24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ-ಚಾರ್ಮಾಡಿ ಭರದಿಂದ ಸಾಗುತ್ತಿರುವ ಹೆದ್ದಾರಿ ಅಭಿವೃದ್ಧಿ ಕಾಮಗಾರಿ

ಬೆಳ್ತಂಗಡಿ: ಮಳೆ ದೂರವಾಗುತ್ತಿದ್ದಂತೆ ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಭಿವೃದ್ಧಿಯ ಕಾಮಗಾರಿಗೆ ಮತ್ತೆ ವೇಗ ದೊರಕಿದೆ. ಕಳೆದ ಸುಮಾರು ಒಂದು ತಿಂಗಳಿನಿಂದ ಮತ್ತೆ ಕಾಮಗಾರಿ ಆರಂಭವಾಗಿದೆ. ಮಳೆ ಇರುವ ಸಮಯ ಚರಂಡಿ ದುರಸ್ತಿ, ರಸ್ತೆ ಹೊಂಡ ಮುಚ್ಚುವುದು, ಕೆಸರು ತೆರವುಗೊಳಿಸುವುದು ಚರಂಡಿ ಸ್ವಚ್ಛತೆ, ರಸ್ತೆಗೆ ಚರಲ್ ಹಾಕುವ ಕೆಲಸಗಳು ನಡೆದಿದೆ.


ಹಾಲಿ ರಸ್ತೆಯನ್ನು ಸಮತಟ್ಟುಗೊಳಿಸುವ, ಡಾಂಬರೀಕರಣ ನಡೆಸುವ, ಚರಂಡಿಗಳ ನಿರ್ಮಾಣ, ಜಲ್ಲಿ ಹಾಕುವ ಕಾಮಗಾರಿಗಳು ನಡೆಯುತ್ತಿವೆ. ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಎರಡನೇ ಹಂತದ ಅಭಿವೃದ್ಧಿ ಕಾಮಗಾರಿಯ ಬೃಹತ್ ಅನುದಾನದ ಯೋಜನೆಯನ್ನು ಮೊದಲಿಗೆ ನಾಗಪುರ ಡಿಪಿ ಜೈನ್ ಕಂಪನಿ ವಹಿಸಿಕೊಂಡಿತ್ತು. ಈ ಸಮಯ ಬೇಕಾಬಿಟ್ಟಿ ಕಾಮಗಾರಿ ನಿರ್ವಹಿಸಿದ ಕಂಪನಿ ವಾಹನ ಸಂಚಾರಕ್ಕೆ ಸಾಕಷ್ಟು ಅಡ್ಡಿ ಉಂಟು ಮಾಡಿತ್ತು. ಮಳೆಗಾಲದಲ್ಲಿ ಮದ್ದಡ್ಕ, ಕಾಶಿಬೆಟ್ಟು, ಉಜಿರೆ, ಸೋಮಂತಡ್ಕ ಮೊದಲಾದ ಕಡೆ ವಾಹನ ಸಂಚಾರ ನಡೆಸುವುದಕ್ಕೆ ಭಾರಿ ತೊಂದರೆ ಉಂಟಾಗಿತ್ತು.


ಬಳಿಕ ಕಂಪನಿ ನಾನಾ ಕಾರಣಗಳಿಂದ ಕೆಲಸ ಮುಂದುವರಿಸಲಾರದೆ ಮುಗ್ರೋಡಿ ಕನ್ಸ್ಟ್ರಕ್ಷನ್‌ಗೆ ಒಳಗುತ್ತಿಗೆ ಮೂಲಕ ಕಾಮಗಾರಿ ನಿರ್ವಹಿಸುವ ಒಪ್ಪಂದ ಮಾಡಿಕೊಂಡಿತ್ತು.ಕಂಪನಿ ಬದಲಾಗುತ್ತಿದ್ದಂತೆ ಕಾಮಗಾರಿಗೆ ಚುರುಕು ಮುಟ್ಟಿತು. ಮಳೆ ಸಮಯದಲ್ಲಿ ಕಂಪನಿ ವಾಹನ ಸಂಚಾರಕ್ಕೆ ರಸ್ತೆಯನ್ನು ಯೋಗ್ಯವಾಗಿ ಮಾಡಿಕೊಡುವಲ್ಲಿ ಸಾಕಷ್ಟ್ಟು ಶ್ರಮ ವಹಿಸಿತ್ತು.


ಮುಂಡಾಜೆಯ ಸೀಟು ವ್ಯಾಪ್ತಿಯಲ್ಲಿ ಅಗೆದು ಹಾಕಲಾದ ರಸ್ತೆಗೆ ಈಗ ಡಾಂಬರೀಕರಣ ನಡೆಸುವ ಕಾಮಗಾರಿ ಪ್ರಗತಿಯಲ್ಲಿದೆ. ಉಳಿದಂತೆ ಉಜಿರೆಯಲ್ಲಿ ಚರಂಡಿಗಳನ್ನು ನಿರ್ಮಿಸುವ, ಮದ್ದಡ್ಕ, ಹಳೆಕೋಟೆಯಲ್ಲಿ ರಸ್ತೆ ಅಗಲೀಕರಣ, ಮುಂಡಾಜೆ ಬೆಳ್ತಂಗಡಿಯಲ್ಲಿ ಸೇತುವೆ ನಿರ್ಮಾಣದ ಕಾಮಗಾರಿಗಳು ನಡೆಯುತ್ತಿವೆ.

Related posts

ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದ ಮಹಿಳೆಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ಸುಮಾರು ರೂ. 12.90 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಇದರ ನೇತೃತ್ವ ರೂ. 6 ಕೋಟಿ ವೆಚ್ಚದ ನೂತನವಾಗಿ ನಿರ್ಮಿಸಲಾದ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಹಾಗೂ ವಾಣಿ ವಿದ್ಯಾಸಂಸ್ಥೆಗಳ ನೂತನ ಕಟ್ಟಡ ಎ.20 ರಂದು ಶೃಂಗೇರಿ ಮಠದ ಶ್ರೀಮಜ್ಜದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿಯವರಿಂದ ಲೋಕಾರ್ಪಣೆ

Suddi Udaya

ಮಾಲಾಡಿ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆ

Suddi Udaya

ಹಿರಿಯ ಸಾಹಿತಿ ಎನ್ ಜಿ ಪಟವರ್ಧನ್ ಅವರ ಕೃತಿ ‘ಆಟ’ ಲೋಕಾರ್ಪಣೆ

Suddi Udaya

ಉಜಿರೆ: ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಡಳಿತ ಮಂಡಳಿಯ ಸೌಹಾರ್ದ ಸಭೆ ನಡೆದಿಲ್ಲ

Suddi Udaya
error: Content is protected !!