July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿನೂತನ ಶೈಲಿಯಲ್ಲಿ ಪ್ಯಾಂಟ್ ಧರಿಸಿ ಬೆಳ್ತಂಗಡಿ ಸಂತೆಕಟ್ಟೆಗೆ ಬಂದ ಯುವಕ: ವಿಡಿಯೋ ಮಾಡಿ ಯುವಕನ ಪ್ಯಾಂಟ್ ನ್ನು ಸೂಜಿಯಿಂದ ಹೊಲಿದ ಕಿಡಿಗೇಡಿಗಳು: ನೊಂದ ಯುವಕ ಆತ್ಮಹತ್ಯೆಗೆ ಯತ್ನ

ಬೆಳ್ತಂಗಡಿ : ಅಮಾಯಕ ಯುವಕನೊಬ್ಬ ತನ್ನ ವಿನೂತನ ಶೈಲಿಯಲ್ಲಿ ಪ್ಯಾಂಟ್ ಧರಿಸಿ ಮಾರುಕಟ್ಟೆಗೆ ಬಂದಾಗ ಮೂರು ಜನ ಕಿಡಿಗೇಡಿಗಳ ಗುಂಪು ತಮಾಷೆಗಾಗಿ ಆತನನ್ನು ತಡೆದು ನಿಲ್ಲಿಸಿ ಆತನ ಎರಡು ಕೈಗಳನ್ನು ಹಿಂದಕ್ಕೆ ಲಾಕ್‌ ಮಾಡಿ ಹಿಡಿದು ಪ್ಯಾಂಟನ್ನು ಹೊಲಿದು ಅದರ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು. ಬಳಿಕ ಈ ವಿಡಿಯೋ ನೋಡಿದ ಯುವಕ ಮನನೊಂದು ಸಂಜೆ ವೇಳೆಗೆ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾ‌ರೆ.

ಪಣಕಜೆ ನಿವಾಸಿ ಮುಹಮ್ಮದ್ ಹಾಯಿಫ್ ಎಂಬವರ ಪುತ್ರ ಶಾಹಿಲ್ (21ವ) ಎಂಬ ಯುವಕ ಈವಾಗಿನ ನವೀನ ಮಾದರಿಯ ಪ್ಯಾಂಟ್ ಧರಿಸಿ ನ.21 ರಂದು ಮಧ್ಯಾಹ್ನ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಗೆ ಬಂದಿದ್ದು. ಮಾರುಕಟ್ಟೆಯಲ್ಲಿದ್ದ ಯುವಕರ ತಂಡವೊಂದು ಸಾರ್ವಜನಿಕವಾಗಿ ಎರಡು ಕೈಗಳನ್ನು ಹಿಂದಕ್ಕೆ ಹಿಡಿದಿಟ್ಟು ಆತನ ಪ್ಯಾಂಟನ್ನು ಸೂಜಿಯಿಂದ ಹೊಲಿದು ಜೊತೆಗೆ ಮೊಬೈಲ್ ನಲ್ಲಿ ವೀಡಿಯೊ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿದ್ದರೆನ್ನಲಾಗಿದೆ. ಶಬೀರ್ , ಅನೀಶ್, ಬಾಬ್ ಜಾನ್ ಎಂಬವರು ಸೇರಿ ಈ ಕೃತ್ಯ ನಡೆಸಿದ್ದಾರೆ ಎಂದು ಆರೋಪಿಸಿ ಲಾಗುತ್ತಿದೆ.

ವಿಡಿಯೋ ಮಾಡಿ ಟ್ರೋಲ್ ಮಾಡಿದರಿಂದ ಮಾನಸಿಕವಾಗಿ ನೊಂದ ಯುವಕ ಶಾಹಿಲ್ ಆತ್ಮಹತ್ಯೆಗೆ ಯತ್ನಿಸಿದ್ದು. ತಕ್ಷಣ ಚಿಕಿತ್ಸೆಗಾಗಿ ಮನೆಯವರು ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿದ್ದು ಪ್ರಥಮ ಚಿಕಿತ್ಸೆಯ ನಂತರ ಯುವಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗಿದೆ. ಈ ಘಟನೆ ಬಗ್ಗೆ ಸಾರ್ವಜನಿಕರು ಈ ಮೂವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ..

Related posts

ಮಾಜಿ‌ ಸಚಿವ ಗಂಗಾಧರ ಗೌಡರವರಿಂದ ಹಕ್ಕು ಚಲಾವಣೆ

Suddi Udaya

‘ಎಸ್.ಡಿ.ಎಂ. ಉದ್ಯೋಗಂ – 2026’ ಬೃಹತ್ ಉದ್ಯೋಗ ಮೇಳ ಸಂಪನ್ನ

Suddi Udaya

ನಾವೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಉಜಿರೆ: ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಪಬ್ಲಿಕ್ ಪರೀಕ್ಷೆ : ಉಣ್ಣಾಲು , ಕೊಯ್ಯೂರು ಸಿರಾಜುಲ್ ಹುದಾ ಅರೇಬಿಕ್ ಸ್ಕೂಲ್ ವಿದ್ಯಾರ್ಥಿ ನೂರುನ್ನಿಸಾ ರಾಷ್ಟ್ರ ಮಟ್ಟದಲ್ಲಿ ಪ್ರಥಮ ರ್‍ಯಾಂಕ್: ಉಣ್ಣಾಲು ಕೊಯ್ಯೂರು ಮದರಸಕ್ಕೆ ಶೇಕಡಾ 100 ಫಲಿತಾಂಶ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!