23.5 C
ಪುತ್ತೂರು, ಬೆಳ್ತಂಗಡಿ
June 8, 2026
ಶಾಲಾ ಕಾಲೇಜು

ಪಿಯು ವಿದ್ಯಾರ್ಥಿಗಳಿಗೆ ಆಪ್ತ-ಸಮಾಲೋಚನೆ ಅತ್ಯಗತ್ಯ: ಪದ್ಮಶ್ರೀ ಡಾ|ಸಿ.ಆರ್ ಚಂದ್ರಶೇಖ‌ರ್

ಬೆಳ್ತಂಗಡಿ: ಯಶಸ್ಸಿನ ಹಿಂದೆ ಓಡಬೇಕೆಂಬ ಛಲವಿರುವ ಈಗಿನ ಪಿಯು ವಿದ್ಯಾರ್ಥಿಗಳಿಗೆ ಸರಿಯಾದ ಹಂತದಲ್ಲಿ ಸಮರ್ಥವಾದ ಆಪ್ತ-ಸಮಾಲೋಚನಾ ಮಾರ್ಗದರ್ಶನ ಬೇಕೇ-ಬೇಕು ಎಂದು ಬೆಂಗಳೂರಿನ ಪ್ರತಿಷ್ಠಿತ ನಿಮ್ಹಾನ್ಸ್ ಸಂಸ್ಥೆಯ ಮಾಜಿ ಹಿರಿಯಮನೋವೈದ್ಯ, ಪದ್ಮಶ್ರೀಡಾ.ಸಿಆರ್ ಚಂದ್ರಶೇಖರ್ ಹೇಳಿದರು.

ಅವರು ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜುಏರ್ಪಡಿಸಿದ್ದ ಮಾನಸ ಮಾರ್ಗದರ್ಶನ ಹಾಗೂ ಸಂವಾದ’ ಕಾರ್ಯಕ್ರಮಉದ್ಘಾಟಿಸಿ ಮಾತನಾಡಿದರು.
ಅತೀ ಕಿರಿಯವಯಸ್ಸಿನಲ್ಲಿ ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿ, ಯಶಸ್ಸುಗಳಿಸಬೇಕೆಂಬ ಛಲವಿರುವ ಹದಿಹರೆಯದ ವಿದ್ಯಾರ್ಥಿಗಳಿಗೆ ” ಆಪ್ತ-ಸಮಾಲೋಚನೆ” ಅತ್ಯಂತ ಉತ್ತೇಜನಕಾರಿ ಎಂದು ತಿಳಿಸಿದ ಅವರು ವಿದ್ವತ್ ಪಿಯು ಕಾಲೇಜು ದಿನ ನಿತ್ಯದ ಕಾರ್ಯಸೂಚಿಯಾಗಿ ಆಪ್ತ-ಸಮಾಲೋಚನೆಯನ್ನು ಜಾರಿಗೊಳಿಸಿರುವುದು ರಾಜ್ಯದ ಪಿಯುಶಿಕ್ಷಣ ವ್ಯವಸ್ಥೆಯಲ್ಲಿಯೇ ಪ್ರಥಮ ಎಂದು ಬಣ್ಣಿಸಿದರು.

