26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಧರ್ಮಸ್ಥಳ ಯಕ್ಷಗಾನ ಮೇಳ: ಸೇವೆ ಬಯಲಾಟ ಪ್ರದರ್ಶನ

ಧರ್ಮಸ್ಥಳ : ನಾಡಿನ ಪವಿತ್ರ ಕ್ಷೇತ್ರ  ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200 ವರ್ಷಗಳ ಭವ್ಯ ಇತಿಹಾಸ ಮತ್ತು ಪರಂಪರೆ ಇದೆ.
(ನ.21) ಇಂದಿನಿಂದ 2025ರ ಮೇ 23ರ ವರೆಗೆ ಭಕ್ತಾದಿಗಳ ವತಿಯಿಂದ ಸೇವೆ ಬಯಲಾಟ ಪ್ರದರ್ಶನ ಆಯೋಜಿಸಲಾಗಿದೆ.
ಕಳೆದ ಏಳು ವರ್ಷಗಳಿಂದ ಸಂಜೆ ಗಂಟೆ 7 ರಿಂದ ರಾತ್ರಿ 12 ಗಂಟೆ ವರೆಗೆ ಕಾಲಮಿತಿಯ ಬಯಲಾಟ ಪ್ರದರ್ಶನ ಆಯೋಜಿಸಲಾಗುತ್ತಿದೆ. ಇದರಿಂದಾಗಿ ಕಲಾಭಿಮಾನಿ ಪ್ರೇಕ್ಷಕರಿಂದಲೂ ಉತ್ತಮ ಪ್ರತಿಕ್ರಿಯೆ, ಪ್ರೋತ್ಸಾಹ ಬರುತ್ತಿದೆ. ಕಲಾವಿದರಿಗೂ  ಹೆಚ್ಚಿನ ಅಧ್ಯಯನ, ಅಭ್ಯಾಸಕ್ಕೂ ಅನುಕೂಲವಾಗುತ್ತದೆ.
ಸಾಂಪ್ರದಾಯಿಕ ವೇಷಭೂಷಣಗಳು, ಜಾನಪದ ಶೈಲಿಯ ಪರಂಪರೆಯ ಪ್ರದರ್ಶನ, ಕೇವಲ ಪೌರಾಣಿಕ ಪ್ರಸಂಗಗಳ ಪ್ರದರ್ಶನ ಧರ್ಮಸ್ಥಳ ಮೇಳದ ವೈಶಿಷ್ಟ್ಯವಾಗಿದೆ. ಸೇವೆ ಬಯಲಾಟ ಪ್ರದರ್ಶನದೊಂದಿಗೆ ಧರ್ಮಪ್ರಭಾವನೆ ಹಾಗೂ ನೈತಿಕ ಮೌಲ್ಯಗಳ ಉದ್ದೀಪನಕ್ಕೂ ಪ್ರೋತ್ಸಾಹ ನೀಡಲಾಗುತ್ತದೆ.


ಸೇವೆ ಬಯಲಾಟ ಪ್ರದರ್ಶನದ ಊರುಗಳಲ್ಲಿ ಮೇಳದ ಜೊತೆ ಇರುವ ಶ್ರೀ ಮಹಾಗಣಪತಿ ದೇವರನ್ನು ವೈಭವದ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಈ ವೇಳೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು.

Related posts

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಕನ್ಯಾಡಿ ಶ್ರೀ ಗುರುದೇವ ಮಠಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ಜ.25 , 26 : ಬೆಳ್ತಂಗಡಿ ಟೀಂ ಅಭಯಹಸ್ತ ಆಶ್ರಯದಲ್ಲಿ ಅಷ್ಟಮ ವರ್ಷದ ಅದ್ಧೂರಿ ಕಾರ್ಯಕ್ರಮ

Suddi Udaya

ಕಳಿಯ: ಕುಳಾಯಿ ಮೇಗಿನ ಮನೆ ಕೃಷಿಕ ಜಗನ್ನಾಥ ಶೆಟ್ಟಿ ನಿಧನ

Suddi Udaya

ಮಡಂತ್ಯಾರು ನಲ್ಲಿ ಅಮಿತ್ ಶಾ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

Suddi Udaya
error: Content is protected !!