23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಅರ್ಹ ಕುಟುಂಬಗಳಿಗೆ ಕೃಷಿಗೆ ಸಂಬಂಧಪಟ್ಟ ಉಪಕರಣ ವಿತರಣೆ

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಕೆಲವು ಅರ್ಹ ಕುಟುಂಬಗಳಿಗೆ ಉಚಿತವಾಗಿ ಕೃಷಿಗೆ ಸಂಬಂಧಪಟ್ಟ ಉಪಕರಣಗಳನ್ನು ವನ್ಯಜೀವಿ ಸಂರಕ್ಷಣಾ (wcs) ವತಿಯಿಂದ ವಿತರಿಸಲಾಯಿತು.

ಸಂಸ್ಥೆಯ ಕ್ಷೇತ್ರಾಧಿಕಾರಿಯಾದ ಕೆ.ರಾಮಚಂದ್ರ ಭಟ್ ಸಂಸ್ಥೆಯ ಯೋಜನೆಗಳ ಮಾಹಿತಿ ನೀಡಿ ಉಪಕರಣಗಳನ್ನು ವಿತರಿಸಿದರು. ಪ್ರಗತಿಪರ ಕೃಷಿಕರಾದ ಹಾಗೂ ವೇಣೂರು ಲಯನ್ಸ್ ಕ್ಲಬ್ ನ ಅಧ್ಯಕ್ಷ ಲ| ಹರೀಶ್ ಕುಮಾರ್ ತೋಟಗಾರಿಕ ಬೆಳೆಗಳ ಬಗ್ಗೆ ಮಾಹಿತಿ ನೀಡಿದರು. ಸೀತಾ ಶ್ರೀರಾಮ ಡ್ರೈವಿಂಗ್ ಸ್ಕೂಲಿನ ಮಾಲೀಕರು ಹಾಗೂ ಲಯನ್ಸ್ ಕ್ಲಬ್ ನ ನಿಕಟ ಪೂರ್ವ ಅಧ್ಯಕ್ಷ ನಿರಂಜನ್ ವೇಣೂರು ವಾಹನ ಚಾಲನ ತರಬೇತಿ ನೀಡಿದರು. ಕೆ.ರಾಮಚಂದ್ರ ಭಟ್ ಸ್ವಾಗತಿಸಿ ಪ್ರಮಿಳಾ ಆರ್ ಭಟ್ ವಂದಿಸಿದರು. ಕಾರ್ಯಕ್ರಮ ಶ್ರೀ ದೇವಿ ಕೃಪಾ ಕುತ್ಲೂರಿನ ಕುಕ್ಕುಜೆ ಯಲ್ಲಿ ನಡೆಯಿತು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆ – ‘ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ-

Suddi Udaya

ಗುರುವಾಯನಕೆರೆ ಎಕ್ಸೆಲ್ ವಿಜ್ಞಾನ ಪ.ಪೂ. ಕಾಲೇಜಿಗೆ ಶೇ. 99.76 ಫಲಿತಾಂಶ: 254 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಅಂಡಿಂಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಪಕ್ಕಳ ಭೇಟಿ

Suddi Udaya

ತ್ರೋಬಾಲ್ ಪಂದ್ಯಾಟ: ಪದ್ಮುಂಜ ಸ.ಪ.ಪೂ. ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya

ಲಾಯಿಲ: ದಯಾ ವಿಶೇಷ ಶಾಲೆಯಲ್ಲಿ ವಿಶ್ವ ಅಂಗವಿಕಲರ ದಿನಾಚರಣೆ

Suddi Udaya
error: Content is protected !!