23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ: ಮಕ್ಕಳನ್ನು ಶಾಲೆಗೆ ಕಳುಹಿಸಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ: ಬೈಕ್ ನ್ನು ಸೊಂಡಿಲಿನಿಂದ ಕೆಡವಿ ಕಾಲಿನಿಂದ ತುಳಿದು ಸಂಪೂರ್ಣ ಹಾನಿಗೊಳಿಸಿದ ಕಾಡಾನೆ

ಶಿಶಿಲ: ಮಕ್ಕಳನ್ನು ಶಾಲೆಗೆ ಕಳುಹಿಸಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಘಟನೆ ನ.21ರಂದು ಶಿಶಿಲದಲ್ಲಿ ನಡೆದಿದೆ.


ಶಿಶಿಲ ಗ್ರಾಮದ ಕಳ್ಳಾಜೆ ನಿವಾಸಿ ವಸಂತ ಗೌಡ ತನ್ನ ಮಕ್ಕಳನ್ನು ಶಿಬಾಜೆ ಗ್ರಾಮದ ಪೆರ್ಲ ಶಾಲೆಗೆ ಬಿಡಲು ನ.21ರಂದು ಬೆಳಿಗ್ಗೆ 8.30ರ ಸುಮಾರಿಗೆ ಹೋಗುತ್ತಿದ್ದಾಗ ಮಾರ್ಗ ತಿರುವಿನ ಮಧ್ಯೆ ಒಂಟಿ ಸಲಗವೊಂದು ಕಾಣಿಸಿಕೊಂಡಿದೆ. ಭಯದಿಂದ ತನ್ನ ಬೈಕ್ ಅನ್ನು ಸಡನ್ನಾಗಿ ಬ್ರೇಕ್ ಹಾಕಿ ನಿಲ್ಲಿಸಿದಾಗ ಬೈಕ್ ನಿಂದ ಬಿದ್ದು ವಸಂತ ಗೌಡ ಮತ್ತು ಮಕ್ಕಳಾದ ಲಾವ್ಯ, ಹಾಗೂ ಅದ್ವಿತ್ ಗೆ ಮೊಣಕಾಲು ಮತ್ತು ಕೈ ಗಳಿಗೆ ಗಾಯಗಳಾಗಿದೆ. ಅವರು ಬೈಕ್ ಅನ್ನು ಬಿಟ್ಟು ಅಲ್ಲಿಂದ ಓಡಿ ತಪ್ಪಿಸಿಕೊಂಡು ಮನೆ ಸೇರಿದ್ದಾರೆ.

ಓಡುತ್ತಿದ್ದಂತೆಯೇ ಬೈಕ್ ಕಡೆಗೆ ಆಗಮಿಸಿದ ಒಂಟಿ ಸಲಗ ಬೈಕ್ ಅನ್ನು ಸೊಂಡಿಲಿನಿಂದ ಕೆಡವಿ ಕಾಲಿನಿಂದ ತುಳಿದು ಸಂಪೂರ್ಣ ಹಾನಿ ಗೊಳಿಸಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಪ್ರಕ್ರಿಯಿಸಿದ ಗ್ರಾಮಸ್ಥರು ಕೂಡಲೇ ಅರಣ್ಯ ಇಲಾಖೆಯವರು ಆನೆಗಳನ್ನು ಓಡಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತಿದ್ದಾರೆ.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಜಾಗೃತಿ ಸಪ್ತಾಹ ಕಾರ್ಯಕ್ರಮ

Suddi Udaya

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಒತ್ತಾಯ: ಸೆ.3: ಬೆಳ್ತಂಗಡಿಯಲ್ಲಿ ಪ್ರಜಾಪ್ರಭುತ್ವ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಉಜಿರೆ ಶ್ರೀ ಧ.ಮಂ. ಎಜ್ಯುಕೇಶನಲ್ ಸೊಸೈಟಿಯಿಂದ 33 ಮಂದಿ ನಿವೃತ್ತ ಸಿಬ್ಬಂದಿಗಳಿಗೆ ಸನ್ಮಾನ ಮತ್ತು ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟೀಸ್

Suddi Udaya

ಧರ್ಮಸ್ಥಳದಲ್ಲಿ 51ನೇ ವರ್ಷದ ಸಾಮೂಹಿಕ ವಿವಾಹ 201 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಬಂದಾರು: ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನ

Suddi Udaya
error: Content is protected !!