July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೂಡಬೆಟ್ಟು ಸದಾಶಿವ ದೇವಸ್ಥಾನದಲ್ಲಿ ಶತರುದ್ರಾಭಿಷೇಕ

ಮಿತ್ತಬಾಗಿಲು : ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಸ್ಥಾನಿಕ ಬ್ರಾಹ್ಮಣ ಪುರೋಹಿತ ಅರ್ಚಕ ಪರಿಪಾಲನಾ ಸಭಾ ಹಾಗೂ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಸಭಾ ಬಂಗಾಡಿ ವಲಯಗಳ ವತಿಯಿಂದ ಬ್ರಹ್ಮಶ್ರೀ ವೇದಮೂರ್ತಿ ಪಾವಂಜೆ ವಾಗೀಶ ತಂತ್ರಿಯವರ ಮಾರ್ಗದರ್ಶನದಲ್ಲಿ ಶತರುದ್ರಾಭಿಷೇಕ ಕಾರ್ಯಕ್ರಮವು ಜರಗಿತು.

ಬಳಿಕ ಭರತನಾಟ್ಯ, ಯಕ್ಷಗಾನ ಹಾಡು,ಭಜನೆ, ಚೆಂಡೆ ವಾದನ ಶಂಖವಾದನ, ವೇದಮಂತ್ರ ಘೋಷಗಳೊಂದಿಗೆ ಅಪರೂಪದ ಅಷ್ಟಾವಧಾನ ಕಾರ್ಯಕ್ರಮವು ನಡೆಯಿತು.

ಸಭಾ ಕಾರ್ಯಕ್ರಮದಲ್ಲಿ ಹೆಚ್. ವಾಸುದೇವ ರಾವ್, ಶಿವಾನಂದ ರಾವ್ ಕಕ್ಕೆನೇಜಿ, ಶ್ರೀಮತಿ ನಾಗರತ್ನ ಕೊಲ್ಲಿಪಾಲು, ಪುರೋಹಿತ ವರ್ಗದವರು ಉಪಸ್ಥಿತರಿದ್ದರು. ಶ್ರೀ ವಾಗೀಶ ಶಾಸ್ತ್ರಿಗಳು ಧಾರ್ಮಿಕ ಪ್ರವಚನ ಮಾಡುತ್ತಾ ರುದ್ರಾಭಿಷೇಕ, ರುದ್ರನ ಮಹಿಮೆಯನ್ನು ವರ್ಣಿಸಿದರು, ಮನುಷ್ಯನಿಗೆ ಎಲ್ಲಾ ಭಾಗ್ಯಗಳಿಗಿಂತಲೂ ಆರೋಗ್ಯ ಭಾಗ್ಯವೇ ಮಿಗಿಲಾದುದು, ಬದುಕಿನಲ್ಲಿ , ಬದುಕು ಮುಗಿದ ಬಳಿಕವೂ ನಮ್ಮೊಂದಿಗೆ ಸದಾ ಬರುವುದು ನಾವು ಮಾಡಿದ ಧರ್ಮ ಕಾರ್ಯಗಳು ಮಾತ್ರವೆಂದು ನುಡಿದರು.

ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಬಿ.ಕೆ. ಧನಂಜಯ ರಾವ್ ಅವರು ಕಾರ್ಯಕ್ರಮವನ್ನು ನಿರ್ವಹಿಸಿದರು. ಸುತ್ತಮುತ್ತಲಿನ ಪ್ರದೇಶಗಳಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಅನ್ನಸಂತರ್ಪಣೆಯೊಂದಿಗೆ ಈ ಅಪರೂಪದ ಕಾರ್ಯಕ್ರಮವು ಸಮಾಪನಗೊಂಡಿತು.

Related posts

ಜ.4: ಮರೋಡಿ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ನ ದಶಮಾನೋತ್ಸವ, ಶನೀಶ್ವರ ಪೂಜೆ

Suddi Udaya

ಗಣೇಶ ಚತುರ್ಥಿಗೆ ದ.ಕ ಜಿಲ್ಲೆಯಲ್ಲಿ ಸೆ.19 ರಂದು ಸರ್ಕಾರಿ ರಜೆ : ಜಿಲ್ಲಾಧಿಕಾರಿ ಆದೇಶ

Suddi Udaya

ಗೇರುಕಟ್ಟೆ: “ಬರಾಯ ಪ್ರೀಮಿಯರ್ ಲೀಗ್ ” ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya

ಬೆಳ್ತಂಗಡಿ ಸುಳ್ಳಿನ ಸರದಾರ, ಆಮದು ನಾಯಕ ರಕ್ಷಿತ್ ಶಿವರಾಮ್‌ಗೆ ರಾಜಕೀಯ ಪ್ರಬುದ್ಧತೆ ಇಲ್ಲ. ನಿಮ್ಮ ಸುಳ್ಳನ್ನು ಬೆಳ್ತಂಗಡಿಯ ಪ್ರಬುದ್ದ ಜನರು ಒಪ್ಪಿಕೊಳ್ಳುವುದಿಲ್ಲ, ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ ತಿರುಗೇಟು

Suddi Udaya

ಕೌಕ್ರಾಡಿ ಗ್ರಾಮ ಆಡಳಿತ ಅಧಿಕಾರಿಯವರ ಮೇಲೆ ಹಲ್ಲೆ ಮಾಡಿದ ಆರೋಪಿಗಳ ಶೀಘ್ರ ಬಂಧನಕ್ಕೆ ಒತ್ತಾಯಿಸಿ : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya
error: Content is protected !!