25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಮಿತ್ತಬಾಗಿಲು:ಹರ್ಝತ್ ಸೈದಾನಿ ಬೀಬಿ ದರ್ಗಾದಲ್ಲಿ ಮಾಸಿಕ 9 ನೇ ಸ್ವಲಾತ್ ಕಾರ್ಯಕ್ರಮ

  • ವಿಕಾಲಾಂಗರಿಗೆ ನೆರವು-ವಿದ್ಯಾ ಪ್ರೋತ್ಸಾಹ ಧನ ಹಸ್ತಾಂತರ

ಮಿತ್ತಬಾಗಿಲು: ಹರ್ಝತ್ ಸೈದಾನಿ ಬೀಬಿ ದರ್ಗಾ ವಠಾರದಲ್ಲಿ ನ 25 ರಂದು ಗುರುವಾರ ಮಾಸಿಕ 9 ನೇ ಸ್ವಲಾತ್ ಕಾರ್ಯಕ್ರಮ ಜರಗಿದ್ದು ನೂರಾರು ಭಕ್ತರು ಸಾಕ್ಷಿಗಳಾಗಿದ್ದರು.

ಸಂಸ್ಥೆಯು ಅಂಗವಿಕಲರಿಗೆ, ಅಸಹಾಯಕ ನಿರ್ಗತಿಕರಿಗೆ, ವಿಧವೆಯರಿಗೆ, ವಿಧ್ಯಾಭ್ಯಾಸಕ್ಕೆ ಮತ್ತು ಬಡ ಮಕ್ಕಳ ಮದುವೆಗಾಗಿ ಪ್ರತಿ ತಿಂಗಳು ಸಹಾಯಮಾಡುತ್ತಿದ್ದು ಸ್ವಲಾತ್ ಸಂದರ್ಭದಲ್ಲಿ ಸಂಪೂರ್ಣ ಅಂಗವಿಕಲರಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ನಿವಾಸಿಯವರಾದ ನಾರಾಯಣ ಗೌಡ ಎಂಬವರ ಪರವಾಗಿ ಅವರ ಪತ್ನಿ ಶ್ರೀಮತಿ ಕುಸುಮಾವತಿಯವರಿಗೆ 2024ನೇ ಇಸವಿಯ ಜೂನ್ ತಿಂಗಳಿನಿಂದ ಮಾಸಿಕ ರೂ.2000/- ಯಂತೆ ಅಂಗವಿಕಲರಿಗಾಗುವ ಸಹಾಯದನದ ಪ್ರಥಮ ಕಂತನ್ನು ವಿತರಿಸಲಾಯಿತು.

ಅದೇ ರೀತಿ 2024ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ. ಪಿ.ಕವನ ಶ್ರೀ ಎಂಬವಳಿಗೆ ವಿದ್ಯಾಭ್ಯಾಸಕ್ಕಾಗಿ ರೂ.5000/- ಸಹಾಯದವನ್ನು ಅವಳ ಪರವಾಗಿ ಪಾವತಿಸಲಾಯಿತು. ಬೆಳ್ತಂಗಡಿ ವಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮುಷ್ಕನ್ ಕೌಸರ್ ರಾಜ್ಯದಲ್ಲಿ 7 ನೇ Rank ಪಡೆದಿದ್ದು ಅವಳಿಗೆ ರೂ.25000/- ಚೆಕ್ ಮುಖಾಂತರ ವಿತರಿಸಲಾಯಿತು.

Related posts

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಉದ್ಘಾಟನೆ

Suddi Udaya

ಮನಕಲಕುವ ಹೃದಯ ವಿದ್ರಾವಕ ಘಟನೆ: ನಲ್ಲೂರು ಬಳಿ ಬೈಕ್- ಮಿನಿ ಲಾರಿ ನಡುವೆ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಕ್ಕಳು ಸೇರಿ ನಾಲ್ವರು ದುರ್ಮರಣ

Suddi Udaya

ಕೊಕ್ಕಡ : ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ದೈವಸ್ಥಾನದಲ್ಲಿ ಕಲಶಾಭಿಷೇಕ, ದೈವಗಳಿಗೆ ತಂಬಿಲ ಸೇವೆ

Suddi Udaya

ಕೊಲೆ ಸಮರ್ಥನಿಯವೂ ಅಲ್ಲ, ಅನುಕರಣೀಯವೂ ಅಲ್ಲ: ರಕ್ಷಿತ್ ಶಿವರಾಂ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಜೀವನ ಕೌಶಲ’ ಕಾರ್ಯಾಗಾರ

Suddi Udaya

ಪ್ರಸಿದ್ದ ಪುಣ್ಯಕ್ಷೇತ್ರ ಶಿರ್ಡಿ ಸಾಯಿಬಾಬಾ ಕ್ಷೇತ್ರಕ್ಕೆ ತೀರ್ಥಯಾತ್ರೆ ಕೈಗೊಂಡ ಬೆಳ್ತಂಗಡಿಯ ನೂರಾರು ಭಕ್ತರು

Suddi Udaya
error: Content is protected !!