September 6, 2026
ಗ್ರಾಮಾಂತರ ಸುದ್ದಿ

ಮಿತ್ತಬಾಗಿಲು:ಹರ್ಝತ್ ಸೈದಾನಿ ಬೀಬಿ ದರ್ಗಾದಲ್ಲಿ ಮಾಸಿಕ 9 ನೇ ಸ್ವಲಾತ್ ಕಾರ್ಯಕ್ರಮ

  • ವಿಕಾಲಾಂಗರಿಗೆ ನೆರವು-ವಿದ್ಯಾ ಪ್ರೋತ್ಸಾಹ ಧನ ಹಸ್ತಾಂತರ

ಮಿತ್ತಬಾಗಿಲು: ಹರ್ಝತ್ ಸೈದಾನಿ ಬೀಬಿ ದರ್ಗಾ ವಠಾರದಲ್ಲಿ ನ 25 ರಂದು ಗುರುವಾರ ಮಾಸಿಕ 9 ನೇ ಸ್ವಲಾತ್ ಕಾರ್ಯಕ್ರಮ ಜರಗಿದ್ದು ನೂರಾರು ಭಕ್ತರು ಸಾಕ್ಷಿಗಳಾಗಿದ್ದರು.

ಸಂಸ್ಥೆಯು ಅಂಗವಿಕಲರಿಗೆ, ಅಸಹಾಯಕ ನಿರ್ಗತಿಕರಿಗೆ, ವಿಧವೆಯರಿಗೆ, ವಿಧ್ಯಾಭ್ಯಾಸಕ್ಕೆ ಮತ್ತು ಬಡ ಮಕ್ಕಳ ಮದುವೆಗಾಗಿ ಪ್ರತಿ ತಿಂಗಳು ಸಹಾಯಮಾಡುತ್ತಿದ್ದು ಸ್ವಲಾತ್ ಸಂದರ್ಭದಲ್ಲಿ ಸಂಪೂರ್ಣ ಅಂಗವಿಕಲರಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ನಿವಾಸಿಯವರಾದ ನಾರಾಯಣ ಗೌಡ ಎಂಬವರ ಪರವಾಗಿ ಅವರ ಪತ್ನಿ ಶ್ರೀಮತಿ ಕುಸುಮಾವತಿಯವರಿಗೆ 2024ನೇ ಇಸವಿಯ ಜೂನ್ ತಿಂಗಳಿನಿಂದ ಮಾಸಿಕ ರೂ.2000/- ಯಂತೆ ಅಂಗವಿಕಲರಿಗಾಗುವ ಸಹಾಯದನದ ಪ್ರಥಮ ಕಂತನ್ನು ವಿತರಿಸಲಾಯಿತು.

ಅದೇ ರೀತಿ 2024ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ. ಪಿ.ಕವನ ಶ್ರೀ ಎಂಬವಳಿಗೆ ವಿದ್ಯಾಭ್ಯಾಸಕ್ಕಾಗಿ ರೂ.5000/- ಸಹಾಯದವನ್ನು ಅವಳ ಪರವಾಗಿ ಪಾವತಿಸಲಾಯಿತು. ಬೆಳ್ತಂಗಡಿ ವಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮುಷ್ಕನ್ ಕೌಸರ್ ರಾಜ್ಯದಲ್ಲಿ 7 ನೇ Rank ಪಡೆದಿದ್ದು ಅವಳಿಗೆ ರೂ.25000/- ಚೆಕ್ ಮುಖಾಂತರ ವಿತರಿಸಲಾಯಿತು.

Related posts

ಬೆಳ್ತಂಗಡಿ : ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ 17ರ ವಯೋಮಾನದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಬಿರುಸಿನ ಮತ ಬೇಟೆ

Suddi Udaya

ಎ.24: ಬಳಂಜ ಬದಿನಡೆ ಶ್ರೀ ಶಾಸ್ತಾರ ನಾಗ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ನಾಗ ದರ್ಶನ ಸೇವೆ

Suddi Udaya

ಬೆಳ್ತಂಗಡಿ ಪ.ಪಂ. ಆಡಳಿತ ಅಧಿಕಾರಿಯಾಗಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

Suddi Udaya

ಶಿಬಾಜೆ ಗ್ರಾ.ಪಂ. ನ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೀತಾರಾಮ ಎಸ್ ಅಧಿಕಾರ ಸ್ವೀಕಾರ

Suddi Udaya
error: Content is protected !!