September 6, 2026
ಗ್ರಾಮಾಂತರ ಸುದ್ದಿ

ಮಿತ್ತಬಾಗಿಲು:ಹರ್ಝತ್ ಸೈದಾನಿ ಬೀಬಿ ದರ್ಗಾದಲ್ಲಿ ಮಾಸಿಕ 9 ನೇ ಸ್ವಲಾತ್ ಕಾರ್ಯಕ್ರಮ

  • ವಿಕಾಲಾಂಗರಿಗೆ ನೆರವು-ವಿದ್ಯಾ ಪ್ರೋತ್ಸಾಹ ಧನ ಹಸ್ತಾಂತರ

ಮಿತ್ತಬಾಗಿಲು: ಹರ್ಝತ್ ಸೈದಾನಿ ಬೀಬಿ ದರ್ಗಾ ವಠಾರದಲ್ಲಿ ನ 25 ರಂದು ಗುರುವಾರ ಮಾಸಿಕ 9 ನೇ ಸ್ವಲಾತ್ ಕಾರ್ಯಕ್ರಮ ಜರಗಿದ್ದು ನೂರಾರು ಭಕ್ತರು ಸಾಕ್ಷಿಗಳಾಗಿದ್ದರು.

ಸಂಸ್ಥೆಯು ಅಂಗವಿಕಲರಿಗೆ, ಅಸಹಾಯಕ ನಿರ್ಗತಿಕರಿಗೆ, ವಿಧವೆಯರಿಗೆ, ವಿಧ್ಯಾಭ್ಯಾಸಕ್ಕೆ ಮತ್ತು ಬಡ ಮಕ್ಕಳ ಮದುವೆಗಾಗಿ ಪ್ರತಿ ತಿಂಗಳು ಸಹಾಯಮಾಡುತ್ತಿದ್ದು ಸ್ವಲಾತ್ ಸಂದರ್ಭದಲ್ಲಿ ಸಂಪೂರ್ಣ ಅಂಗವಿಕಲರಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ನಿವಾಸಿಯವರಾದ ನಾರಾಯಣ ಗೌಡ ಎಂಬವರ ಪರವಾಗಿ ಅವರ ಪತ್ನಿ ಶ್ರೀಮತಿ ಕುಸುಮಾವತಿಯವರಿಗೆ 2024ನೇ ಇಸವಿಯ ಜೂನ್ ತಿಂಗಳಿನಿಂದ ಮಾಸಿಕ ರೂ.2000/- ಯಂತೆ ಅಂಗವಿಕಲರಿಗಾಗುವ ಸಹಾಯದನದ ಪ್ರಥಮ ಕಂತನ್ನು ವಿತರಿಸಲಾಯಿತು.

ಅದೇ ರೀತಿ 2024ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ. ಪಿ.ಕವನ ಶ್ರೀ ಎಂಬವಳಿಗೆ ವಿದ್ಯಾಭ್ಯಾಸಕ್ಕಾಗಿ ರೂ.5000/- ಸಹಾಯದವನ್ನು ಅವಳ ಪರವಾಗಿ ಪಾವತಿಸಲಾಯಿತು. ಬೆಳ್ತಂಗಡಿ ವಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮುಷ್ಕನ್ ಕೌಸರ್ ರಾಜ್ಯದಲ್ಲಿ 7 ನೇ Rank ಪಡೆದಿದ್ದು ಅವಳಿಗೆ ರೂ.25000/- ಚೆಕ್ ಮುಖಾಂತರ ವಿತರಿಸಲಾಯಿತು.

Related posts

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ನಡೆದ ಕಣಿಯೂರು ಮಹಾಶಕ್ತಿ ಕೇಂದ್ರ ಸಭೆ

Suddi Udaya

ಶಾಸಕ ಹರೀಶ್ ಪೂಂಜ ಹಾಗೂ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ‘ದಸ್ಕತ್’ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಜೆಸಿಐ ಮಡಂತ್ಯಾರು ಆತಿಥ್ಯದಲ್ಲಿ ಅದ್ದೂರಿ ವ್ಯವಹಾರ ಸಮ್ಮೇಳನ 2025 – ಮೃದಂಗ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ: ಶಾಸ್ತಾರ ದೇವರ ಗರ್ಭ ಗುಡಿಯ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಮೇ 24: ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya
error: Content is protected !!