September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಧರ್ಮಸ್ಥಳ ಯಕ್ಷಗಾನ ಮೇಳ: ಸೇವೆ ಬಯಲಾಟ ಪ್ರದರ್ಶನ

ಧರ್ಮಸ್ಥಳ : ನಾಡಿನ ಪವಿತ್ರ ಕ್ಷೇತ್ರ  ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200 ವರ್ಷಗಳ ಭವ್ಯ ಇತಿಹಾಸ ಮತ್ತು ಪರಂಪರೆ ಇದೆ.
(ನ.21) ಇಂದಿನಿಂದ 2025ರ ಮೇ 23ರ ವರೆಗೆ ಭಕ್ತಾದಿಗಳ ವತಿಯಿಂದ ಸೇವೆ ಬಯಲಾಟ ಪ್ರದರ್ಶನ ಆಯೋಜಿಸಲಾಗಿದೆ.
ಕಳೆದ ಏಳು ವರ್ಷಗಳಿಂದ ಸಂಜೆ ಗಂಟೆ 7 ರಿಂದ ರಾತ್ರಿ 12 ಗಂಟೆ ವರೆಗೆ ಕಾಲಮಿತಿಯ ಬಯಲಾಟ ಪ್ರದರ್ಶನ ಆಯೋಜಿಸಲಾಗುತ್ತಿದೆ. ಇದರಿಂದಾಗಿ ಕಲಾಭಿಮಾನಿ ಪ್ರೇಕ್ಷಕರಿಂದಲೂ ಉತ್ತಮ ಪ್ರತಿಕ್ರಿಯೆ, ಪ್ರೋತ್ಸಾಹ ಬರುತ್ತಿದೆ. ಕಲಾವಿದರಿಗೂ  ಹೆಚ್ಚಿನ ಅಧ್ಯಯನ, ಅಭ್ಯಾಸಕ್ಕೂ ಅನುಕೂಲವಾಗುತ್ತದೆ.
ಸಾಂಪ್ರದಾಯಿಕ ವೇಷಭೂಷಣಗಳು, ಜಾನಪದ ಶೈಲಿಯ ಪರಂಪರೆಯ ಪ್ರದರ್ಶನ, ಕೇವಲ ಪೌರಾಣಿಕ ಪ್ರಸಂಗಗಳ ಪ್ರದರ್ಶನ ಧರ್ಮಸ್ಥಳ ಮೇಳದ ವೈಶಿಷ್ಟ್ಯವಾಗಿದೆ. ಸೇವೆ ಬಯಲಾಟ ಪ್ರದರ್ಶನದೊಂದಿಗೆ ಧರ್ಮಪ್ರಭಾವನೆ ಹಾಗೂ ನೈತಿಕ ಮೌಲ್ಯಗಳ ಉದ್ದೀಪನಕ್ಕೂ ಪ್ರೋತ್ಸಾಹ ನೀಡಲಾಗುತ್ತದೆ.


ಸೇವೆ ಬಯಲಾಟ ಪ್ರದರ್ಶನದ ಊರುಗಳಲ್ಲಿ ಮೇಳದ ಜೊತೆ ಇರುವ ಶ್ರೀ ಮಹಾಗಣಪತಿ ದೇವರನ್ನು ವೈಭವದ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಈ ವೇಳೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು.

Related posts

ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟ: ಕರಾಟೆ ಶಿಕ್ಷಕ ಶಿಹಾನ್ ಅಬ್ದುಲ್ ರಹ್ಮಾನ್ ಅವರ ಶಿಷ್ಯಂದಿಯರಿಗೆ ಹಲವು ಪದಕ

Suddi Udaya

ಮರೋಡಿ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಅನನ್ಯ ಫೀಡ್ಸ್ ಹುಬ್ಬಳ್ಳಿ ಹಾಗೂ ಫಾರ್ಮ್ ಫುಡ್ ಪಾಂಡವರಕಲ್ಲು ಇವರಿಂದ ಗುಂಡೂರಿ ಕಾವೇರಮ್ಮ ಅಮೃತಧಾರಾ ಗೋಶಾಲೆಗೆ ನವಧ್ಯಾನ ಹಿಂಡಿ, ನಿಸರ್ಗ ಮೇವು ಸಮರ್ಪಣೆ

Suddi Udaya

ಯಂಗ್ ಡೆಮಾಕ್ರಟ್ಸ್ ಮಂಗಳೂರು ಗ್ರಾಮಾಂತರ ಜಿಲ್ಲಾ ಸಂಘಟನಾ ಸಮಿತಿ ಕನ್ವಿನರ್ ಆಗಿ ನ್ಯಾಯವಾದಿ ಅಸ್ಮಾ ಬೆಳ್ತಂಗಡಿ ಆಯ್ಕೆ

Suddi Udaya

ವಾಣಿ ಆಂ.ಮಾ. ಶಾಲೆಯ ಬಾಲಕರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!