22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಮಿತ್ತಬಾಗಿಲು:ಹರ್ಝತ್ ಸೈದಾನಿ ಬೀಬಿ ದರ್ಗಾದಲ್ಲಿ ಮಾಸಿಕ 9 ನೇ ಸ್ವಲಾತ್ ಕಾರ್ಯಕ್ರಮ

  • ವಿಕಾಲಾಂಗರಿಗೆ ನೆರವು-ವಿದ್ಯಾ ಪ್ರೋತ್ಸಾಹ ಧನ ಹಸ್ತಾಂತರ

ಮಿತ್ತಬಾಗಿಲು: ಹರ್ಝತ್ ಸೈದಾನಿ ಬೀಬಿ ದರ್ಗಾ ವಠಾರದಲ್ಲಿ ನ 25 ರಂದು ಗುರುವಾರ ಮಾಸಿಕ 9 ನೇ ಸ್ವಲಾತ್ ಕಾರ್ಯಕ್ರಮ ಜರಗಿದ್ದು ನೂರಾರು ಭಕ್ತರು ಸಾಕ್ಷಿಗಳಾಗಿದ್ದರು.

ಸಂಸ್ಥೆಯು ಅಂಗವಿಕಲರಿಗೆ, ಅಸಹಾಯಕ ನಿರ್ಗತಿಕರಿಗೆ, ವಿಧವೆಯರಿಗೆ, ವಿಧ್ಯಾಭ್ಯಾಸಕ್ಕೆ ಮತ್ತು ಬಡ ಮಕ್ಕಳ ಮದುವೆಗಾಗಿ ಪ್ರತಿ ತಿಂಗಳು ಸಹಾಯಮಾಡುತ್ತಿದ್ದು ಸ್ವಲಾತ್ ಸಂದರ್ಭದಲ್ಲಿ ಸಂಪೂರ್ಣ ಅಂಗವಿಕಲರಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ನಿವಾಸಿಯವರಾದ ನಾರಾಯಣ ಗೌಡ ಎಂಬವರ ಪರವಾಗಿ ಅವರ ಪತ್ನಿ ಶ್ರೀಮತಿ ಕುಸುಮಾವತಿಯವರಿಗೆ 2024ನೇ ಇಸವಿಯ ಜೂನ್ ತಿಂಗಳಿನಿಂದ ಮಾಸಿಕ ರೂ.2000/- ಯಂತೆ ಅಂಗವಿಕಲರಿಗಾಗುವ ಸಹಾಯದನದ ಪ್ರಥಮ ಕಂತನ್ನು ವಿತರಿಸಲಾಯಿತು.

ಅದೇ ರೀತಿ 2024ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ. ಪಿ.ಕವನ ಶ್ರೀ ಎಂಬವಳಿಗೆ ವಿದ್ಯಾಭ್ಯಾಸಕ್ಕಾಗಿ ರೂ.5000/- ಸಹಾಯದವನ್ನು ಅವಳ ಪರವಾಗಿ ಪಾವತಿಸಲಾಯಿತು. ಬೆಳ್ತಂಗಡಿ ವಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮುಷ್ಕನ್ ಕೌಸರ್ ರಾಜ್ಯದಲ್ಲಿ 7 ನೇ Rank ಪಡೆದಿದ್ದು ಅವಳಿಗೆ ರೂ.25000/- ಚೆಕ್ ಮುಖಾಂತರ ವಿತರಿಸಲಾಯಿತು.

Related posts

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಪುತ್ತೂರು ಅಧಿವಕ್ತಾ ಪರಿಷತ್, ದ.ಕ. ಜಿಲ್ಲೆ ಮತ್ತು ಮಹಿಳಾ ಬಂಧುತ್ವ ವೇದಿಕೆ ಸಹಯೋಗದೊಂದಿಗೆ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ಹಿರಿಯ ಛಾಯಾಗ್ರಹಕ ಕುಶಾಲಪ್ಪ ರೈ ರವರಿಗೆ ಗೌರವಾರ್ಪಣೆ

Suddi Udaya

ಗಮಕ, ಯಕ್ಷಗಾನದಲ್ಲಿ ವಿಶೇಷ ಸಾಧನೆ: ಮಧೂರು ಮೋಹನ ಕಲ್ಲೂರಾಯರಿಗೆ ರಾಜ್ಯ ಪ್ರಶಸ್ತಿ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗ ವತಿಯಿಂದ ಪ್ರಥಮ ದ್ವಿತೀಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ.ಎ ಓರಿಯೆಂಟಷನ್  ಕಾರ್ಯಕ್ರಮ

Suddi Udaya

ಓಡಿಲ್ನಾಳ ಸುಮಂತ್ ಕೊಲೆ ಪ್ರಕರಣ: ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು

Suddi Udaya
error: Content is protected !!