25.6 C
ಪುತ್ತೂರು, ಬೆಳ್ತಂಗಡಿ
June 1, 2025
ಗ್ರಾಮಾಂತರ ಸುದ್ದಿ

ಮಿತ್ತಬಾಗಿಲು:ಹರ್ಝತ್ ಸೈದಾನಿ ಬೀಬಿ ದರ್ಗಾದಲ್ಲಿ ಮಾಸಿಕ 9 ನೇ ಸ್ವಲಾತ್ ಕಾರ್ಯಕ್ರಮ

  • ವಿಕಾಲಾಂಗರಿಗೆ ನೆರವು-ವಿದ್ಯಾ ಪ್ರೋತ್ಸಾಹ ಧನ ಹಸ್ತಾಂತರ

ಮಿತ್ತಬಾಗಿಲು: ಹರ್ಝತ್ ಸೈದಾನಿ ಬೀಬಿ ದರ್ಗಾ ವಠಾರದಲ್ಲಿ ನ 25 ರಂದು ಗುರುವಾರ ಮಾಸಿಕ 9 ನೇ ಸ್ವಲಾತ್ ಕಾರ್ಯಕ್ರಮ ಜರಗಿದ್ದು ನೂರಾರು ಭಕ್ತರು ಸಾಕ್ಷಿಗಳಾಗಿದ್ದರು.

ಸಂಸ್ಥೆಯು ಅಂಗವಿಕಲರಿಗೆ, ಅಸಹಾಯಕ ನಿರ್ಗತಿಕರಿಗೆ, ವಿಧವೆಯರಿಗೆ, ವಿಧ್ಯಾಭ್ಯಾಸಕ್ಕೆ ಮತ್ತು ಬಡ ಮಕ್ಕಳ ಮದುವೆಗಾಗಿ ಪ್ರತಿ ತಿಂಗಳು ಸಹಾಯಮಾಡುತ್ತಿದ್ದು ಸ್ವಲಾತ್ ಸಂದರ್ಭದಲ್ಲಿ ಸಂಪೂರ್ಣ ಅಂಗವಿಕಲರಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ನಿವಾಸಿಯವರಾದ ನಾರಾಯಣ ಗೌಡ ಎಂಬವರ ಪರವಾಗಿ ಅವರ ಪತ್ನಿ ಶ್ರೀಮತಿ ಕುಸುಮಾವತಿಯವರಿಗೆ 2024ನೇ ಇಸವಿಯ ಜೂನ್ ತಿಂಗಳಿನಿಂದ ಮಾಸಿಕ ರೂ.2000/- ಯಂತೆ ಅಂಗವಿಕಲರಿಗಾಗುವ ಸಹಾಯದನದ ಪ್ರಥಮ ಕಂತನ್ನು ವಿತರಿಸಲಾಯಿತು.

ಅದೇ ರೀತಿ 2024ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ. ಪಿ.ಕವನ ಶ್ರೀ ಎಂಬವಳಿಗೆ ವಿದ್ಯಾಭ್ಯಾಸಕ್ಕಾಗಿ ರೂ.5000/- ಸಹಾಯದವನ್ನು ಅವಳ ಪರವಾಗಿ ಪಾವತಿಸಲಾಯಿತು. ಬೆಳ್ತಂಗಡಿ ವಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮುಷ್ಕನ್ ಕೌಸರ್ ರಾಜ್ಯದಲ್ಲಿ 7 ನೇ Rank ಪಡೆದಿದ್ದು ಅವಳಿಗೆ ರೂ.25000/- ಚೆಕ್ ಮುಖಾಂತರ ವಿತರಿಸಲಾಯಿತು.

Related posts

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ನಿಂದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಕಂಬಳದ ನಂದಳಿಕೆಯ ಪಾಂಡು ಕೋಣಕ್ಕೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವದಲ್ಲಿ ನಿರಂತರ ವಿವಿಧ ಭಜನಾ ತಂಡದಿಂದ ಭಜನಾ ಸೇವೆ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಯಶಸ್ಸಿಗೆ ಸಹಕರಿಸಿದವರಿಗೆ ಅಭಿನಂದನಾ ಸಭೆ

Suddi Udaya

ಶಿಬಾಜೆ: ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಗೆ ಯತ್ನ, ಅರಣ್ಯ ಇಲಾಖೆ ಅಧಿಕಾರಿಗಳಿಂದ ಮೂವರು ಆರೋಪಿಗಳ ಬಂಧನ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲದಿಂದ 20ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಬೆಳ್ತಂಗಡಿ: ಜ್ಯೋತಿ ಆಸ್ಪತ್ರೆಯಲ್ಲಿ ಜ್ಯೋತಿ ಆರೋಗ್ಯ ಕಾರ್ಡ್ ಬಿಡುಗಡೆ: ಕಳೆದ 19 ವರ್ಷಗಳಿಂದ ಉತ್ತಮ‌ ಸೇವೆಗೆ ಹೆಸರುವಾಸಿಯಾದ ಆಸ್ಪತ್ರೆ

Suddi Udaya
error: Content is protected !!