26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ-ಚಾರ್ಮಾಡಿ ಭರದಿಂದ ಸಾಗುತ್ತಿರುವ ಹೆದ್ದಾರಿ ಅಭಿವೃದ್ಧಿ ಕಾಮಗಾರಿ

ಬೆಳ್ತಂಗಡಿ: ಮಳೆ ದೂರವಾಗುತ್ತಿದ್ದಂತೆ ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಭಿವೃದ್ಧಿಯ ಕಾಮಗಾರಿಗೆ ಮತ್ತೆ ವೇಗ ದೊರಕಿದೆ. ಕಳೆದ ಸುಮಾರು ಒಂದು ತಿಂಗಳಿನಿಂದ ಮತ್ತೆ ಕಾಮಗಾರಿ ಆರಂಭವಾಗಿದೆ. ಮಳೆ ಇರುವ ಸಮಯ ಚರಂಡಿ ದುರಸ್ತಿ, ರಸ್ತೆ ಹೊಂಡ ಮುಚ್ಚುವುದು, ಕೆಸರು ತೆರವುಗೊಳಿಸುವುದು ಚರಂಡಿ ಸ್ವಚ್ಛತೆ, ರಸ್ತೆಗೆ ಚರಲ್ ಹಾಕುವ ಕೆಲಸಗಳು ನಡೆದಿದೆ.


ಹಾಲಿ ರಸ್ತೆಯನ್ನು ಸಮತಟ್ಟುಗೊಳಿಸುವ, ಡಾಂಬರೀಕರಣ ನಡೆಸುವ, ಚರಂಡಿಗಳ ನಿರ್ಮಾಣ, ಜಲ್ಲಿ ಹಾಕುವ ಕಾಮಗಾರಿಗಳು ನಡೆಯುತ್ತಿವೆ. ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಎರಡನೇ ಹಂತದ ಅಭಿವೃದ್ಧಿ ಕಾಮಗಾರಿಯ ಬೃಹತ್ ಅನುದಾನದ ಯೋಜನೆಯನ್ನು ಮೊದಲಿಗೆ ನಾಗಪುರ ಡಿಪಿ ಜೈನ್ ಕಂಪನಿ ವಹಿಸಿಕೊಂಡಿತ್ತು. ಈ ಸಮಯ ಬೇಕಾಬಿಟ್ಟಿ ಕಾಮಗಾರಿ ನಿರ್ವಹಿಸಿದ ಕಂಪನಿ ವಾಹನ ಸಂಚಾರಕ್ಕೆ ಸಾಕಷ್ಟು ಅಡ್ಡಿ ಉಂಟು ಮಾಡಿತ್ತು. ಮಳೆಗಾಲದಲ್ಲಿ ಮದ್ದಡ್ಕ, ಕಾಶಿಬೆಟ್ಟು, ಉಜಿರೆ, ಸೋಮಂತಡ್ಕ ಮೊದಲಾದ ಕಡೆ ವಾಹನ ಸಂಚಾರ ನಡೆಸುವುದಕ್ಕೆ ಭಾರಿ ತೊಂದರೆ ಉಂಟಾಗಿತ್ತು.


ಬಳಿಕ ಕಂಪನಿ ನಾನಾ ಕಾರಣಗಳಿಂದ ಕೆಲಸ ಮುಂದುವರಿಸಲಾರದೆ ಮುಗ್ರೋಡಿ ಕನ್ಸ್ಟ್ರಕ್ಷನ್‌ಗೆ ಒಳಗುತ್ತಿಗೆ ಮೂಲಕ ಕಾಮಗಾರಿ ನಿರ್ವಹಿಸುವ ಒಪ್ಪಂದ ಮಾಡಿಕೊಂಡಿತ್ತು.ಕಂಪನಿ ಬದಲಾಗುತ್ತಿದ್ದಂತೆ ಕಾಮಗಾರಿಗೆ ಚುರುಕು ಮುಟ್ಟಿತು. ಮಳೆ ಸಮಯದಲ್ಲಿ ಕಂಪನಿ ವಾಹನ ಸಂಚಾರಕ್ಕೆ ರಸ್ತೆಯನ್ನು ಯೋಗ್ಯವಾಗಿ ಮಾಡಿಕೊಡುವಲ್ಲಿ ಸಾಕಷ್ಟ್ಟು ಶ್ರಮ ವಹಿಸಿತ್ತು.


ಮುಂಡಾಜೆಯ ಸೀಟು ವ್ಯಾಪ್ತಿಯಲ್ಲಿ ಅಗೆದು ಹಾಕಲಾದ ರಸ್ತೆಗೆ ಈಗ ಡಾಂಬರೀಕರಣ ನಡೆಸುವ ಕಾಮಗಾರಿ ಪ್ರಗತಿಯಲ್ಲಿದೆ. ಉಳಿದಂತೆ ಉಜಿರೆಯಲ್ಲಿ ಚರಂಡಿಗಳನ್ನು ನಿರ್ಮಿಸುವ, ಮದ್ದಡ್ಕ, ಹಳೆಕೋಟೆಯಲ್ಲಿ ರಸ್ತೆ ಅಗಲೀಕರಣ, ಮುಂಡಾಜೆ ಬೆಳ್ತಂಗಡಿಯಲ್ಲಿ ಸೇತುವೆ ನಿರ್ಮಾಣದ ಕಾಮಗಾರಿಗಳು ನಡೆಯುತ್ತಿವೆ.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದ್ವೇಷ ರಾಜಕೀಯ ಹಾಗೂ ಬೆಲೆ ಏರಿಕೆ ಖಂಡಿಸಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಮಂಜೂಷಾ ವಸ್ತು ಸಂಗ್ರಹಾಲಯವನ್ನು ವಿಶ್ವದಲ್ಲೇ ಅತಿದೊಡ್ಡ ಏಕ ವ್ಯಕ್ತಿ ಸಂಗ್ರಹಾಲಯ ಎಂದು ಗುರುತಿಸಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾಗಿ ಚಿದಾನಂದ ಪೂಜಾರಿ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕಿನ ಗ್ರಾ.ಪಂ. ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ವಿವರ

Suddi Udaya

ಮಚ್ಚಿನ ಗ್ರಾ.ಪಂ. ಅಧ್ಯಕ್ಷರಾಗಿ ರುಕ್ಮಿಣಿ, ಉಪಾಧ್ಯಕ್ಷರಾಗಿ ಸೋಮಾವತಿ ಆಯ್ಕೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ದೀಪ ಪ್ರಧಾನ ಕಾರ್ಯಕ್ರಮ

Suddi Udaya
error: Content is protected !!