24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆ; ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಉಜಿರೆ ವಲಯ ಹಾಗೂ ಧರ್ಮಸ್ಥಳ ವಲಯದ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಬೆಳ್ತಂಗಡಿ ತಾಲೂಕು , ಉಜಿರೆ ವಲಯ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಉಜಿರೆ, ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನ ಉಜಿರೆ, ಪ್ರಗತಿ ಬಂಧು ಒಕ್ಕೂಟಗಳು ಉಜಿರೆ ವಲಯದ ಸಂಯುಕ್ತ ಆಶ್ರಯದಲ್ಲಿ, 40ನೇ ವಷ೯ದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಉಜಿರೆ ವಲಯ ಹಾಗೂ ಧರ್ಮಸ್ಥಳ ವಲಯ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮವು ನ.22 ರಂದು ಉಜಿರೆ ಎಸ್.ಡಿ.ಎಂ. ಕಾಲೇಜು ಇಂದ್ರಪ್ರಸ್ಥ ಆಡಿಟೋರಿಯಂ ನಲ್ಲಿ ಜರುಗಿತು.

ಅಧ್ಯಕ್ಷತೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ವಹಿಸಿದರು. ಕಾರ್ಯಕ್ರಮವನ್ನು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರರು ಶರತ್ ಕೃಷ್ಣ ಪಡುವೆಟ್ನಾಯರು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.

ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ರವರು ಮಂಜೂರಾತಿ ಪತ್ರ ಮತ್ತು ಸಲಕರಣೆಯನ್ನು ವಿತರಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅನಿಲ್ ಕುಮಾರ್ ಎಸ್‌.ಎಸ್‌. ಸಾಧಕರನ್ನು ಸನ್ಮಾನಿಸಿದರು.

ಮುಖ್ಯ ಅತಿಥಿಗಳಾಗಿ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಪ್ರಶಾಂತ್ ಜೈನ್, ಬೆಳ್ತಂಗಡಿ ಕೇಂದ್ರ ಒಕ್ಕೂಟ ಅಧ್ಯಕ್ಷ ಸೀತಾರಾಮ್ ಆ‌ರ್ ಉಪಸ್ಥಿತರಿದ್ದರು.

ಈ ವೇಳೆ 17 ಒಕ್ಕೂಟಗಳಿಂದ ಜವಾಬ್ದಾರಿಯನ್ನು (ನಿಕಟಪೂರ್ವ ಪದಾಧಿಕಾರಿಗಳಿಂದ ನೂತನ ಪದಾಧಿಕಾರಿಗಳಿಗೆ ) ಡಾ . ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಹಸ್ತಾಂತರಿಸಲಾಯಿತು. ಪೂಜಾ ಸಮಿತಿಯಿಂದ ಕೇಂದ್ರ ಒಕ್ಕೂಟದಿಂದ ಹಾಗೂ ಸಂಘ ಸಂಸ್ಥೆಗಳಿಂದ ಡಾ| ಡಿ. ಹೆಗ್ಗಡೆಯವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸತ್ಯನಾರಾಯಣ ಪೂಜಾ ಸಮಿತಿ ಪದಾಧಿಕಾರಿಗಳು, ಉಜಿರೆ ಧರ್ಮಸ್ಥಳ ವಲಯದ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಯೋಜನಾಧಿಕಾರಿಗಳು, ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಉಜಿರೆ, ಧರ್ಮಸ್ಥಳ ವಲಯದ ನಿಕಟಪೂರ್ವ ಹಾಗೂ ನೂತನ ಅಧ್ಯಕ್ಷರು ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಲತಾ ಪ್ರಾರ್ಥಿಸಿ, ಯೋಜನಾಧಿಕಾರಿ ಸುರೇಂದ್ರ ಸ್ವಾಗತಿಸಿ, ಉಜಿರೆ ಮೇಲ್ವಿಚಾರಕಿ ವನಿತಾ ವರದಿ ವಾಚಿಸಿದರು., ಕೃಷಿ ನಿರ್ದೇಶಕ ರಾಮ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ವಲಯದ ಜ್ಞಾನಶ್ರೀ ಜ್ಞಾನ ವಿಕಾಸ ಕೇಂದ್ರದಲ್ಲಿ ಮಲ್ಲಿಗೆ ಕೃಷಿ ಬಗ್ಗೆ ತರಬೇತಿ ಹಾಗೂ ಮಲ್ಲಿಗೆ ಗಿಡ ವಿತರಣಾ ಕಾರ್ಯಕ್ರಮ

Suddi Udaya

ದ. ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ: ಡಾ.ಹೆಗ್ಗಡೆಯವರಿಂದ ಸಮ್ಮೇಳನದ ಲಾಂಛನ ಬಿಡುಗಡೆ

Suddi Udaya

ಬೆಳ್ತಂಗಡಿ: ಸವಣಾಲುವಿನಲ್ಲಿ ಬೋನಿಗೆ ಬಿದ್ದ ಚಿರತೆ

Suddi Udaya

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಕ್ರೂರ ದಾಳಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ವತಿಯಿಂದ ಸಂತಾಪ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ, ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಶ್ರಿ ಕ್ಷೇತ್ರ ಎರ್ನೋಡಿ :78 ನೇ ಸ್ವಾತಂತ್ರೋತ್ಸವ

Suddi Udaya
error: Content is protected !!