ಆಪ್ತ-ಸಮಾಲೋಚನೆ(ಕೌನ್ಸಲಿಂಗ್)ಒತ್ತಡ ರಹಿತ ಗ್ರಹಿಕೆ ಹಾಗೂ ಕಲಿಕೆಗೆ ರಾಮಬಾಣ ಎಂದ ಡಾ.ಸಿಆರ್ ಚಂದ್ರಶೇಖರ್ ವಿದ್ಯಾಭ್ಯಾಸವನ್ನು ಹಿತಾಸಕ್ತಿಯ ಚಟುವಟಿಕೆಯನ್ನಾಗಿ ಪರಿವರ್ತಿಸುವ ಆಲೋಚನೆ ರೂಪಿಸಿಕೊಳ್ಳಲು ವಿದ್ಯಾರ್ಥಿ ಸಮೂಹಕ್ಕೆ ತಿಳಿ ಹೇಳಿದರು. ಬೆಂಗಳೂರಿನಂತಹ ನಗರಗಳಲ್ಲಿ ವಿದ್ಯಾಸಂಸ್ಥೆಗಳು ಆಪ್ತ-ಸಮಾಲೋಚನೆಯ ಅಗತ್ಯತೆಯ ಬಗ್ಗೆ ಇನ್ನೂ ಚರ್ಚೆ ನಡೆಸುತ್ತಿರುವ ಈಸಂದರ್ಭದಲ್ಲಿ ಗುರುವಾಯನಕೆರೆಯಂತಹ ಪಟ್ಟಣದಲ್ಲಿ ಪಿಯು ಕಾಲೇಜೊಂದು” ಆಪ್ತ-ಸಮಾಲೋಚನಾ ವಿಭಾಗ” ವನ್ನು ಹೊಂದಿರುವುದು ವಿದ್ವತ್ ಚಿಂತಕರ ಛಾವಡಿ ಎಷ್ಟು ಸಮರ್ಥವಾಗಿದೆ ಎಂಬುದನ್ನು ಸಾಬೀತು ಪಡಿಸುತ್ತದೆ ಎಂದರು. ವಿದ್ವತ್ ನಪಿಯುವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಜ್ಞಾಪಕಶಕ್ತಿ ವೃದ್ಧಿ ಒತ್ತಡ ನಿವಾರಣೆ, ಪರೀಕ್ಷಾ ತಯಾರಿಯ ವಿಧಾನ ಹಾಗೂಮನಸ್ಸಿನ ಜಾಡ್ಯ ನಿವಾರಣೆ, ಇತ್ಯಾದಿ ವಿಷಯಗಳ ಬಗ್ಗೆ ಸಂದೇಹಪರಿಹಾರಕ್ಕಾಗಿ ಎರಡು ತಾಸಿಗೂ ಹೆಚ್ಚಿನ ಕಾಲ ಸಂವಾದ ನಡೆಸಿ ಯುವ ವಿದ್ಯಾರ್ಥಿಗಳಲ್ಲಿ ಹೊಸ ಚೈತನ್ಯ ತುಂಬಿದರು. ವಿದ್ವತ್ ಪಿಯು ಕಾಲೇಜಿನಕೌನ್ಸಲಿಂಗ್‌ ಮುಖ್ಯಸ್ಥರಾದ ಗಂಗಾಧರ ಇಮಂಡಗಳಲೆ, ಸಂಸ್ಥೆಯ ಸಂಸ್ಥಾಪಕಾಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ, ಪ್ರಗತಿ ಆಪಲ್ ಎಜುಕೇಶನ್ ನ ಮುಖ್ಯಸ್ಥ ವಿಜಯಕುಮಾ‌ರ್ ,ಟ್ರಸ್ಟಿ ಎಂ.ಕೆ ಕಾಶಿನಾಥ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆದ್ರಬೆಟ್ಟು ಮರಿಯಾಂಬಿಕ ಆಂ.ಮಾ. ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು ವನ ಮಹೋತ್ಸವದ ಆಚರಣೆ

Suddi Udaya

ನಯನಾಡು ಸರಕಾರಿ ಪ್ರೌಢಶಾಲೆಗೆ ಸತತ 6ನೇ ಬಾರಿಗೆ ಶೇ.100 ಫಲಿತಾಂಶ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು-ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಡ್ರಗ್ ಡಿಸ್ಕವರಿ ಮತ್ತು ಪ್ರಿಸಿಷನ್ ಮೆಡಿಸಿನ್‌ನಲ್ಲಿ ಎ.ಐ ಪಾತ್ರ ಕುರಿತು ಉಪನ್ಯಾಸ

Suddi Udaya
error: Content is protected !!