23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ: ಮಕ್ಕಳನ್ನು ಶಾಲೆಗೆ ಕಳುಹಿಸಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ: ಬೈಕ್ ನ್ನು ಸೊಂಡಿಲಿನಿಂದ ಕೆಡವಿ ಕಾಲಿನಿಂದ ತುಳಿದು ಸಂಪೂರ್ಣ ಹಾನಿಗೊಳಿಸಿದ ಕಾಡಾನೆ

ಶಿಶಿಲ: ಮಕ್ಕಳನ್ನು ಶಾಲೆಗೆ ಕಳುಹಿಸಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಘಟನೆ ನ.21ರಂದು ಶಿಶಿಲದಲ್ಲಿ ನಡೆದಿದೆ.


ಶಿಶಿಲ ಗ್ರಾಮದ ಕಳ್ಳಾಜೆ ನಿವಾಸಿ ವಸಂತ ಗೌಡ ತನ್ನ ಮಕ್ಕಳನ್ನು ಶಿಬಾಜೆ ಗ್ರಾಮದ ಪೆರ್ಲ ಶಾಲೆಗೆ ಬಿಡಲು ನ.21ರಂದು ಬೆಳಿಗ್ಗೆ 8.30ರ ಸುಮಾರಿಗೆ ಹೋಗುತ್ತಿದ್ದಾಗ ಮಾರ್ಗ ತಿರುವಿನ ಮಧ್ಯೆ ಒಂಟಿ ಸಲಗವೊಂದು ಕಾಣಿಸಿಕೊಂಡಿದೆ. ಭಯದಿಂದ ತನ್ನ ಬೈಕ್ ಅನ್ನು ಸಡನ್ನಾಗಿ ಬ್ರೇಕ್ ಹಾಕಿ ನಿಲ್ಲಿಸಿದಾಗ ಬೈಕ್ ನಿಂದ ಬಿದ್ದು ವಸಂತ ಗೌಡ ಮತ್ತು ಮಕ್ಕಳಾದ ಲಾವ್ಯ, ಹಾಗೂ ಅದ್ವಿತ್ ಗೆ ಮೊಣಕಾಲು ಮತ್ತು ಕೈ ಗಳಿಗೆ ಗಾಯಗಳಾಗಿದೆ. ಅವರು ಬೈಕ್ ಅನ್ನು ಬಿಟ್ಟು ಅಲ್ಲಿಂದ ಓಡಿ ತಪ್ಪಿಸಿಕೊಂಡು ಮನೆ ಸೇರಿದ್ದಾರೆ.

ಓಡುತ್ತಿದ್ದಂತೆಯೇ ಬೈಕ್ ಕಡೆಗೆ ಆಗಮಿಸಿದ ಒಂಟಿ ಸಲಗ ಬೈಕ್ ಅನ್ನು ಸೊಂಡಿಲಿನಿಂದ ಕೆಡವಿ ಕಾಲಿನಿಂದ ತುಳಿದು ಸಂಪೂರ್ಣ ಹಾನಿ ಗೊಳಿಸಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಪ್ರಕ್ರಿಯಿಸಿದ ಗ್ರಾಮಸ್ಥರು ಕೂಡಲೇ ಅರಣ್ಯ ಇಲಾಖೆಯವರು ಆನೆಗಳನ್ನು ಓಡಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತಿದ್ದಾರೆ.

Related posts

ಉಜಿರೆ: ಶಿಕ್ಷಕರ ದಿನಾಚರಣೆಯ ಅಂಗವಾಗಿ ನಡೆದ ಹಲವು ಸ್ಪರ್ಧೆಗಳಲ್ಲಿ ಎಸ್.ಡಿ.ಎಮ್ ಅನುದಾನಿತ ಸೆಕೆಂಡರಿ ಶಾಲೆಗೆ ಪ್ರಶಸ್ತಿ

Suddi Udaya

ನಾರಾವಿ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ನೂತನ ಸಮಿತಿ ರಚನೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಮೋಹನ್ ಕುಮಾರ್ ಕಚೇರಿಗೆ ಕ್ಯಾ. ಬ್ರಿಜೇಶ್ ಚೌಟ ಭೇಟಿ:

Suddi Udaya

ಹಂಸ ಮೊಯ್ಲಿ ರವರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿಯವರಿಂದ ಸಂತಾಪ

Suddi Udaya

ಕಾವಳಮುಡೂರು ಧೂಮಳಿಕೆ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರು ವಧೆ ಪೊಲೀಸ್ ದಾಳಿ ಆರೋಪಿಗಳು ಪರಾರಿ

Suddi Udaya
error: Content is protected !!