September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿನೂತನ ಶೈಲಿಯಲ್ಲಿ ಪ್ಯಾಂಟ್ ಧರಿಸಿ ಬೆಳ್ತಂಗಡಿ ಸಂತೆಕಟ್ಟೆಗೆ ಬಂದ ಯುವಕ: ವಿಡಿಯೋ ಮಾಡಿ ಯುವಕನ ಪ್ಯಾಂಟ್ ನ್ನು ಸೂಜಿಯಿಂದ ಹೊಲಿದ ಕಿಡಿಗೇಡಿಗಳು: ನೊಂದ ಯುವಕ ಆತ್ಮಹತ್ಯೆಗೆ ಯತ್ನ

ಬೆಳ್ತಂಗಡಿ : ಅಮಾಯಕ ಯುವಕನೊಬ್ಬ ತನ್ನ ವಿನೂತನ ಶೈಲಿಯಲ್ಲಿ ಪ್ಯಾಂಟ್ ಧರಿಸಿ ಮಾರುಕಟ್ಟೆಗೆ ಬಂದಾಗ ಮೂರು ಜನ ಕಿಡಿಗೇಡಿಗಳ ಗುಂಪು ತಮಾಷೆಗಾಗಿ ಆತನನ್ನು ತಡೆದು ನಿಲ್ಲಿಸಿ ಆತನ ಎರಡು ಕೈಗಳನ್ನು ಹಿಂದಕ್ಕೆ ಲಾಕ್‌ ಮಾಡಿ ಹಿಡಿದು ಪ್ಯಾಂಟನ್ನು ಹೊಲಿದು ಅದರ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು. ಬಳಿಕ ಈ ವಿಡಿಯೋ ನೋಡಿದ ಯುವಕ ಮನನೊಂದು ಸಂಜೆ ವೇಳೆಗೆ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾ‌ರೆ.

ಪಣಕಜೆ ನಿವಾಸಿ ಮುಹಮ್ಮದ್ ಹಾಯಿಫ್ ಎಂಬವರ ಪುತ್ರ ಶಾಹಿಲ್ (21ವ) ಎಂಬ ಯುವಕ ಈವಾಗಿನ ನವೀನ ಮಾದರಿಯ ಪ್ಯಾಂಟ್ ಧರಿಸಿ ನ.21 ರಂದು ಮಧ್ಯಾಹ್ನ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಗೆ ಬಂದಿದ್ದು. ಮಾರುಕಟ್ಟೆಯಲ್ಲಿದ್ದ ಯುವಕರ ತಂಡವೊಂದು ಸಾರ್ವಜನಿಕವಾಗಿ ಎರಡು ಕೈಗಳನ್ನು ಹಿಂದಕ್ಕೆ ಹಿಡಿದಿಟ್ಟು ಆತನ ಪ್ಯಾಂಟನ್ನು ಸೂಜಿಯಿಂದ ಹೊಲಿದು ಜೊತೆಗೆ ಮೊಬೈಲ್ ನಲ್ಲಿ ವೀಡಿಯೊ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿದ್ದರೆನ್ನಲಾಗಿದೆ. ಶಬೀರ್ , ಅನೀಶ್, ಬಾಬ್ ಜಾನ್ ಎಂಬವರು ಸೇರಿ ಈ ಕೃತ್ಯ ನಡೆಸಿದ್ದಾರೆ ಎಂದು ಆರೋಪಿಸಿ ಲಾಗುತ್ತಿದೆ.

ವಿಡಿಯೋ ಮಾಡಿ ಟ್ರೋಲ್ ಮಾಡಿದರಿಂದ ಮಾನಸಿಕವಾಗಿ ನೊಂದ ಯುವಕ ಶಾಹಿಲ್ ಆತ್ಮಹತ್ಯೆಗೆ ಯತ್ನಿಸಿದ್ದು. ತಕ್ಷಣ ಚಿಕಿತ್ಸೆಗಾಗಿ ಮನೆಯವರು ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿದ್ದು ಪ್ರಥಮ ಚಿಕಿತ್ಸೆಯ ನಂತರ ಯುವಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗಿದೆ. ಈ ಘಟನೆ ಬಗ್ಗೆ ಸಾರ್ವಜನಿಕರು ಈ ಮೂವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ..

Related posts

ಕುವೆಟ್ಟು ಜನಸ್ಪಂದನ ಸಭೆ

Suddi Udaya

ಧರ್ಮಸ್ಥಳ: ಅಶೋಕನಗರ ನಿವಾಸಿ ನಾಟಿ ವೈದ್ಯೆ, ಶತಾಯುಷಿ ಶ್ರೀಮತಿ ನೊಕ್ಕೆ ನಿಧನ

Suddi Udaya

ಗುರಿಪಳ್ಳ: ರಸ್ತೆಯ ಬದಿಯ ಚರಂಡಿಗೆ ಬಿದ್ದ ಬೈಕ್

Suddi Udaya

ಜ.4: ಸುಲ್ಕೇರಿ ನೂತನ ಶ್ರೀ ನೇಮಿನಾಥ ಸಭಾಭವನ ಉದ್ಘಾಟನೆ

Suddi Udaya

ನಾರಾವಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಮುಂಡಾಜೆ: ನಿರಂತರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಹಾನಿ

Suddi Udaya
error: Content is protected !!