ಇವರು ಕಾರ್ಯಕ್ರಮ ನಿರ್ವಹಿಸಿದರು.

Related posts

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

Suddi Udaya

ಮರೋಡಿ ಕ್ಷೇತ್ರ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Suddi Udaya

ನಡ ಮೂಡಾಯಿಬೆಟ್ಟು ಹಂದಿ ಸಾಕಾಣಾ ಕೇಂದ್ರದಿಂದ ಹಂದಿಯನ್ನು ಎಳೆದೊಯ್ದ ಚಿರತೆ

Suddi Udaya

ಕೊಕ್ಕಡ ಶ್ರೀ ಲಕ್ಷ್ಮೀ ಲೇಡಿಸ್ ಬ್ಯೂಟಿಪಾರ್ಲರ್ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಹೋಲಿ ರೆಡಿಮರ್ ಚರ್ಚ್ ನಲ್ಲಿ ಪವಿತ್ರ ಗುರುವಾರ, ಶುಭ ಶುಕ್ರವಾರ ಹಾಗೂ ಈಸ್ಟರ್ ಹಬ್ಬದ ಆಚರಣೆ

Suddi Udaya
error: Content is protected !!