23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಶ್ರೀ ಧ.ಮಂ. ಸ್ನಾತ್ತಕೋತ್ತರ ಕಾಲೇಜಿನ ಸಮಾಜ ಕಾರ್ಯ ವಿಭಾಗದ “ಫ್ಯೂಚರ್ ಹೆಚ್ ಆರ್ ಲೀಡರ್ಸ್” ವಿಶೇಷ ಕಾರ್ಯಾಗಾರ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತ್ತಕೋತ್ತರ ಕಾಲೇಜಿನ ಸಮಾಜ ಕಾರ್ಯ ವಿಭಾಗವು “ಫ್ಯೂಚರ್ ಹೆಚ್ ಆರ್ ಲೀಡರ್ಸ್” ಎಂಬ ಐದು ದಿನಗಳ ವಿಶೇಷ ಕಾರ್ಯಗಾರವನ್ನು ಆಯೋಜಿಸಿದ್ದು ಇದರ ಉದ್ಘಾಟನಾ ಕಾರ್ಯಕ್ರಮ ನ.19 ರಂದು ಜರಗಿತು.

ಕಾರ್ಯಗಾರವನ್ನು ಎಸ್. ಡಿ. ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ಕುಮಾರ ಹೆಗ್ಡೆ ಉದ್ಘಾಟಿಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಬೆಂಗಳೂರಿನ ಹೆಚ್.ಆರ್ ಸ್ಪೆಕ್ಟ್ರಮ್ ಸ್ಥಾಪಕರಾದ ಮನ್ಮಥ ‍ಹೆಚ್.ವಿ ಭಾಗಿಯಾಗಿದ್ದರು. ಎಲ್ಲ ಕಂಪನಿಗಳಲ್ಲಿ ಮನವಶಕ್ತಿ ನಿರ್ವಹಣೆ ವಿಭಿನ್ನವಾಗಿರುತ್ತವೆ ಅದರಂತೆ ನಾವು ಸಿದ್ಧವಾಗಬೇಕು. ಕೋಟಿ ಖರ್ಚು ಮಾಡಿ ಎಮ್.ಬಿ.ಬಿ.ಎಸ್ ಮಾಡುವ ಬದಲು ಹೆಚ್ ಆರ್ ಮಾಡಿ ನಮ್ಮದೇ ಸಂಸ್ಥೆಯನ್ನು ಸ್ಥಾಪಿಸಬಹುದು ಎಂದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಾಂಶುಪಾಲರು, ಇಂತ ಕಾರ್ಯಾಗಾರದ ಪ್ರಯೋಜನ ಪಡೆದುಕೊಂಡರೆ ಒಳ್ಳೆಯ ಪ್ರಾಯೋಗಿಕ ಜ್ಞಾನ ಸಿಗುತ್ತವೆ ಮತ್ತು ಸಮಾಜಕಾರ್ಯ ವಿಭಾಗದ ಹೆಚ್ ಆರ್ ವಿದ್ಯಾರ್ಥಿಗಳಿಗೆ ವೃತ್ತಿಯಲ್ಲಿ ಒಳ್ಳೆಯ ಅವಕಾಶಗಳು ಸಿಗುತ್ತವೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಡಾ.ವಿಶ್ವನಾಥ . ಪಿ ,ಮುಖ್ಯಸ್ಥರು ಎಸ್ ಡಿ ಎಂ ಪಿ ಜಿ ಸೆಂಟರ್ , ಹೆಚ್ ಆರ್ ಸ್ಪೆಕ್ಟ್ರಮ್ ಇದರ ತಂಡದ ಸದಸ್ಯರಾದ ಶ್ರೀಮತಿ ಸುಷ್ಮಿತಾ ಹಾಗೂ ಗಿರೀಶ್ ಉಪಸ್ಥಿ‍ತರಿದ್ದರು.
ಸಮಾಜಕಾರ್ಯ ವಿಭಾಗದ ಮುಖ್ಯಸ್ಥರಾದ ಡಾ. ರವಿಶಂಕರ್ ಇವರು ಸ್ವಾಗತಿಸಿ, ವಿದ್ಯಾರ್ಥಿನಿ ತೇಜಸ್ವಿನಿ ಇವರು ವಂದಿಸಿದರು. ಕಾರ್ಯಕ್ರಮದ ಸಂಯೋಜಕರಾದ ಸುವೀರ್ ಜೈನ್ ಮತ್ತು ಡಾ| ಅತುಲ್. ಎಸ್. ಸೇಮಿತ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಪ್ರಕೃತಿ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ : ಬುರುಡೆ ತನಿಖೆಗೆ ಎಸ್.ಐ.ಟಿ ವಿಚಾರಣೆಗೆ ಹಾಜರಾದ ನಾಲ್ವರು

Suddi Udaya

ನಿಡ್ಲೆ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಕಲ್ಮಂಜ ನಿಡಿಗಲ್ ಮಜಲಿನಲ್ಲಿ ನಾಗದೇವರು ಹಾಗೂ ದೈವಗಳ ಪುನರ್ ಪ್ರತಿಷ್ಠೆ

Suddi Udaya

ಚಲನಚಿತ್ರ ತಾರೆ ಡಿಂಪಲ್‌ ಕಪಾಡಿಯಾ ಧರ್ಮಸ್ಥಳ ಭೇಟಿ

Suddi Udaya

ಅವಕಾಶಗಳ ಆಗರ, ಸಾಧನೆಗಳ ಸಾಗರ, ಕರಾವಳಿ ಪ್ರವಾಸೋದ್ಯಮ: ಸಂಪತ್ ಬಿ. ಸುವರ್ಣ

Suddi Udaya
error: Content is protected !!