23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಡಿರುದ್ಯಾವರ ಗ್ರಾಮ ಪಂಚಾಯತಿನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

ಕಡಿರುದ್ಯಾವರ : ಗ್ರಾಮೀಣ ಗ್ರಂಥಾಲಯಗಳು ಸಾರ್ವಜನಿಕರ ಜ್ಞಾನದಾಹವನ್ನು ನೀಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಈ ನಿಟ್ಟಿನಲ್ಲಿ ಓದುಗರಿಗೆ ಸಹಾಯಕವಾಗುವಂತೆ ಪುಸ್ತಕಗಳೊಂದಿಗೆ, ಡಿಜಿಟಲೀಕರಣಗೊಂಡ ಸಂಪನ್ಮೂಲಗಳನ್ನು ಹಾಗೂ ಉದ್ಯೋಗ ಕುರಿತ ಮಾಹಿತಿಗಳನ್ನು ಒದಗಿಸುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸಬೇಕು ಎಂದು ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ರವರು ಹೇಳಿದರು.

ಅವರು ನ.22 ರಂದು ಕಡಿರುದ್ಯಾವರ ಗ್ರಾಮ ಪಂಚಾಯತ್ ನಲ್ಲಿ ನೂತನ ಗ್ರಂಥಾಲಯವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರತ್ನಾವತಿ ಉಪಸ್ಥಿತರಿದ್ದು ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸಾವಿತ್ರಿ, ಎನ್.ಆರ್.ಎಲ್.ಎಮ್ ತಾಲೂಕು ಸಂಯೋಜಕರಾದ ಜಯಾನಂದ, ಗ್ರಂಥಾಲಯ ಸಲಹಾ ಸಮಿತಿ ಸದಸ್ಯರಾದ ಶ್ರೀಮತಿ ಲೋಕೇಶ್ವರೀ ವಿನಯಚಂದ್ರ, ಪ್ರಭಾಕರ ಶೆಣೈ, ಶ್ರೀಮತಿ ವರದಾಬಾಯಿ , ಶ್ರೀಮತಿ ವನಿತಾ, ಶ್ರೀಮತಿ ಆಶಾ ಅಡೂರು, ಸುರೇಶ ನಾಯ್ಕ, ಜನಾರ್ದನ ಕೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ನಿಂಗಣ್ಣ ಗೌಡ, ಕಾರ್ಯದರ್ಶಿ ಜನಾರ್ದನ ಗೌಡ, ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗ, ಸಂಜೀವಿನಿ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ನಿಂಗಣ್ಣ ಗೌಡ ಸ್ವಾಗತಿಸಿ, ವಂದಿಸಿದರು.

`

Related posts

ಮಾಜಿ ಶಾಸಕ ದಿ. ಕೆ. ವಸಂತ ಬಂಗೇರ ಅವರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಿದ ಶಾಸಕ ಹರೀಶ್‌ ಪೂಂಜ

Suddi Udaya

ಕ್ಯಾಂಪ್ಕೊ ವತಿಯಿಂದ ಸಹಾಯಧನ ವಿತರಣೆ

Suddi Udaya

ಉರುವಾಲು: ದಿನಕರ ಪೂಜಾರಿ ಕಡ್ತಿಲ ನಿಧನ

Suddi Udaya

ಕೊಯ್ಯೂರು: ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನೂತನ ಸಮಿತಿ ರಚನೆ

Suddi Udaya

ನಡ: ಸಿಡಿಲು ಬಡಿದು ಹಾನಿಗೊಂಡ ಮನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ಭೇಟಿ, ಧನಸಹಾಯ

Suddi Udaya
error: Content is protected !!