July 24, 2026
Uncategorized

ಆದಿವಾಸಿ ಸಮುದಾಯದ ಎದುರಿಸುತ್ತಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ಸಭೆ ಕರೆದಿರುವ ರಾಜ್ಯ ಸರ್ಕಾರ

.

ಶತಮಾನಗಳಿಂದ ಆದಿವಾಸಿಗಳು ಅತಂತ್ರ ಸ್ಥಿತಿಯಲ್ಲಿ ಬದುಕು ನಡೆಸುತ್ತಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 77 ವರ್ಷ ಕಳೆದರೂ ಇಂದಿಗೂ ರಸ್ತೆ , ವಿದ್ಯುತ್ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಆದಿವಾಸಿ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಅರಣ್ಯ ಹಕ್ಕುಗಳ ಕಾಯ್ದೆ ಜಾರಿಯಲ್ಲಿದ್ದರೂ ಅದನ್ನು ಕಾರ್ಯರೂಪಕ್ಕೆ ತರಲು ಕೇಂದ್ರ ಸರ್ಕಾರ ವಿಫಲವಾಗಿದೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಆದಿವಾಸಿಗಳ ಸಮಸ್ಯೆಗಳನ್ನು ಪರಿಹರಿಸಲು ಮಹತ್ವದ ಸಭೆಯನ್ನು ನವೆಂಬರ್ 26 ರಂದು ಕರೆದಿರುವುದು ಸ್ವಾಗತರ್ಹ. ಈ ಸಭೆಯಲ್ಲಿ ಆದಿವಾಸಿಗಳ ಸರ್ವಾಂಗೀಣ ಅಭಿವೃದ್ಧಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳುವ ಮೂಲಕ ಇಡೀ ದೇಶಕ್ಕೆ ರಾಜ್ಯ ಸರ್ಕಾರ ಮಾದರಿಯಾಗಬೇಕು. ಜೊತೆಗೆ ಆದಿವಾಸಿಗಳ ಸಮಸ್ಯೆಗಳನ್ನು ಪರಿಹರಿಸುವ ದೃಷ್ಟಿಯಿಂದ ಸಂಬಂಧಿಸಿದ ಸಚಿವರುಗಳು , ರಾಜ್ಯ ಮಟ್ಟದ ಅಧಿಕಾರಿಗಳು ಆದಿವಾಸಿಗಳ ಪ್ರದೇಶಕ್ಕೆ ಭೇಟಿ ನೀಡುವ ಮಹತ್ವದ ಕಾರ್ಯಕ್ರಮ ಹಮ್ಮಿಕೊಳ್ಳುವ ನಿರ್ಧಾರ ತೆಗೆದುಕೊಳ್ಳುವ ಅಗತ್ಯವಿದೆ.

ಜಯಾನಂದ ಪಿಲಿಕಲ
ಅಧ್ಯಕ್ಷರು
ಬ್ಲಾಕ್ ಕಾಂಗ್ರೆಸ್ ಸಮಿತಿ
ಪ್ರಧಾನ ಕಾರ್ಯದರ್ಶಿ
ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ

Related posts

ಮಡಂತ್ಯಾರು : ಕುಂಜತ್ತೂಡಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಕಾರ್ಯಕ್ರಮ

Suddi Udaya

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ನಮ್ಮ ಬದುಕನ್ನು ರೂಪಿಸುವ ಅಡಿಪಾಯವೇ ಶಿಕ್ಷಣ-ಡಾ. ನವೀನ್ ಕುಮಾರ್ ಜೈನ್.

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ವಿಶ್ವ ಯೋಗ ದಿನ ಆಚರಣೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್.ಇ ಶಾಲೆಗೆ ಶೇ.100 ಫಲಿತಾಂಶ

Suddi Udaya

ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ.

Suddi Udaya
error: Content is protected !!