22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಅರ್ಹ ಕುಟುಂಬಗಳಿಗೆ ಕೃಷಿಗೆ ಸಂಬಂಧಪಟ್ಟ ಉಪಕರಣ ವಿತರಣೆ

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಕೆಲವು ಅರ್ಹ ಕುಟುಂಬಗಳಿಗೆ ಉಚಿತವಾಗಿ ಕೃಷಿಗೆ ಸಂಬಂಧಪಟ್ಟ ಉಪಕರಣಗಳನ್ನು ವನ್ಯಜೀವಿ ಸಂರಕ್ಷಣಾ (wcs) ವತಿಯಿಂದ ವಿತರಿಸಲಾಯಿತು.

ಸಂಸ್ಥೆಯ ಕ್ಷೇತ್ರಾಧಿಕಾರಿಯಾದ ಕೆ.ರಾಮಚಂದ್ರ ಭಟ್ ಸಂಸ್ಥೆಯ ಯೋಜನೆಗಳ ಮಾಹಿತಿ ನೀಡಿ ಉಪಕರಣಗಳನ್ನು ವಿತರಿಸಿದರು. ಪ್ರಗತಿಪರ ಕೃಷಿಕರಾದ ಹಾಗೂ ವೇಣೂರು ಲಯನ್ಸ್ ಕ್ಲಬ್ ನ ಅಧ್ಯಕ್ಷ ಲ| ಹರೀಶ್ ಕುಮಾರ್ ತೋಟಗಾರಿಕ ಬೆಳೆಗಳ ಬಗ್ಗೆ ಮಾಹಿತಿ ನೀಡಿದರು. ಸೀತಾ ಶ್ರೀರಾಮ ಡ್ರೈವಿಂಗ್ ಸ್ಕೂಲಿನ ಮಾಲೀಕರು ಹಾಗೂ ಲಯನ್ಸ್ ಕ್ಲಬ್ ನ ನಿಕಟ ಪೂರ್ವ ಅಧ್ಯಕ್ಷ ನಿರಂಜನ್ ವೇಣೂರು ವಾಹನ ಚಾಲನ ತರಬೇತಿ ನೀಡಿದರು. ಕೆ.ರಾಮಚಂದ್ರ ಭಟ್ ಸ್ವಾಗತಿಸಿ ಪ್ರಮಿಳಾ ಆರ್ ಭಟ್ ವಂದಿಸಿದರು. ಕಾರ್ಯಕ್ರಮ ಶ್ರೀ ದೇವಿ ಕೃಪಾ ಕುತ್ಲೂರಿನ ಕುಕ್ಕುಜೆ ಯಲ್ಲಿ ನಡೆಯಿತು.

Related posts

ಇಂದಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ

Suddi Udaya

ವೇಣೂರಿನ ನಡ್ತಿಕಲ್ ನಿವಾಸಿ ಕೆ. ಬಿ. ಅಬ್ದುಲ್ ಖಾದರ್ ನಿಧನ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬಂಟ್ವಾಳ : ಯುವತಿಯ ಹತ್ಯೆ ಪ್ರಕರಣದಲ್ಲಿ ಭಜರಂಗದಳದ ವಿರುದ್ಧ ಸುಳ್ಳು ಸುದ್ದಿ: ಭಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ದೂರು ದಾಖಲು

Suddi Udaya

ಉತ್ತರಖಾಂಡ್ ಕೇದಾರನಾಥ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನ ಯೋಜನಾಧಿಕಾರಿ ಅವನೀಶ್ ಪಿ ರವರಿಗೆ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ರಾಜ್ಯ ಘಟಕದ ವತಿಯಿಂದ ಸನ್ಮಾನ

Suddi Udaya
error: Content is protected !!