23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೊಗ್ರು: ಕಡಮ್ಮಾಜೆ ಫಾರ್ಮ್ ನಲ್ಲಿ 3ನೇ ವರ್ಷದ ಜೇನು ಕೃಷಿ ಮಾಹಿತಿ ಶಿಬಿರ

ಮೊಗ್ರು : ಮೊಗ್ರು ಗ್ರಾಮದ ಕಡಮ್ಮಾಜೆ ಫಾರ್ಮ್ ಹೌಸ್ ನಲ್ಲಿ ಮೂರನೇ ವರ್ಷದ ಎರಡು ದಿನಗಳ ಜೇನು ಕೃಷಿ ಮಾಹಿತಿ ಶಿಬಿರ ಕಾರ್ಯಕ್ರಮದ ಉದ್ಘಾಟನೆಯು ನ.23 ರಂದು ನೆರವೇರಿತು.


ಕಡಮ್ಮಾಜೆ ಫಾರ್ಮ್ಸ್ ನ ಶ್ರೀಮತಿ ಕುಸುಮಾವತಿಯವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಣಿಯೂರು ಪಂಚಾಯತ್ ಅಧ್ಯಕ್ಷ ಸೀತಾರಾಮ ಮಡಿವಾಳ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಂದಾರು ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಕಡಮ್ಮಾಜೆ ಫಾರ್ಮ್ಸ್ ನ ದೇವಿಪ್ರಸಾದ್ ಸಂದರ್ಬೋಚಿತವಾಗಿ ಮಾತನಾಡಿದರು. ಜೇನು ಕೃಷಿ ತರಬೇತುದಾರರಾದ ರಾಧಾಕೃಷ್ಣ ಕೋಡಿ ಹಾಗೂ ಬೆಳ್ತಂಗಡಿ ಚಿಂತನಾ ಹನಿ ಭೀ ಫಾರ್ಮ್ ನ ಅಶೋಕ್ ಕುಮಾರ್ ಜೀ ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ ನೀಡಿದರು.


ಬಂದಾರು ಪಂಚಾಯತ್ ಸದಸ್ಯ ಬಾಲಕೃಷ್ಣ ಗೌಡ ಮುಗೇರಡ್ಕ ಉಪಸ್ಥಿತರಿದ್ದರು. ಅರುಣಾ ದೇವಿಪ್ರಸಾದ್ ಮತ್ತು ಅಶ್ವಿನಿ ಜಯ ಪ್ರಸಾದ್ ಪ್ರಾರ್ಥನೆ ನೆರವೇರಿಸಿದರು, ಅಶೋಕ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.
ಹೆಚ್ಚಿನ ಜನರು ಜೇನು ಕೃಷಿಯ ಸಮರ್ಪಕ ಮಾಹಿತಿ ಪಡೆದುಕೊಂಡರು.

Related posts

ರೆಖ್ಯ: 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಮಾ.28: ಕನ್ನಡ ಗ್ರಾಮದಲ್ಲಿ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ, ಕಾಸರಗೋಡು – ಕರ್ನಾಟಕ ಚುಟುಕು ಕವಿಗೋಷ್ಠಿ

Suddi Udaya

ಸಾಂಸ್ಕೃತಿಕ ಸ್ಪರ್ಧೆ : ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ: ಭಜರಂಗದಳ ಕಾರ್ಯಕರ್ತರಿಂದ ಮಿಂಚಿನ ಕಾರ್ಯಾಚರಣೆ: ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ಕು ಗೋವುಗಳ ರಕ್ಷಣೆ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಬೆಳ್ತಂಗಡಿಯಿಂದ ಬೆಂಗಳೂರಿಗೆ ಸುಗಮ ಸಂಚಾರಕ್ಕಾಗಿ ಆರಂಭಗೊಂಡ “ಪಲ್ಲಕ್ಕಿ” ನೂತನ ಬಸ್ ಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನಲ್ಲಿ ‘ಸಂಕ್ರಾಂತಿಗೆ ಸ್ವರ್ಣಾರಂಭ’: ಜ.9ರಿಂದ 20ರ ವರೆಗೆ ವಿಶೇಷ ಉತ್ಸವ

Suddi Udaya
error: Content is protected !!