September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ: ಮಕ್ಕಳನ್ನು ಶಾಲೆಗೆ ಕಳುಹಿಸಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ: ಬೈಕ್ ನ್ನು ಸೊಂಡಿಲಿನಿಂದ ಕೆಡವಿ ಕಾಲಿನಿಂದ ತುಳಿದು ಸಂಪೂರ್ಣ ಹಾನಿಗೊಳಿಸಿದ ಕಾಡಾನೆ

ಶಿಶಿಲ: ಮಕ್ಕಳನ್ನು ಶಾಲೆಗೆ ಕಳುಹಿಸಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಘಟನೆ ನ.21ರಂದು ಶಿಶಿಲದಲ್ಲಿ ನಡೆದಿದೆ.


ಶಿಶಿಲ ಗ್ರಾಮದ ಕಳ್ಳಾಜೆ ನಿವಾಸಿ ವಸಂತ ಗೌಡ ತನ್ನ ಮಕ್ಕಳನ್ನು ಶಿಬಾಜೆ ಗ್ರಾಮದ ಪೆರ್ಲ ಶಾಲೆಗೆ ಬಿಡಲು ನ.21ರಂದು ಬೆಳಿಗ್ಗೆ 8.30ರ ಸುಮಾರಿಗೆ ಹೋಗುತ್ತಿದ್ದಾಗ ಮಾರ್ಗ ತಿರುವಿನ ಮಧ್ಯೆ ಒಂಟಿ ಸಲಗವೊಂದು ಕಾಣಿಸಿಕೊಂಡಿದೆ. ಭಯದಿಂದ ತನ್ನ ಬೈಕ್ ಅನ್ನು ಸಡನ್ನಾಗಿ ಬ್ರೇಕ್ ಹಾಕಿ ನಿಲ್ಲಿಸಿದಾಗ ಬೈಕ್ ನಿಂದ ಬಿದ್ದು ವಸಂತ ಗೌಡ ಮತ್ತು ಮಕ್ಕಳಾದ ಲಾವ್ಯ, ಹಾಗೂ ಅದ್ವಿತ್ ಗೆ ಮೊಣಕಾಲು ಮತ್ತು ಕೈ ಗಳಿಗೆ ಗಾಯಗಳಾಗಿದೆ. ಅವರು ಬೈಕ್ ಅನ್ನು ಬಿಟ್ಟು ಅಲ್ಲಿಂದ ಓಡಿ ತಪ್ಪಿಸಿಕೊಂಡು ಮನೆ ಸೇರಿದ್ದಾರೆ.

ಓಡುತ್ತಿದ್ದಂತೆಯೇ ಬೈಕ್ ಕಡೆಗೆ ಆಗಮಿಸಿದ ಒಂಟಿ ಸಲಗ ಬೈಕ್ ಅನ್ನು ಸೊಂಡಿಲಿನಿಂದ ಕೆಡವಿ ಕಾಲಿನಿಂದ ತುಳಿದು ಸಂಪೂರ್ಣ ಹಾನಿ ಗೊಳಿಸಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಪ್ರಕ್ರಿಯಿಸಿದ ಗ್ರಾಮಸ್ಥರು ಕೂಡಲೇ ಅರಣ್ಯ ಇಲಾಖೆಯವರು ಆನೆಗಳನ್ನು ಓಡಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತಿದ್ದಾರೆ.

Related posts

ಧರ್ಮಸ್ಥಳ: ಬಿಜೆಪಿ ಮಂಡಲದ ನೂತನ ಅಧ್ಯಕ್ಷ ಶ್ರೀನಿವಾಸ್ ರಾವ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಮಲೆಬೆಟ್ಟು: ಬದಿನಡೆ ಶ್ರೀ ವನದುರ್ಗಾ ದೇವಿಯ ಸನ್ನಿಧಿಯಲ್ಲಿ ಸಿಂಧೂರ’ ವಿಜಯೋತ್ಸವ ಪ್ರಯುಕ್ತ ವಿಶೇಷ ಪೂಜೆ

Suddi Udaya

ಡಿ.12: ವಿದ್ಯುತ್ ನಿಲುಗಡೆ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಶಿಕ್ಷಕರ ದಿನಾಚರಣೆ: ಪ್ರತಿಯೊಬ್ಬರೂ ಉನ್ನತವಾದ ಸ್ಥಾನದಲ್ಲಿ ಇರಬೇಕಾದರೆ ಮುಖ್ಯ ಕಾರಣ ಶಿಕ್ಷಕರು: ಕಿಶೋರ್ ಕುಮಾರ್

Suddi Udaya

ಗುರುವಾಯನಕೆರೆ: ರಸ್ತೆ ಮಧ್ಯೆ ಕೆಟ್ಟು ನಿಂತ ಸಾರಿಗೆ ಬಸ್-ಟ್ರಾಫಿಕ್ ಜಾಮ್

Suddi Udaya

ಹತ್ಯಡ್ಕ: ನಿವೃತ್ತ ಶಿಕ್ಷಕ ಮಹಾದೇವ ಹೆಬ್ಬಾರ್ ನಿಧನ

Suddi Udaya
error: Content is protected !!