23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಧರ್ಮಸ್ಥಳ ಯಕ್ಷಗಾನ ಮೇಳ: ಸೇವೆ ಬಯಲಾಟ ಪ್ರದರ್ಶನ

ಧರ್ಮಸ್ಥಳ : ನಾಡಿನ ಪವಿತ್ರ ಕ್ಷೇತ್ರ  ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200 ವರ್ಷಗಳ ಭವ್ಯ ಇತಿಹಾಸ ಮತ್ತು ಪರಂಪರೆ ಇದೆ.
(ನ.21) ಇಂದಿನಿಂದ 2025ರ ಮೇ 23ರ ವರೆಗೆ ಭಕ್ತಾದಿಗಳ ವತಿಯಿಂದ ಸೇವೆ ಬಯಲಾಟ ಪ್ರದರ್ಶನ ಆಯೋಜಿಸಲಾಗಿದೆ.
ಕಳೆದ ಏಳು ವರ್ಷಗಳಿಂದ ಸಂಜೆ ಗಂಟೆ 7 ರಿಂದ ರಾತ್ರಿ 12 ಗಂಟೆ ವರೆಗೆ ಕಾಲಮಿತಿಯ ಬಯಲಾಟ ಪ್ರದರ್ಶನ ಆಯೋಜಿಸಲಾಗುತ್ತಿದೆ. ಇದರಿಂದಾಗಿ ಕಲಾಭಿಮಾನಿ ಪ್ರೇಕ್ಷಕರಿಂದಲೂ ಉತ್ತಮ ಪ್ರತಿಕ್ರಿಯೆ, ಪ್ರೋತ್ಸಾಹ ಬರುತ್ತಿದೆ. ಕಲಾವಿದರಿಗೂ  ಹೆಚ್ಚಿನ ಅಧ್ಯಯನ, ಅಭ್ಯಾಸಕ್ಕೂ ಅನುಕೂಲವಾಗುತ್ತದೆ.
ಸಾಂಪ್ರದಾಯಿಕ ವೇಷಭೂಷಣಗಳು, ಜಾನಪದ ಶೈಲಿಯ ಪರಂಪರೆಯ ಪ್ರದರ್ಶನ, ಕೇವಲ ಪೌರಾಣಿಕ ಪ್ರಸಂಗಗಳ ಪ್ರದರ್ಶನ ಧರ್ಮಸ್ಥಳ ಮೇಳದ ವೈಶಿಷ್ಟ್ಯವಾಗಿದೆ. ಸೇವೆ ಬಯಲಾಟ ಪ್ರದರ್ಶನದೊಂದಿಗೆ ಧರ್ಮಪ್ರಭಾವನೆ ಹಾಗೂ ನೈತಿಕ ಮೌಲ್ಯಗಳ ಉದ್ದೀಪನಕ್ಕೂ ಪ್ರೋತ್ಸಾಹ ನೀಡಲಾಗುತ್ತದೆ.


ಸೇವೆ ಬಯಲಾಟ ಪ್ರದರ್ಶನದ ಊರುಗಳಲ್ಲಿ ಮೇಳದ ಜೊತೆ ಇರುವ ಶ್ರೀ ಮಹಾಗಣಪತಿ ದೇವರನ್ನು ವೈಭವದ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಈ ವೇಳೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಮುಳಿಕ್ಕಾರ್ ಭಾರಿ ಗಾಳಿ ಮಳೆಗೆ ಹಾನಿಯಾದ ಮನೆಗೆ ಧರ್ಮಸ್ಥಳ ಗ್ರಾ.ಪಂ. ನಿಂದ ಆರ್ಥಿಕ ನೆರವು

Suddi Udaya

ಪುದುವೆಟ್ಟು: ಅಡ್ಯಾದಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಬುರುಡೆ ಪ್ರಕರಣದ ತನಿಖೆ ಪೂರ್ಣಗೊಂಡಿಲ್ಲ: ಗೃಹ ಸಚಿವ ಪರಮೇಶ್ವರ್

Suddi Udaya

ಗುರುವಾಯನಕೆರೆಯಲ್ಲಿ ವ್ಯಕ್ತಿಯೋರ್ವ ಅನುಮಾನಸ್ಪದ ಸಾವು!!?

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಜೆಸಿ ಸಪ್ತಾಹ ಅಂಗವಾಗಿ ಹೂಗುಚ್ಚ ತಯಾರಿಕಾ ತರಬೇತಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ನಿವೃತ್ತ ಮೆಸ್ಕಾಂ ಉದ್ಯೋಗಿ ಭಾಸ್ಕರನ್ ಸ್ವಾಮಿರವರ ಪುತ್ರ ಅಯ್ಯಪ್ಪ ದಾಸ್ ನಿಧನ

Suddi Udaya
error: Content is protected !!