September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೂಡಬೆಟ್ಟು ಸದಾಶಿವ ದೇವಸ್ಥಾನದಲ್ಲಿ ಶತರುದ್ರಾಭಿಷೇಕ

ಮಿತ್ತಬಾಗಿಲು : ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಸ್ಥಾನಿಕ ಬ್ರಾಹ್ಮಣ ಪುರೋಹಿತ ಅರ್ಚಕ ಪರಿಪಾಲನಾ ಸಭಾ ಹಾಗೂ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಸಭಾ ಬಂಗಾಡಿ ವಲಯಗಳ ವತಿಯಿಂದ ಬ್ರಹ್ಮಶ್ರೀ ವೇದಮೂರ್ತಿ ಪಾವಂಜೆ ವಾಗೀಶ ತಂತ್ರಿಯವರ ಮಾರ್ಗದರ್ಶನದಲ್ಲಿ ಶತರುದ್ರಾಭಿಷೇಕ ಕಾರ್ಯಕ್ರಮವು ಜರಗಿತು.

ಬಳಿಕ ಭರತನಾಟ್ಯ, ಯಕ್ಷಗಾನ ಹಾಡು,ಭಜನೆ, ಚೆಂಡೆ ವಾದನ ಶಂಖವಾದನ, ವೇದಮಂತ್ರ ಘೋಷಗಳೊಂದಿಗೆ ಅಪರೂಪದ ಅಷ್ಟಾವಧಾನ ಕಾರ್ಯಕ್ರಮವು ನಡೆಯಿತು.

ಸಭಾ ಕಾರ್ಯಕ್ರಮದಲ್ಲಿ ಹೆಚ್. ವಾಸುದೇವ ರಾವ್, ಶಿವಾನಂದ ರಾವ್ ಕಕ್ಕೆನೇಜಿ, ಶ್ರೀಮತಿ ನಾಗರತ್ನ ಕೊಲ್ಲಿಪಾಲು, ಪುರೋಹಿತ ವರ್ಗದವರು ಉಪಸ್ಥಿತರಿದ್ದರು. ಶ್ರೀ ವಾಗೀಶ ಶಾಸ್ತ್ರಿಗಳು ಧಾರ್ಮಿಕ ಪ್ರವಚನ ಮಾಡುತ್ತಾ ರುದ್ರಾಭಿಷೇಕ, ರುದ್ರನ ಮಹಿಮೆಯನ್ನು ವರ್ಣಿಸಿದರು, ಮನುಷ್ಯನಿಗೆ ಎಲ್ಲಾ ಭಾಗ್ಯಗಳಿಗಿಂತಲೂ ಆರೋಗ್ಯ ಭಾಗ್ಯವೇ ಮಿಗಿಲಾದುದು, ಬದುಕಿನಲ್ಲಿ , ಬದುಕು ಮುಗಿದ ಬಳಿಕವೂ ನಮ್ಮೊಂದಿಗೆ ಸದಾ ಬರುವುದು ನಾವು ಮಾಡಿದ ಧರ್ಮ ಕಾರ್ಯಗಳು ಮಾತ್ರವೆಂದು ನುಡಿದರು.

ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಬಿ.ಕೆ. ಧನಂಜಯ ರಾವ್ ಅವರು ಕಾರ್ಯಕ್ರಮವನ್ನು ನಿರ್ವಹಿಸಿದರು. ಸುತ್ತಮುತ್ತಲಿನ ಪ್ರದೇಶಗಳಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಅನ್ನಸಂತರ್ಪಣೆಯೊಂದಿಗೆ ಈ ಅಪರೂಪದ ಕಾರ್ಯಕ್ರಮವು ಸಮಾಪನಗೊಂಡಿತು.

Related posts

ಅಕ್ರಮ ಮರಳು ಸಾಗಿಸುತ್ತಿದ್ದ ಎರಡು ಲಾರಿ ಪೊಲೀಸರ ವಶ: ತಹಶೀಲ್ದಾರ್ ತಂಡ ಕಾರ್ಯಾಚರಣೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ಗ್ರಂಥಾಲಯ ವಿಭಾಗದ ವತಿಯಿಂದ ಓದುವ ಸಪ್ತಾಹ

Suddi Udaya

ಆಪರೇಷನ್ ಸಿಂಧೂರ: ಮುಂಡಾಜೆ ಪರಶುರಾಮ ದೇವಸ್ಥಾನದಲ್ಲಿ ಪ್ರಾಥ೯ನೆ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘ ರಚನೆ

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ಗೃಹೋದ್ಯಮಿ ಸಂಧ್ಯಾ ಎಸ್ ಭಟ್ ನಿಧನ

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಟಿ. ಎ. ಶರವಣ ರವರು ಭೇಟಿ

Suddi Udaya
error: Content is protected !!