25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಚ್ಚಿನದಲ್ಲಿ ಗ್ರಾಮಮಟ್ಟದ ಬಾಲ ಮೇಳ ಕಾರ್ಯಕ್ರಮ

ಮಚ್ಚಿನ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನೆ ಬೆಳ್ತಂಗಡಿ, ಗ್ರಾಮ ಪಂಚಾಯತ್ ಮಚ್ಚಿನ, ಸ್ತ್ರೀ ಶಕ್ತಿ ಗೊಂಚಲು ಮಚ್ಚಿನ ಇದರ ಆಶ್ರಯದಲ್ಲಿ ಗ್ರಾಮಮಟ್ಟದ ಬಾಲ ಮೇಳ ಕಾರ್ಯಕ್ರಮವು ಸಮುದಾಯ ಭವನ ಬಳ್ಳಮಂಜದಲ್ಲಿ ನ.21 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ನಾಯಕಿ ತನ್ವಿ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು. ಕರಾಯ ವಲಯದ ಮೇಲ್ವಿಚಾರಕಿ ಸುಮನ ಮಾತನಾಡಿ ಭಾರತದ ಮೊದಲ ಪ್ರಧಾನಿ ಜವಾಹರ ಲಾಲ್ ನೆಹರು ಇವರ ಜನ್ಮ ದಿನದ ಅಂಗವಾಗಿ ಮಕ್ಕಳ ದಿನಾಚರಣೆ ಬಾಳ ಮೇಳ ಕಾರ್ಯಕ್ರಮ ಅವರ ಹುಟ್ಟು ಹಬ್ಬದ ನೆನಪಿಗಾಗಿ ಪ್ರತಿ ವರ್ಷ ನಡೆಸುತ್ತಾ ಬರುತ್ತಿದ್ದು. ಮಕ್ಕಳ ಪ್ರತಿಭೆಗಳನ್ನು ಹೊರ ತರಲು ಇಂತಹ ಸುವರ್ಣ ಅವಕಾಶವನ್ನು ಮಚ್ಚಿನ ಗ್ರಾಮ ಮಟ್ಟದ ಬಾಲ ಮೇಳ ಕಾರ್ಯಕ್ರಮದಲ್ಲಿ ದೊರಕಿರುವುದು ತುಂಬ ಸಂತೋಷದ ವಿಷಯ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಉತ್ತಮವಾಗಿ ಬೆಳೆಯಲು ಇಂತಹ ಕಾರ್ಯಕ್ರಮ ಸಹಕಾರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯ ಪ್ರಮೋದ್ ಕುಮಾರ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಗೌರಿಶಂಕರ್ , ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಸೋಮಾವತಿ, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ವಸಂತಿ ಲಕ್ಷ್ಮಣ್, ಮಚ್ಚಿನ ಪ್ರಾಥಮಿಕ ಆರೋಗ್ಯ ಲೋಲಾಕ್ಷಿ, ಜಯಲಕ್ಷ್ಮಿ, ಮೊರಾರ್ಜಿ ಶಾಲಾ ಶಿಕ್ಷಕಿ ಆಶಾ, ಮಚ್ಚಿನ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕಿ ಅಮಿತಾ ಪಾಲಡ್ಕ, ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಉಮಾದೇವಿ ಉಪಸ್ಥಿತರಿದ್ದರು.

ಮಚ್ಚಿನ ಗ್ರಾಮದ 8 ಅಂಗನವಾಡಿ ಕೇಂದ್ರಗಳ ಮಕ್ಕಳ ಛದ್ಮವೇಷ ಸ್ಪರ್ಧೆ, ಡ್ಯಾನ್ಸ್ ಹಾಗೂ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು, ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಅಂಗನವಾಡಿ ಕೇಂದ್ರಗಳಲ್ಲಿ ಸಮಗ್ರ ಬಹುಮಾನವನ್ನು ಪ್ರಥಮ ನೆತ್ತರ ಅಂಗನವಾಡಿ ಕೇಂದ್ರ ಹಾಗೂ ದ್ವಿತೀಯ ತಾರೆಮಾರು ಅಂಗನವಾಡಿ ಕೇಂದ್ರ ಪಡೆದುಕೊಂಡಿತ್ತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಚ್ಚಿನ ಅಂಗನವಾಡಿ ಶಾಲಾ ನಾಯಕಿ ತನ್ವಿ ಶೆಟ್ಟಿ ಮಾತನಾಡಿ ಭಾಗವಹಿಸಿದ ಮೈಟ್ ಅಂಗನವಾಡಿ ಪುಟಾನಿಗಳಿಗೆ ಶುಭ ಹಾರೈಸಿದರು.

