25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೂಡಬೆಟ್ಟು ಸದಾಶಿವ ದೇವಸ್ಥಾನದಲ್ಲಿ ಶತರುದ್ರಾಭಿಷೇಕ

ಮಿತ್ತಬಾಗಿಲು : ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಸ್ಥಾನಿಕ ಬ್ರಾಹ್ಮಣ ಪುರೋಹಿತ ಅರ್ಚಕ ಪರಿಪಾಲನಾ ಸಭಾ ಹಾಗೂ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಸಭಾ ಬಂಗಾಡಿ ವಲಯಗಳ ವತಿಯಿಂದ ಬ್ರಹ್ಮಶ್ರೀ ವೇದಮೂರ್ತಿ ಪಾವಂಜೆ ವಾಗೀಶ ತಂತ್ರಿಯವರ ಮಾರ್ಗದರ್ಶನದಲ್ಲಿ ಶತರುದ್ರಾಭಿಷೇಕ ಕಾರ್ಯಕ್ರಮವು ಜರಗಿತು.

ಬಳಿಕ ಭರತನಾಟ್ಯ, ಯಕ್ಷಗಾನ ಹಾಡು,ಭಜನೆ, ಚೆಂಡೆ ವಾದನ ಶಂಖವಾದನ, ವೇದಮಂತ್ರ ಘೋಷಗಳೊಂದಿಗೆ ಅಪರೂಪದ ಅಷ್ಟಾವಧಾನ ಕಾರ್ಯಕ್ರಮವು ನಡೆಯಿತು.

ಸಭಾ ಕಾರ್ಯಕ್ರಮದಲ್ಲಿ ಹೆಚ್. ವಾಸುದೇವ ರಾವ್, ಶಿವಾನಂದ ರಾವ್ ಕಕ್ಕೆನೇಜಿ, ಶ್ರೀಮತಿ ನಾಗರತ್ನ ಕೊಲ್ಲಿಪಾಲು, ಪುರೋಹಿತ ವರ್ಗದವರು ಉಪಸ್ಥಿತರಿದ್ದರು. ಶ್ರೀ ವಾಗೀಶ ಶಾಸ್ತ್ರಿಗಳು ಧಾರ್ಮಿಕ ಪ್ರವಚನ ಮಾಡುತ್ತಾ ರುದ್ರಾಭಿಷೇಕ, ರುದ್ರನ ಮಹಿಮೆಯನ್ನು ವರ್ಣಿಸಿದರು, ಮನುಷ್ಯನಿಗೆ ಎಲ್ಲಾ ಭಾಗ್ಯಗಳಿಗಿಂತಲೂ ಆರೋಗ್ಯ ಭಾಗ್ಯವೇ ಮಿಗಿಲಾದುದು, ಬದುಕಿನಲ್ಲಿ , ಬದುಕು ಮುಗಿದ ಬಳಿಕವೂ ನಮ್ಮೊಂದಿಗೆ ಸದಾ ಬರುವುದು ನಾವು ಮಾಡಿದ ಧರ್ಮ ಕಾರ್ಯಗಳು ಮಾತ್ರವೆಂದು ನುಡಿದರು.

ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಬಿ.ಕೆ. ಧನಂಜಯ ರಾವ್ ಅವರು ಕಾರ್ಯಕ್ರಮವನ್ನು ನಿರ್ವಹಿಸಿದರು. ಸುತ್ತಮುತ್ತಲಿನ ಪ್ರದೇಶಗಳಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಅನ್ನಸಂತರ್ಪಣೆಯೊಂದಿಗೆ ಈ ಅಪರೂಪದ ಕಾರ್ಯಕ್ರಮವು ಸಮಾಪನಗೊಂಡಿತು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕಮೋಡ್ ವೀಲ್‌ಚೇರ್ ವಿತರಣೆ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: ಜ್ಞಾನ, ವಿಜ್ಞಾನ ಮತ್ತು ಸುಜ್ಞಾನದ ತ್ರಿವೇಣಿ ಸಂಗಮ

Suddi Udaya

ಗುರುವಾಯನಕೆರೆ: ದರ್ಗಾ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್ ಆಯ್ಕೆ

Suddi Udaya

ಶಿರ್ಲಾಲು: “ಭವತಿ ಭಿಕ್ಷಾಂದೇಹಿ” ನಿಧಿ ಸಂಗ್ರಹ ಅಭಿಯಾನದ ಧನಸಹಾಯ ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

Suddi Udaya

ಉಜಿರೆ: ಕೆಲಸಕ್ಕೆಂದು ಹೋದ ಯುವತಿ ವಾಪಸ್ಸು ಮನೆಗೆ ಬಾರದೆ ನಾಪತ್ತೆ

Suddi Udaya
error: Content is protected !!