23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ-ಚಾರ್ಮಾಡಿ ಭರದಿಂದ ಸಾಗುತ್ತಿರುವ ಹೆದ್ದಾರಿ ಅಭಿವೃದ್ಧಿ ಕಾಮಗಾರಿ

ಬೆಳ್ತಂಗಡಿ: ಮಳೆ ದೂರವಾಗುತ್ತಿದ್ದಂತೆ ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಭಿವೃದ್ಧಿಯ ಕಾಮಗಾರಿಗೆ ಮತ್ತೆ ವೇಗ ದೊರಕಿದೆ. ಕಳೆದ ಸುಮಾರು ಒಂದು ತಿಂಗಳಿನಿಂದ ಮತ್ತೆ ಕಾಮಗಾರಿ ಆರಂಭವಾಗಿದೆ. ಮಳೆ ಇರುವ ಸಮಯ ಚರಂಡಿ ದುರಸ್ತಿ, ರಸ್ತೆ ಹೊಂಡ ಮುಚ್ಚುವುದು, ಕೆಸರು ತೆರವುಗೊಳಿಸುವುದು ಚರಂಡಿ ಸ್ವಚ್ಛತೆ, ರಸ್ತೆಗೆ ಚರಲ್ ಹಾಕುವ ಕೆಲಸಗಳು ನಡೆದಿದೆ.


ಹಾಲಿ ರಸ್ತೆಯನ್ನು ಸಮತಟ್ಟುಗೊಳಿಸುವ, ಡಾಂಬರೀಕರಣ ನಡೆಸುವ, ಚರಂಡಿಗಳ ನಿರ್ಮಾಣ, ಜಲ್ಲಿ ಹಾಕುವ ಕಾಮಗಾರಿಗಳು ನಡೆಯುತ್ತಿವೆ. ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಎರಡನೇ ಹಂತದ ಅಭಿವೃದ್ಧಿ ಕಾಮಗಾರಿಯ ಬೃಹತ್ ಅನುದಾನದ ಯೋಜನೆಯನ್ನು ಮೊದಲಿಗೆ ನಾಗಪುರ ಡಿಪಿ ಜೈನ್ ಕಂಪನಿ ವಹಿಸಿಕೊಂಡಿತ್ತು. ಈ ಸಮಯ ಬೇಕಾಬಿಟ್ಟಿ ಕಾಮಗಾರಿ ನಿರ್ವಹಿಸಿದ ಕಂಪನಿ ವಾಹನ ಸಂಚಾರಕ್ಕೆ ಸಾಕಷ್ಟು ಅಡ್ಡಿ ಉಂಟು ಮಾಡಿತ್ತು. ಮಳೆಗಾಲದಲ್ಲಿ ಮದ್ದಡ್ಕ, ಕಾಶಿಬೆಟ್ಟು, ಉಜಿರೆ, ಸೋಮಂತಡ್ಕ ಮೊದಲಾದ ಕಡೆ ವಾಹನ ಸಂಚಾರ ನಡೆಸುವುದಕ್ಕೆ ಭಾರಿ ತೊಂದರೆ ಉಂಟಾಗಿತ್ತು.


ಬಳಿಕ ಕಂಪನಿ ನಾನಾ ಕಾರಣಗಳಿಂದ ಕೆಲಸ ಮುಂದುವರಿಸಲಾರದೆ ಮುಗ್ರೋಡಿ ಕನ್ಸ್ಟ್ರಕ್ಷನ್‌ಗೆ ಒಳಗುತ್ತಿಗೆ ಮೂಲಕ ಕಾಮಗಾರಿ ನಿರ್ವಹಿಸುವ ಒಪ್ಪಂದ ಮಾಡಿಕೊಂಡಿತ್ತು.ಕಂಪನಿ ಬದಲಾಗುತ್ತಿದ್ದಂತೆ ಕಾಮಗಾರಿಗೆ ಚುರುಕು ಮುಟ್ಟಿತು. ಮಳೆ ಸಮಯದಲ್ಲಿ ಕಂಪನಿ ವಾಹನ ಸಂಚಾರಕ್ಕೆ ರಸ್ತೆಯನ್ನು ಯೋಗ್ಯವಾಗಿ ಮಾಡಿಕೊಡುವಲ್ಲಿ ಸಾಕಷ್ಟ್ಟು ಶ್ರಮ ವಹಿಸಿತ್ತು.


ಮುಂಡಾಜೆಯ ಸೀಟು ವ್ಯಾಪ್ತಿಯಲ್ಲಿ ಅಗೆದು ಹಾಕಲಾದ ರಸ್ತೆಗೆ ಈಗ ಡಾಂಬರೀಕರಣ ನಡೆಸುವ ಕಾಮಗಾರಿ ಪ್ರಗತಿಯಲ್ಲಿದೆ. ಉಳಿದಂತೆ ಉಜಿರೆಯಲ್ಲಿ ಚರಂಡಿಗಳನ್ನು ನಿರ್ಮಿಸುವ, ಮದ್ದಡ್ಕ, ಹಳೆಕೋಟೆಯಲ್ಲಿ ರಸ್ತೆ ಅಗಲೀಕರಣ, ಮುಂಡಾಜೆ ಬೆಳ್ತಂಗಡಿಯಲ್ಲಿ ಸೇತುವೆ ನಿರ್ಮಾಣದ ಕಾಮಗಾರಿಗಳು ನಡೆಯುತ್ತಿವೆ.

Related posts

ಭಾರತೀಯ ಸಾಂಸ್ಕೃತಿಕ ವಿಕಾಸಕ್ಕಾಗಿ ನರೇಂದ್ರ ಮೋದಿಜೀಯವರು ಮತ್ತೊಮ್ಮೆ ಪ್ರಧಾನಿಯಾಗಲು ಕ್ಯಾ| ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿಯವರನ್ನು ಗೆಲ್ಲಿಸಿ ಸಂಸ್ಕಾರ ಭಾರತೀ ಬೆಳ್ತಂಗಡಿ ಘಟಕ ಮತ್ತು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಹೇಳಿಕೆ

Suddi Udaya

ಮುಂಡ್ರುಪಾಡಿ ವಸಂತಿರವರ ಮನೆಯ ಮೇಲೆ ಬಿದ್ದ ಮರ: ಧರ್ಮಸ್ಥಳ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಶಿಶಿಲ ಸ.ಉ.ಹಿ.ಪ್ರಾ.ಶಾಲೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಎಸ್ .ಡಿ .ಎಂ .ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮೊಗ್ರು ಕಡಮ್ಮಾಜೆ ಫಾರ್ಮ್ಸ್ ನಲ್ಲಿ 3 ದಿನ ನಡೆಯಲಿರುವ ಮೀನು ಮೇಳಕ್ಕೆ ಚಾಲನೆ: ವಿಶೇಷ ಆಕರ್ಷಣೆ ಮೀನಿಗೆ ಗಾಳ ಹಾಕುವ ಸ್ಪರ್ಧೆ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ರವರಿಗೆ ‘ಆಯುಷ್ ರತ್ನ ಪ್ರಶಸ್ತಿ’ ಪುರಸ್ಕಾರ

Suddi Udaya
error: Content is protected !!