25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಧರ್ಮಸ್ಥಳ ಯಕ್ಷಗಾನ ಮೇಳ: ಸೇವೆ ಬಯಲಾಟ ಪ್ರದರ್ಶನ

ಧರ್ಮಸ್ಥಳ : ನಾಡಿನ ಪವಿತ್ರ ಕ್ಷೇತ್ರ  ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200 ವರ್ಷಗಳ ಭವ್ಯ ಇತಿಹಾಸ ಮತ್ತು ಪರಂಪರೆ ಇದೆ.
(ನ.21) ಇಂದಿನಿಂದ 2025ರ ಮೇ 23ರ ವರೆಗೆ ಭಕ್ತಾದಿಗಳ ವತಿಯಿಂದ ಸೇವೆ ಬಯಲಾಟ ಪ್ರದರ್ಶನ ಆಯೋಜಿಸಲಾಗಿದೆ.
ಕಳೆದ ಏಳು ವರ್ಷಗಳಿಂದ ಸಂಜೆ ಗಂಟೆ 7 ರಿಂದ ರಾತ್ರಿ 12 ಗಂಟೆ ವರೆಗೆ ಕಾಲಮಿತಿಯ ಬಯಲಾಟ ಪ್ರದರ್ಶನ ಆಯೋಜಿಸಲಾಗುತ್ತಿದೆ. ಇದರಿಂದಾಗಿ ಕಲಾಭಿಮಾನಿ ಪ್ರೇಕ್ಷಕರಿಂದಲೂ ಉತ್ತಮ ಪ್ರತಿಕ್ರಿಯೆ, ಪ್ರೋತ್ಸಾಹ ಬರುತ್ತಿದೆ. ಕಲಾವಿದರಿಗೂ  ಹೆಚ್ಚಿನ ಅಧ್ಯಯನ, ಅಭ್ಯಾಸಕ್ಕೂ ಅನುಕೂಲವಾಗುತ್ತದೆ.
ಸಾಂಪ್ರದಾಯಿಕ ವೇಷಭೂಷಣಗಳು, ಜಾನಪದ ಶೈಲಿಯ ಪರಂಪರೆಯ ಪ್ರದರ್ಶನ, ಕೇವಲ ಪೌರಾಣಿಕ ಪ್ರಸಂಗಗಳ ಪ್ರದರ್ಶನ ಧರ್ಮಸ್ಥಳ ಮೇಳದ ವೈಶಿಷ್ಟ್ಯವಾಗಿದೆ. ಸೇವೆ ಬಯಲಾಟ ಪ್ರದರ್ಶನದೊಂದಿಗೆ ಧರ್ಮಪ್ರಭಾವನೆ ಹಾಗೂ ನೈತಿಕ ಮೌಲ್ಯಗಳ ಉದ್ದೀಪನಕ್ಕೂ ಪ್ರೋತ್ಸಾಹ ನೀಡಲಾಗುತ್ತದೆ.


ಸೇವೆ ಬಯಲಾಟ ಪ್ರದರ್ಶನದ ಊರುಗಳಲ್ಲಿ ಮೇಳದ ಜೊತೆ ಇರುವ ಶ್ರೀ ಮಹಾಗಣಪತಿ ದೇವರನ್ನು ವೈಭವದ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಈ ವೇಳೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು.

Related posts

ಬಳಂಜ ಬಿಲ್ಲವ ಸಂಘದ ಧತ್ತಿನಿಧಿಗೆ ಹುಂಬೆಜೆ ರಾಮಣ್ಣ ಪೂಜಾರಿ ಸ್ಮರಣಾರ್ಥ ರೂ.10 ಸಾವಿರ ದೇಣಿಗೆ

Suddi Udaya

ವೇಣೂರು ಮಸೀದಿಯ ಅಧ್ಯಕ್ಷ ಹಾಜಿ ವಿ. ಅಬೂಬಕ್ಕರ್ ನಿಧನ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ದಶಮ ಸಂಭ್ರಮದ ಸಭಾ ಕಾರ್ಯಕ್ರಮ

Suddi Udaya

ಮುಂಡ್ರುಪಾಡಿ ವಸಂತಿರವರ ಮನೆಯ ಮೇಲೆ ಬಿದ್ದ ಮರ: ಧರ್ಮಸ್ಥಳ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಬಳಂಜ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಸಾಮಾಜಿಕ ಜಾಲತಾಣಗಳ ಮುಖಾಂತರ ಸುಳ್ಳು ಸುದ್ದಿಗಳನ್ನು ಹರಡುತ್ತಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಕಾಂಗ್ರೆಸ್ ಜಿಲ್ಲಾ ಸಾಮಾಜಿಕ ಜಾಲಾತಾಣ ವಿಭಾಗದ ಪ್ರಧಾನ ಕಾರ್ಯದರ್ಶಿ ಗಣೇಶ್ ರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya
error: Content is protected !!