April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜು: ಬಿಎನ್‌ವೈಎಸ್ ವಿದ್ಯಾರ್ಥಿಗಳ ಮತ್ತು ಪಿಜಿ ವಿದ್ಯಾರ್ಥಿಗಳ ಶಿಷ್ಯೋಪನಯನ

ಉಜಿರೆ: ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜಿನ ಶಿಷ್ಯೋಪನಯನ (36ನೇ ಬ್ಯಾಚ್ ಬಿಎನ್‌ವೈಎಸ್ ವಿದ್ಯಾರ್ಥಿಗಳು ಮತ್ತು 15ನೇ ಬ್ಯಾಚ್ ಪಿಜಿ ವಿದ್ಯಾರ್ಥಿಗಳು) ಕಾರ್ಯಕ್ರಮವು ಕಾಲೇಜಿನ ಮಾತೃಶ್ರೀ ಡಿ.ರತ್ನಮ್ಮ ಹೆಗ್ಗಡೆ ಸಭಾಂಗಣದಲ್ಲಿ ನ.22 ರಂದು ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಜೌಷಧಿ ರಹಿತವಾದ ಪ್ರಕೃತಿ ಚಿಕಿತ್ಸೆ ಇಂದು ಹೆಚ್ಚು ಪ್ರಸಿದ್ಧಿ ಪಡೆದಿದೆ. ನಿಮ್ಮಲ್ಲಿ ಕಲಿತ ವಿದ್ಯಾಥಿ೯ಗಳು ದೇಶದ ಎಲ್ಲ ಕಡೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.


ಉತ್ತರಾಖಂಡದ ಶತಾಯುಷಿ ಹಿಮಾಲಯದ ಸಂತ ಶ್ರೀ ಸದಾನಂದ ಗಿರಿ ಮಹಾರಾಜ್ ರವರು ಶಿಷ್ಯೋಪನಯನ ಭಾಷಣ ಮಾಡಿದರು. ಅಧ್ಯಕ್ಷತೆಯನ್ನು ಎಸ್.ಡಿ.ಎಮ್ ಸೊಸೈಟಿ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ವಹಿಸಿದ್ದರು . ಎಸ್‌ಡಿಎಂಸಿಎನ್‌ವೈಎಸ್ ಉಪ ಪ್ರಾಂಶುಪಾಲರು ಡಾ. ಸುಜಾತಾ ಸಂಕಲ್ಪ ಕಾರ್ಯಕ್ರಮ ನೆರವೇರಿಸಿದರು.

ಕಾರ್ಯಕ್ರಮದ ಆರಂಭದಲ್ಲಿ ಧ್ವನಂತರಿ ಹೋಮ ನಡೆಯಿತು.

ಎಸ್‌ಡಿಎಂಸಿಎನ್‌ವೈಎಸ್ ಕಾಲೇಜು ಪ್ರಾಂಶುಪಾಲರು ಡಾ. ಪ್ರಶಾಂತ್ ಶೆಟ್ಟಿ, ಸ್ವಾಗತಿಸಿದರು. ಸಂಸ್ಕೃತಿ ಎಂ ಜೈನ್ ನಿರೂಪಿಸಿ, ಎಸ್‌ಡಿಎಂಸಿಎನ್‌ವೈಎಸ್ ಪ್ರೊ. & ಡೀನ್ ಡಾ. ಗೀತಾ ಬಿ ಶೆಟ್ಟಿ, ಧನ್ಯವಾದವಿತ್ತರು.

Related posts

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕೆ. ರಾಧಾಕೃಷ್ಣ ಆಯ್ಕೆ

Suddi Udaya

ಉಜಿರೆ ದೇವಸ್ಥಾನದ ಜಾತ್ರೋತ್ಸವಕ್ಕೆ ಚಾಲನೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ಅಧಿಕಾರ ಸ್ವೀಕಾರ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರರಿಗೆ ಸಾವಿರದ ನುಡಿ ನಮನ ಕಾಯ೯ಕ್ರಮ

Suddi Udaya

ಧರ್ಮಸ್ಥಳ: ಕಟ್ಟದಬೈಲು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಕಾಶಿಪಟ್ಣ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಉದ್ಯೋಗ ಖಾತರಿ ಯೋಜನೆಯ ಕ್ರಿಯಾ ಯೋಜನೆ ವಿಶೇಷ ಗ್ರಾಮ ಸಭೆ

Suddi Udaya
error: Content is protected !!