July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ನ ಬೆಳ್ಳಿ ಹಬ್ಬ – ಸಂಭ್ರಮ ಸಡಗರದಿಂದ ಆಚರಣೆ

ಲಾಯಿಲ : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಕಾರ್ಯಕ್ರಮ ನ.23 ರಂದು ಶ್ರೀ ಕೃಷ್ಣಾನುಗ್ರಹ ಸಭಾಭವನ, ಉಜಿರೆಯಲ್ಲಿ ನಡೆಯಿತು.


ಬೆಳ್ಳಿ ಹಬ್ಬ ಕಾರ್ಯಕ್ರಮವನ್ನು ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಕೆ. ದೀಪ ಬೆಳಗಿಸಿ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಅಧ್ಯಕ್ಷೆ ಶ್ರೀಮತಿ ಶಾಲಿ ವಹಿಸಿದರು.

ಮುಖ್ಯ ಅತಿಥಿಗಳಾಗಿ ಕಪುಚಿನ್ ಕೃಷಿಕ ಸೇವಾ ಕೇಂದ್ರ ಅಧ್ಯಕ್ಷ ವಂ. ಫಾ. ಆಲ್ವಿನ್ ಡಾಯಸ್, ವಿಧಾನಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್, ಬೆಸ್ಟ್ ಫೌಂಡೇಶನ್ ಮುಖ್ಯಸ್ಥ ರಕ್ಷಿತ್ ಶಿವರಾಂ, ಮೂಡಬಿದಿರೆ ವಕೀಲರು ಶ್ರೀಮತಿ ಅಶ್ವಿನಿ ಡಿ.ಸೋಜಾ, ಸಿಕೆಎಸ್‌ಕೆ ನಿರ್ದೇಶಕ ವಂ. ಫಾ. ವಿನೋದ್ ಮಸ್ಕರೇನ್ಹಸ್ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಫಾ| ಅರುಣ್ ಲೋಬೋ, ಟ್ರಸ್ಟ್ ಉಪಾಧ್ಯಕ್ಷೆ ಶಶಿಕಲಾ, ಜೊತೆ ಕಾರ್ಯದರ್ಶಿ ಪ್ರಮೀಳಾ, ಖಜಾಂಜಿ ಶ್ರೀಮತಿ ಅನ್ನಮ್ಮ ವರ್ಗೀಸ್, ಶ್ರೀಮತಿ ಇಂದಿರಾ, ಶ್ರೀಮತಿ ಚೈತ್ರಾ, ಹಾಗೂ ಸಹ ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಮೆರಿನ್ ಸ್ವಾಗತಿಸಿ ಕಾಯ೯ದಶಿ೯ ರೈನಾ ಲೋಬೋ ವರದಿ ವಾಚಿಸಿದರು.

Related posts

ಎಸ್.ಡಿ.ಎಂ ಕಾಲೇಜು ಉಜಿರೆ : “ವಿಜ್ಞಾನ ಸಿಂಚನ -2026” ಅಂತರ್ ಕಾಲೇಜು ರಾಜ್ಯಮಟ್ಟದ ಉತ್ಸವಕ್ಕೆ ಚಾಲನೆ

Suddi Udaya

ಮಾ.4-6: ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ- ಹರೀಶ್ ಪೂಂಜ ಪತ್ರಿಕಾಗೋಷ್ಠಿ

Suddi Udaya

ಹೊಸಂಗಡಿ: ಹಿಂದೂ ರುದ್ರ ಭೂಮಿಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸಹಾಯಧನ

Suddi Udaya

ತೆಕ್ಕಾರು: ಬಾಜಾರು ಓಂ ರಾಮ್ ಫ್ರೆಂಡ್ಸ್ ಆಶ್ರಯದಲ್ಲಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಬೆಳ್ತಂಗಡಿ ವಿ.ಹಿಂ.ಪ ಬಜರಂಗದಳ ಪ್ರಖಂಡದ ವತಿಯಿಂದ ಬಕ್ರೀದ್ ಹಬ್ಬದ ಸಂದರ್ಭ ಗೋ ಹತ್ಯೆಯನ್ನು ಖಂಡಿಸಿ ಪೋಲಿಸ್ ಠಾಣೆ ಮತ್ತು ಗೋ ಆಸ್ಪತ್ರೆಯ ಅಧಿಕಾರಿಗಳಿಗೆ ಮನವಿ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಸಾಂತಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya
error: Content is protected !!