September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಧರ್ಮಸ್ಥಳ ಯಕ್ಷಗಾನ ಮೇಳ: ಸೇವೆ ಬಯಲಾಟ ಪ್ರದರ್ಶನ

ಧರ್ಮಸ್ಥಳ : ನಾಡಿನ ಪವಿತ್ರ ಕ್ಷೇತ್ರ  ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200 ವರ್ಷಗಳ ಭವ್ಯ ಇತಿಹಾಸ ಮತ್ತು ಪರಂಪರೆ ಇದೆ.
(ನ.21) ಇಂದಿನಿಂದ 2025ರ ಮೇ 23ರ ವರೆಗೆ ಭಕ್ತಾದಿಗಳ ವತಿಯಿಂದ ಸೇವೆ ಬಯಲಾಟ ಪ್ರದರ್ಶನ ಆಯೋಜಿಸಲಾಗಿದೆ.
ಕಳೆದ ಏಳು ವರ್ಷಗಳಿಂದ ಸಂಜೆ ಗಂಟೆ 7 ರಿಂದ ರಾತ್ರಿ 12 ಗಂಟೆ ವರೆಗೆ ಕಾಲಮಿತಿಯ ಬಯಲಾಟ ಪ್ರದರ್ಶನ ಆಯೋಜಿಸಲಾಗುತ್ತಿದೆ. ಇದರಿಂದಾಗಿ ಕಲಾಭಿಮಾನಿ ಪ್ರೇಕ್ಷಕರಿಂದಲೂ ಉತ್ತಮ ಪ್ರತಿಕ್ರಿಯೆ, ಪ್ರೋತ್ಸಾಹ ಬರುತ್ತಿದೆ. ಕಲಾವಿದರಿಗೂ  ಹೆಚ್ಚಿನ ಅಧ್ಯಯನ, ಅಭ್ಯಾಸಕ್ಕೂ ಅನುಕೂಲವಾಗುತ್ತದೆ.
ಸಾಂಪ್ರದಾಯಿಕ ವೇಷಭೂಷಣಗಳು, ಜಾನಪದ ಶೈಲಿಯ ಪರಂಪರೆಯ ಪ್ರದರ್ಶನ, ಕೇವಲ ಪೌರಾಣಿಕ ಪ್ರಸಂಗಗಳ ಪ್ರದರ್ಶನ ಧರ್ಮಸ್ಥಳ ಮೇಳದ ವೈಶಿಷ್ಟ್ಯವಾಗಿದೆ. ಸೇವೆ ಬಯಲಾಟ ಪ್ರದರ್ಶನದೊಂದಿಗೆ ಧರ್ಮಪ್ರಭಾವನೆ ಹಾಗೂ ನೈತಿಕ ಮೌಲ್ಯಗಳ ಉದ್ದೀಪನಕ್ಕೂ ಪ್ರೋತ್ಸಾಹ ನೀಡಲಾಗುತ್ತದೆ.


ಸೇವೆ ಬಯಲಾಟ ಪ್ರದರ್ಶನದ ಊರುಗಳಲ್ಲಿ ಮೇಳದ ಜೊತೆ ಇರುವ ಶ್ರೀ ಮಹಾಗಣಪತಿ ದೇವರನ್ನು ವೈಭವದ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಈ ವೇಳೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು.

Related posts

ಅಂಡಿಂಜೆ: ಯುವಕ ಮಂಡಲದಿಂದ ಮೊಸರು ಕುಡಿಕೆ ಉತ್ಸವ, ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಆಪರೇಷನ್ ಸಿಂಧೂರ್” – ಪಹಲ್ಗಾಮ್ ದಾಳಿಗೆ ಪ್ರತೀಕಾರ

Suddi Udaya

ಗುರುವಾಯನಕೆರೆ: ಎಕ್ಸೆಲ್‌ ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಗುರು ನಮನ ಹಾಗೂ 272 ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಗುರುವಾಯನಕೆರೆ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ಅಧ್ಯಕ್ಷರಾಗಿ ಸತ್ಯಪಾಲನ್ ನಾಯರ್, ಕಾರ್ಯದರ್ಶಿಯಾಗಿ ಮಾನ್ಯ ಆಯ್ಕೆ

Suddi Udaya

ಅಳದಂಗಡಿ ಆಟೋ ಚಾಲಕ-ಮಾಲಕರ ಸಂಘದ ಅಧ್ಯಕ್ಷರಾಗಿ ಕಿರಣ್ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ ಅಂಗನವಾಡಿ ಚರ್ಚ್ ನಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!