September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಅರ್ಹ ಕುಟುಂಬಗಳಿಗೆ ಕೃಷಿಗೆ ಸಂಬಂಧಪಟ್ಟ ಉಪಕರಣ ವಿತರಣೆ

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಕೆಲವು ಅರ್ಹ ಕುಟುಂಬಗಳಿಗೆ ಉಚಿತವಾಗಿ ಕೃಷಿಗೆ ಸಂಬಂಧಪಟ್ಟ ಉಪಕರಣಗಳನ್ನು ವನ್ಯಜೀವಿ ಸಂರಕ್ಷಣಾ (wcs) ವತಿಯಿಂದ ವಿತರಿಸಲಾಯಿತು.

ಸಂಸ್ಥೆಯ ಕ್ಷೇತ್ರಾಧಿಕಾರಿಯಾದ ಕೆ.ರಾಮಚಂದ್ರ ಭಟ್ ಸಂಸ್ಥೆಯ ಯೋಜನೆಗಳ ಮಾಹಿತಿ ನೀಡಿ ಉಪಕರಣಗಳನ್ನು ವಿತರಿಸಿದರು. ಪ್ರಗತಿಪರ ಕೃಷಿಕರಾದ ಹಾಗೂ ವೇಣೂರು ಲಯನ್ಸ್ ಕ್ಲಬ್ ನ ಅಧ್ಯಕ್ಷ ಲ| ಹರೀಶ್ ಕುಮಾರ್ ತೋಟಗಾರಿಕ ಬೆಳೆಗಳ ಬಗ್ಗೆ ಮಾಹಿತಿ ನೀಡಿದರು. ಸೀತಾ ಶ್ರೀರಾಮ ಡ್ರೈವಿಂಗ್ ಸ್ಕೂಲಿನ ಮಾಲೀಕರು ಹಾಗೂ ಲಯನ್ಸ್ ಕ್ಲಬ್ ನ ನಿಕಟ ಪೂರ್ವ ಅಧ್ಯಕ್ಷ ನಿರಂಜನ್ ವೇಣೂರು ವಾಹನ ಚಾಲನ ತರಬೇತಿ ನೀಡಿದರು. ಕೆ.ರಾಮಚಂದ್ರ ಭಟ್ ಸ್ವಾಗತಿಸಿ ಪ್ರಮಿಳಾ ಆರ್ ಭಟ್ ವಂದಿಸಿದರು. ಕಾರ್ಯಕ್ರಮ ಶ್ರೀ ದೇವಿ ಕೃಪಾ ಕುತ್ಲೂರಿನ ಕುಕ್ಕುಜೆ ಯಲ್ಲಿ ನಡೆಯಿತು.

Related posts

ಡಿಸಿ ಮನ್ನಾ ಜಮೀನು ಹಂಚಿಕೆ : ಕಂದಾಯ, ಉಸ್ತುವಾರಿ ಸಚಿವರು ಹಾಗೂ ಕೆಪಿಸಿಸಿ ಅಧ್ಯಕ್ಷರ ಭೇಟಿಗೆ ದಲಿತ ನಾಯಕರ ಸಭೆಯಲ್ಲಿ ನಿರ್ಧಾರ

Suddi Udaya

“ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತ ಶಾಸಕ ಹರೀಶ್ ಪೂಂಜಾರಿಗೆ ಪದ್ಮುಂಜದಲ್ಲಿ ಗೌರವಾಭಿನಂದನೆ – 40ಕ್ಕೂ ಹೆಚ್ಚು ಸಂಘ-ಸಂಸ್ಥೆಗಳಿಂದ ಸನ್ಮಾನ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ರಾಜು ಮಡಿವಾಳ ನಿಧನ

Suddi Udaya

ಮಹಿಳಾ ಸಬಲೀಕರಣದ ಭಾಗವಾಗಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಲಿಂಗ ಸಮಾನತೆಯ ಕುರಿತು ತರಬೇತಿ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಾಸಭೆ

Suddi Udaya
error: Content is protected !!