September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ತೆಲಂಗಾಣ ಸರಕಾರದ ಸಚಿವ ಪೊನ್ನಂ ಪ್ರಭಾಕರ್ ಭೇಟಿ

ಬೆಳ್ತಂಗಡಿ: ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ತೆಲಂಗಾಣ ಸರಕಾರದ ಸಾರಿಗೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪೊನ್ನಂ ಪ್ರಭಾಕರ್ ಅವರು ನ.21ರಂದು ಭೇಟಿ ನೀಡಿದರು.

ಸಂಘದ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿ, ಸಹಕಾರಿ ಸಂಘವೊಂದು ನಗರದಲ್ಲಿ ಸುಂದರವಾದ ಸುಸಜ್ಜಿತ ಸೌಲಭ್ಯಗಳ ಕಟ್ಟಡವನ್ನು ಹೊಂದಿರುವುದಕ್ಕೆ ಹಾಗೂ ಸಂಘದ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಂಘದ ವತಿಯಿಂದ ಸಂಘದ ಉಪಾಧ್ಯಕ್ಷರಾದ ಭಗೀರಥ ಜಿ. ಹಾಗೂ ನಿರ್ದೇಶಕರಾದ ಸುಜೀತಾ ವಿ.ಬಂಗೇರ, ರಕ್ಷಿತ್ ಶಿವರಾಂ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ್ ಕುಮಾರ್ ಅವರು ಪೊನ್ನಂ ಪ್ರಭಾಕರ್ ಅವರನ್ನು ಶಾಲು ಹೊದಿಸಿ, ಪೇಟಾ ತೋಡಿಸಿ, ಗೌರವಿಸಿದರು.

ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಸದಸ್ಯ ಶೇಖರ ಕುಕ್ಕೇಡಿ, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್, ಕೇಂದ್ರ ಕಚೇರಿಯ ವ್ಯವಸ್ಥಾಪಕ ಕೀರ್ತನ್ ಕುಮಾರ್, ಮಾರಾಟ ಅಧಿಕಾರಿ ಶಿವಪ್ರಕಾಶ್, ಮಾನವ ಸಂಪನ್ಮೂಲ ಅಧಿಕಾರಿ ರೂಪಲತಾ, ಕಕ್ಕಿಂಜೆ ಶಾಖಾ ಕಚೇರಿ ವ್ಯವಸ್ಥಾಪಕ ಜಾರಪ್ಪ ಪೂಜಾರಿ, ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಅಳದಂಗಡಿ: ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ನಿಂದ ಅರ್ಹರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ: ಕಲಶಾಭಿಷೇಕ, ದರ್ಶನ ಬಲಿ

Suddi Udaya

ಬೆಳ್ತಂಗಡಿ: ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರುಗಳ ಆಯ್ಕೆ

Suddi Udaya

ಗುರುವಾಯನಕೆರೆ: ಪಣೆಜಾಲಿನ ನಿವಾಸಿ ಪ್ರವೀಣ್ ಪ್ರಭು ನಿಧನ

Suddi Udaya

ಉಜಿರೆ: ನಾಪತ್ತೆಯಾಗಿದ್ದ ಕ್ರೀಡಾ ವಸತಿ ನಿಲಯದ ಪಿಯುಸಿ ವಿದ್ಯಾರ್ಥಿನಿ ಹೈದರಾಬಾದ್ ನಲ್ಲಿ ಪತ್ತೆ

Suddi Udaya

ಯಶಸ್ವಿ ಸಹಕಾರಿ‌ ಸಪ್ತಾಹ: ಮಡಂತ್ಯಾರು ಸೊಸೈಟಿ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾರವರಿಗೆ ಗೌರವಾರ್ಪಣೆ

Suddi Udaya
error: Content is protected !!