22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಮಿತ್ತಬಾಗಿಲು:ಹರ್ಝತ್ ಸೈದಾನಿ ಬೀಬಿ ದರ್ಗಾದಲ್ಲಿ ಮಾಸಿಕ 9 ನೇ ಸ್ವಲಾತ್ ಕಾರ್ಯಕ್ರಮ

  • ವಿಕಾಲಾಂಗರಿಗೆ ನೆರವು-ವಿದ್ಯಾ ಪ್ರೋತ್ಸಾಹ ಧನ ಹಸ್ತಾಂತರ

ಮಿತ್ತಬಾಗಿಲು: ಹರ್ಝತ್ ಸೈದಾನಿ ಬೀಬಿ ದರ್ಗಾ ವಠಾರದಲ್ಲಿ ನ 25 ರಂದು ಗುರುವಾರ ಮಾಸಿಕ 9 ನೇ ಸ್ವಲಾತ್ ಕಾರ್ಯಕ್ರಮ ಜರಗಿದ್ದು ನೂರಾರು ಭಕ್ತರು ಸಾಕ್ಷಿಗಳಾಗಿದ್ದರು.

ಸಂಸ್ಥೆಯು ಅಂಗವಿಕಲರಿಗೆ, ಅಸಹಾಯಕ ನಿರ್ಗತಿಕರಿಗೆ, ವಿಧವೆಯರಿಗೆ, ವಿಧ್ಯಾಭ್ಯಾಸಕ್ಕೆ ಮತ್ತು ಬಡ ಮಕ್ಕಳ ಮದುವೆಗಾಗಿ ಪ್ರತಿ ತಿಂಗಳು ಸಹಾಯಮಾಡುತ್ತಿದ್ದು ಸ್ವಲಾತ್ ಸಂದರ್ಭದಲ್ಲಿ ಸಂಪೂರ್ಣ ಅಂಗವಿಕಲರಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ನಿವಾಸಿಯವರಾದ ನಾರಾಯಣ ಗೌಡ ಎಂಬವರ ಪರವಾಗಿ ಅವರ ಪತ್ನಿ ಶ್ರೀಮತಿ ಕುಸುಮಾವತಿಯವರಿಗೆ 2024ನೇ ಇಸವಿಯ ಜೂನ್ ತಿಂಗಳಿನಿಂದ ಮಾಸಿಕ ರೂ.2000/- ಯಂತೆ ಅಂಗವಿಕಲರಿಗಾಗುವ ಸಹಾಯದನದ ಪ್ರಥಮ ಕಂತನ್ನು ವಿತರಿಸಲಾಯಿತು.

ಅದೇ ರೀತಿ 2024ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ. ಪಿ.ಕವನ ಶ್ರೀ ಎಂಬವಳಿಗೆ ವಿದ್ಯಾಭ್ಯಾಸಕ್ಕಾಗಿ ರೂ.5000/- ಸಹಾಯದವನ್ನು ಅವಳ ಪರವಾಗಿ ಪಾವತಿಸಲಾಯಿತು. ಬೆಳ್ತಂಗಡಿ ವಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮುಷ್ಕನ್ ಕೌಸರ್ ರಾಜ್ಯದಲ್ಲಿ 7 ನೇ Rank ಪಡೆದಿದ್ದು ಅವಳಿಗೆ ರೂ.25000/- ಚೆಕ್ ಮುಖಾಂತರ ವಿತರಿಸಲಾಯಿತು.

Related posts

ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ರವರ ನೂತನ ಕಚೇರಿ ಉದ್ಘಾಟನೆ

Suddi Udaya

ನಾವೂರು ಗ್ರಾಮ ಪಂಚಾಯತ್ ನ ವಿಶೇಷ ಗ್ರಾಮ ಸಭೆ

Suddi Udaya

ರಾಜ್ಯಮಟ್ಟದ ಡಿಸ್ಕಸ್ ಥ್ರೋ: ಬಳಂಜದ ಸುಷ್ಮಾ ಬಿ ಪೂಜಾರಿ ಪ್ರಥಮ

Suddi Udaya

ಲಾಯಿಲದಲ್ಲಿ ಗುರುಪೂಜೆ ಹಾಗೂ ಪ್ರೋತ್ಸಾಹಧನ ವಿತರಣೆ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಮಾನಸಿಕ ಅಸ್ವಸ್ಥನನ್ನು ಸಿಯೋನ್ ಆಶ್ರಮಕ್ಕೆ ಸೇರಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!