23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೂಡಬೆಟ್ಟು ಸದಾಶಿವ ದೇವಸ್ಥಾನದಲ್ಲಿ ಶತರುದ್ರಾಭಿಷೇಕ

ಮಿತ್ತಬಾಗಿಲು : ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಸ್ಥಾನಿಕ ಬ್ರಾಹ್ಮಣ ಪುರೋಹಿತ ಅರ್ಚಕ ಪರಿಪಾಲನಾ ಸಭಾ ಹಾಗೂ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಸಭಾ ಬಂಗಾಡಿ ವಲಯಗಳ ವತಿಯಿಂದ ಬ್ರಹ್ಮಶ್ರೀ ವೇದಮೂರ್ತಿ ಪಾವಂಜೆ ವಾಗೀಶ ತಂತ್ರಿಯವರ ಮಾರ್ಗದರ್ಶನದಲ್ಲಿ ಶತರುದ್ರಾಭಿಷೇಕ ಕಾರ್ಯಕ್ರಮವು ಜರಗಿತು.

ಬಳಿಕ ಭರತನಾಟ್ಯ, ಯಕ್ಷಗಾನ ಹಾಡು,ಭಜನೆ, ಚೆಂಡೆ ವಾದನ ಶಂಖವಾದನ, ವೇದಮಂತ್ರ ಘೋಷಗಳೊಂದಿಗೆ ಅಪರೂಪದ ಅಷ್ಟಾವಧಾನ ಕಾರ್ಯಕ್ರಮವು ನಡೆಯಿತು.

ಸಭಾ ಕಾರ್ಯಕ್ರಮದಲ್ಲಿ ಹೆಚ್. ವಾಸುದೇವ ರಾವ್, ಶಿವಾನಂದ ರಾವ್ ಕಕ್ಕೆನೇಜಿ, ಶ್ರೀಮತಿ ನಾಗರತ್ನ ಕೊಲ್ಲಿಪಾಲು, ಪುರೋಹಿತ ವರ್ಗದವರು ಉಪಸ್ಥಿತರಿದ್ದರು. ಶ್ರೀ ವಾಗೀಶ ಶಾಸ್ತ್ರಿಗಳು ಧಾರ್ಮಿಕ ಪ್ರವಚನ ಮಾಡುತ್ತಾ ರುದ್ರಾಭಿಷೇಕ, ರುದ್ರನ ಮಹಿಮೆಯನ್ನು ವರ್ಣಿಸಿದರು, ಮನುಷ್ಯನಿಗೆ ಎಲ್ಲಾ ಭಾಗ್ಯಗಳಿಗಿಂತಲೂ ಆರೋಗ್ಯ ಭಾಗ್ಯವೇ ಮಿಗಿಲಾದುದು, ಬದುಕಿನಲ್ಲಿ , ಬದುಕು ಮುಗಿದ ಬಳಿಕವೂ ನಮ್ಮೊಂದಿಗೆ ಸದಾ ಬರುವುದು ನಾವು ಮಾಡಿದ ಧರ್ಮ ಕಾರ್ಯಗಳು ಮಾತ್ರವೆಂದು ನುಡಿದರು.

ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಬಿ.ಕೆ. ಧನಂಜಯ ರಾವ್ ಅವರು ಕಾರ್ಯಕ್ರಮವನ್ನು ನಿರ್ವಹಿಸಿದರು. ಸುತ್ತಮುತ್ತಲಿನ ಪ್ರದೇಶಗಳಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಅನ್ನಸಂತರ್ಪಣೆಯೊಂದಿಗೆ ಈ ಅಪರೂಪದ ಕಾರ್ಯಕ್ರಮವು ಸಮಾಪನಗೊಂಡಿತು.

Related posts

ಜ. 19: ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನ ಜಾತ್ರೋತ್ಸವದ ಪ್ರಯುಕ್ತ ಕುಲದೈವೋ ಬ್ರಹ್ಮ ಯಕ್ಷಗಾನ ಬಯಲಾಟ

Suddi Udaya

ಕಡಿರುದ್ಯಾವರ ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 12ನೇ ಸಹಾಯಧನ ಹಸ್ತಾಂತರ

Suddi Udaya

ಜೆ.ಇ.ಇ.(ಬಿ.ಆರ್ಕ್) ಫಲಿತಾಂಶ ಪ್ರಕಟ: ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಬೆಳಾಲು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಗ್ರಾಮ ಸಮಿತಿಯ ವಾರ್ಷಿಕ ಕ್ರೀಡಾಕೂಟ

Suddi Udaya

ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ರಥೋತ್ಸವ

Suddi Udaya
error: Content is protected !!