May 31, 2025
ಗ್ರಾಮಾಂತರ ಸುದ್ದಿ

ಮಿತ್ತಬಾಗಿಲು:ಹರ್ಝತ್ ಸೈದಾನಿ ಬೀಬಿ ದರ್ಗಾದಲ್ಲಿ ಮಾಸಿಕ 9 ನೇ ಸ್ವಲಾತ್ ಕಾರ್ಯಕ್ರಮ

  • ವಿಕಾಲಾಂಗರಿಗೆ ನೆರವು-ವಿದ್ಯಾ ಪ್ರೋತ್ಸಾಹ ಧನ ಹಸ್ತಾಂತರ

ಮಿತ್ತಬಾಗಿಲು: ಹರ್ಝತ್ ಸೈದಾನಿ ಬೀಬಿ ದರ್ಗಾ ವಠಾರದಲ್ಲಿ ನ 25 ರಂದು ಗುರುವಾರ ಮಾಸಿಕ 9 ನೇ ಸ್ವಲಾತ್ ಕಾರ್ಯಕ್ರಮ ಜರಗಿದ್ದು ನೂರಾರು ಭಕ್ತರು ಸಾಕ್ಷಿಗಳಾಗಿದ್ದರು.

ಸಂಸ್ಥೆಯು ಅಂಗವಿಕಲರಿಗೆ, ಅಸಹಾಯಕ ನಿರ್ಗತಿಕರಿಗೆ, ವಿಧವೆಯರಿಗೆ, ವಿಧ್ಯಾಭ್ಯಾಸಕ್ಕೆ ಮತ್ತು ಬಡ ಮಕ್ಕಳ ಮದುವೆಗಾಗಿ ಪ್ರತಿ ತಿಂಗಳು ಸಹಾಯಮಾಡುತ್ತಿದ್ದು ಸ್ವಲಾತ್ ಸಂದರ್ಭದಲ್ಲಿ ಸಂಪೂರ್ಣ ಅಂಗವಿಕಲರಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ನಿವಾಸಿಯವರಾದ ನಾರಾಯಣ ಗೌಡ ಎಂಬವರ ಪರವಾಗಿ ಅವರ ಪತ್ನಿ ಶ್ರೀಮತಿ ಕುಸುಮಾವತಿಯವರಿಗೆ 2024ನೇ ಇಸವಿಯ ಜೂನ್ ತಿಂಗಳಿನಿಂದ ಮಾಸಿಕ ರೂ.2000/- ಯಂತೆ ಅಂಗವಿಕಲರಿಗಾಗುವ ಸಹಾಯದನದ ಪ್ರಥಮ ಕಂತನ್ನು ವಿತರಿಸಲಾಯಿತು.

ಅದೇ ರೀತಿ 2024ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ. ಪಿ.ಕವನ ಶ್ರೀ ಎಂಬವಳಿಗೆ ವಿದ್ಯಾಭ್ಯಾಸಕ್ಕಾಗಿ ರೂ.5000/- ಸಹಾಯದವನ್ನು ಅವಳ ಪರವಾಗಿ ಪಾವತಿಸಲಾಯಿತು. ಬೆಳ್ತಂಗಡಿ ವಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮುಷ್ಕನ್ ಕೌಸರ್ ರಾಜ್ಯದಲ್ಲಿ 7 ನೇ Rank ಪಡೆದಿದ್ದು ಅವಳಿಗೆ ರೂ.25000/- ಚೆಕ್ ಮುಖಾಂತರ ವಿತರಿಸಲಾಯಿತು.

Related posts

ಗುರುವಾಯನಕೆರೆ: 30ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಗೌರವಾಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ, ಅಧ್ಯಕ್ಷರಾಗಿ ರಿಜೇಶ್ ಕುಮಾರ್ ಆಯ್ಕೆ

Suddi Udaya

ಸಾವ್ಯ: ಕರ್ಂಬಲೆಕ್ಕಿಯಲ್ಲಿ ಪುರುಷರ ರಾಶಿ ಪೂಜೆ

Suddi Udaya

ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ: ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಿಎಮ್ಎಸ್

Suddi Udaya

ಮೊಗ್ರು: ಅಲೆಕ್ಕಿ ಜೈರಾಮ ಸೇವಾ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ, ತುಳಸಿಪೂಜೆ, ಭಜನೆ, ಹಣತೆಗಳ ದೀಪ ಪ್ರಜ್ವಲನೆ

Suddi Udaya

ತಾಲೂಕಿನ ಹಲವೆಡೆ ಉತ್ತಮ ಮಳೆ

Suddi Udaya

ಬೆಳ್ತಂಗಡಿ: ದ.ಕ. ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ಮಹಾಸಭೆ

Suddi Udaya
error: Content is protected !!