ನೆತ್ತರ ಅಂಗನವಾಡಿ ಶಿಕ್ಷಕಿ ಗೀತಲತಾ ಸ್ವಾಗತಿಸಿದರು. ಸದಾಶಿವ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು. ತಾರೆಮಾರ್ ಅಂಗನವಾಡಿ ಶಿಕ್ಷಕಿ ಪುಷ್ಪ ವಂದಿಸಿದರು. ಅಂಗನವಾಡಿ ಕೇಂದ್ರಗಳ ಶಿಕ್ಷಕಿಯರಾದ ಪದ್ಮಪ್ರಿಯ ಮಚ್ಚಿನ, ಪುಷ್ಪ ತಾರೆಮಾರ್, ನವನೀತ ಕುತ್ತಿನ, ಮೀನಾ ಕಲ್ಲಗುಡ್ಡೆ , ರಚಿತಾ ಮುಡಿಪಿರೆ, ವೇದಾವತಿ ಪಲಡ್ಕ, ಶ್ರೀಮತಿ ಕುದ್ರಕ್ಕ ಹಾಗೂ ಅಂಗನವಾಡಿ ಸಹಾಯಕಿಯರು , ಮಕ್ಕಳ ಪೋಷಕರು ಸಹಕರಿಸಿದರು.

ವರದಿ. ಹರ್ಷ ಬಳ್ಳಮಂಜ

Related posts

ಶಿಬಾಜೆ : ಅರಂಪಾದೆಯಲ್ಲಿ ಕೃಷಿ ತೋಟವನ್ನು ಅರಣ್ಯ ಇಲಾಖೆಯವರು ತೆರವುಗೊಳಿಸಿದ ಹಿನ್ನೆಲೆ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಪುಂಜಾಲಕಟ್ಟೆ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ಅಪಘಾತದಲ್ಲಿ ಮೃತರಾದ ಪ್ರೈಸ್ ಮ್ಯಾಥ್ಯೂ ರವರಿಗೆ ಬೆಳ್ತಂಗಡಿಯಲ್ಲಿ ಅಂತಿಮ ನಮನ: ಅಂತ್ಯಸಂಸ್ಕಾರಕ್ಕಾಗಿ ಕೇರಳದ ಇರಟ್ಟಿಗೆ ಪಾರ್ಥಿವ ಶರೀರ ರವಾನೆ

Suddi Udaya

ಲಾಯಿಲ: ಕುಂಟಿನಿಯಲ್ಲಿ ಮರ್ಹೂಂ ಸಾಹುಲ್ ಹಮೀದ್ ಉಜಿರೆ ರವರಿಗೆ ಮನೆ ಹಸ್ತಾಂತರ

Suddi Udaya

ಮಡಂತ್ಯಾರು ಸಿ ಎ ಬ್ಯಾಂಕಿನ ಮಾಜಿ ಅಧ್ಯಕ್ಷ ಮಹಾವೀರ ಬಲ್ಲಾಳ್ ನಿಧನ

Suddi Udaya

ಜೂ. 29 : ಉಜಿರೆಯಲ್ಲಿ ರೈನಾಥನ್ ಸ್ಪರ್ಧೆ, ಸಂತೋಷದಾಯಕ ಮಳೆಗಾಲದ ಓಟ: ಮಾದಕ ವ್ಯವಸನದ ಬಗ್ಗೆ ಜನಜಾಗೃತಿ ಮೂಡಿಸುವ ಉದ್ದೇಶವೇ ರೈನಥಾನ್-2025

Suddi Udaya
error: Content is protected !!