25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಡಿರುದ್ಯಾವರ ಗ್ರಾಮ ಪಂಚಾಯತಿನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

ಕಡಿರುದ್ಯಾವರ : ಗ್ರಾಮೀಣ ಗ್ರಂಥಾಲಯಗಳು ಸಾರ್ವಜನಿಕರ ಜ್ಞಾನದಾಹವನ್ನು ನೀಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಈ ನಿಟ್ಟಿನಲ್ಲಿ ಓದುಗರಿಗೆ ಸಹಾಯಕವಾಗುವಂತೆ ಪುಸ್ತಕಗಳೊಂದಿಗೆ, ಡಿಜಿಟಲೀಕರಣಗೊಂಡ ಸಂಪನ್ಮೂಲಗಳನ್ನು ಹಾಗೂ ಉದ್ಯೋಗ ಕುರಿತ ಮಾಹಿತಿಗಳನ್ನು ಒದಗಿಸುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸಬೇಕು ಎಂದು ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ರವರು ಹೇಳಿದರು.

ಅವರು ನ.22 ರಂದು ಕಡಿರುದ್ಯಾವರ ಗ್ರಾಮ ಪಂಚಾಯತ್ ನಲ್ಲಿ ನೂತನ ಗ್ರಂಥಾಲಯವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರತ್ನಾವತಿ ಉಪಸ್ಥಿತರಿದ್ದು ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸಾವಿತ್ರಿ, ಎನ್.ಆರ್.ಎಲ್.ಎಮ್ ತಾಲೂಕು ಸಂಯೋಜಕರಾದ ಜಯಾನಂದ, ಗ್ರಂಥಾಲಯ ಸಲಹಾ ಸಮಿತಿ ಸದಸ್ಯರಾದ ಶ್ರೀಮತಿ ಲೋಕೇಶ್ವರೀ ವಿನಯಚಂದ್ರ, ಪ್ರಭಾಕರ ಶೆಣೈ, ಶ್ರೀಮತಿ ವರದಾಬಾಯಿ , ಶ್ರೀಮತಿ ವನಿತಾ, ಶ್ರೀಮತಿ ಆಶಾ ಅಡೂರು, ಸುರೇಶ ನಾಯ್ಕ, ಜನಾರ್ದನ ಕೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ನಿಂಗಣ್ಣ ಗೌಡ, ಕಾರ್ಯದರ್ಶಿ ಜನಾರ್ದನ ಗೌಡ, ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗ, ಸಂಜೀವಿನಿ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ನಿಂಗಣ್ಣ ಗೌಡ ಸ್ವಾಗತಿಸಿ, ವಂದಿಸಿದರು.

`

Related posts

ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣಹಾನಿ

Suddi Udaya

ಡಿ.16: ಮರೋಡಿ ಶಾರದಾಂಬ ಪ್ಲೇಯರ್ಸ್ ಆಶ್ರಯದಲ್ಲಿ ಪುರುಷರ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, “ಸ್ಪಂದನಾ ಟ್ರೋಫಿ-2023”

Suddi Udaya

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಯಶವಂತ, ಉಪಾಧ್ಯಕ್ಷರಾಗಿ ಜಾನಕಿ ಆಯ್ಕೆ

Suddi Udaya

ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷದ ಉಸ್ತುವಾರಿಯಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕು ತಂಡ ಪ್ರಥಮ ಸ್ಥಾನ

Suddi Udaya

ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಉಡುಪಿಯಲ್ಲಿ ಜಿಲ್ಲಾ ಮಟ್ಟದ ನೈತಿಕ ಶಿಕ್ಷಣ ಸ್ಪರ್ಧೆ ಉದ್ಘಾಟನೆ

Suddi Udaya
error: Content is protected !!